ಡಿಕೆ ಶಿವಕುಮಾರ್ online desk
ರಾಜ್ಯ

ಇನ್ನೆಷ್ಟು ದಿನ ಕಡಿಮೆ ಬೆಲೆಗೆ ನೀರು ನೀಡಲು ಸಾಧ್ಯ?: ಕಾವೇರಿ ನೀರಿನ ದರ ಏರಿಕೆ ಬಗ್ಗೆ DK Shivakumar ಸುಳಿವು

ನಗರದ ಕಾವೇರಿ ಭವನದಲ್ಲಿ ಬಿಬಿಎಂಪಿ, ಬಿಡಿಎ, ಬಿಡಬ್ಲ್ಯೂಎಸ್ಎಸ್‌ಬಿ, ಬಿಎಂಆರ್‌ಡಿಎ ಅಧಿಕಾರಿಗಳ ಜತೆ ಮಂಗಳವಾರ ಸಭೆ ನಡೆಸಿ ಬಳಿಕ ಮಾತನಾಡಿದ ಡಿಕೆ ಶಿವಕುಮಾರ್

ಬೆಂಗಳೂರು: ಬೆಂಗಳೂರಿಗೆ ಪೂರೈಕೆಯಾಗುತ್ತಿರುವ ಕಾವೇರಿ ನೀರಿನ ದರ ಏರಿಕೆಯ ಬಗ್ಗೆ ಜಲಸಂಪನ್ಮೂಲ ಸಚಿವ, ಡಿಸಿಎಂ ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ.

ನಗರದ ಕಾವೇರಿ ಭವನದಲ್ಲಿ ಬಿಬಿಎಂಪಿ, ಬಿಡಿಎ, ಬಿಡಬ್ಲ್ಯೂಎಸ್ಎಸ್‌ಬಿ, ಬಿಎಂಆರ್‌ಡಿಎ ಅಧಿಕಾರಿಗಳ ಜತೆ ಮಂಗಳವಾರ ಸಭೆ ನಡೆಸಿ ಬಳಿಕ ಮಾತನಾಡಿದ ಡಿಕೆ ಶಿವಕುಮಾರ್

ಏನೂ ಇಲ್ಲದೇ ಇನ್ನೆಷ್ಟು ದಿನ ಕಡಿಮೆ ಬೆಲೆಗೆ ನೀರು ನೀಡಲು ಆಗುತ್ತದೆ. ಮಂಡಳಿಯಲ್ಲಿ ನೌಕರರು ಸಂಬಳ ನೀಡಿಲ್ಲ ಎಂದು ಜಗಳ ಮಾಡುತ್ತಿದ್ದಾರೆ' ಜಲ ಮಂಡಳಿಗೆ 1 ಸಾವಿರ ಕೋಟಿ ರೂ. ನಷ್ಟವಾಗುತ್ತಿದೆ. ಚರ್ಚೆಯ ನಂತರ ಬೆಲೆ ಏರಿಕೆ ಬಗ್ಗೆ ತಿಳಿಸಲಾಗುವುದು. ಇದರ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಬಡವರು ಹೆಚ್ಚು ಹಣ ನೀಡಲು ಆಗದಿದ್ದರೆ ಒಂದು ಲೀಟರ್‌ಗೆ ಒಂದು ಪೈಸೆಯಾದರೂ ನೀಡಲಿ ಎಂಬುದು ನಮ್ಮ ಅಭಿಲಾಷೆ. ಇದರಿಂದ ನೀರಿನ ಬಳಕೆಯ ಲೆಕ್ಕ ದೊರೆಯಲಿ ಎನ್ನುವುದು ಇದರ ಉದ್ದೇಶ ವರದಿ ನೀಡಿದ ತಕ್ಷಣ ಅನುಷ್ಠಾನಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಿಸಿಎಂ ಹೇಳಿದ್ದಾರೆ.

2014 ರಿಂದ ಈ ವರೆಗೂ ನಗರದಲ್ಲಿ ಕಾವೇರಿ ನೀರಿನ ದರ ಹೆಚ್ಚಳ ಮಾಡಿಲ್ಲ. ಈ ಕಾರಣಕ್ಕೆ ಬೆಂಗಳೂರು ಜಲಮಂಡಳಿಗೆ ವರ್ಷಕ್ಕೆ 1 ಸಾವಿರ ಕೋಟಿ ರೂ. ನಷ್ಟ ಆಗುತ್ತಿದೆ. ವಿದ್ಯುತ್ ಬಿಲ್ ಈ ಹಿಂದೆ 35 ಕೋಟಿ ರೂ. ಆಗುತ್ತಿತ್ತು. ಈ ಬಾರಿ 75 ಕೋಟಿ ರೂ. ಆಗಿದೆ. ಇತರೇ ಸೇವೆಗಳು, ಮಾನವ ಸಂಪನ್ಮೂಲ ವೆಚ್ಚ ಸೇರಿದಂತೆ ತಿಂಗಳಿಗೆ 85 ಕೋಟಿ ಹಣ ನಷ್ಟವಾಗುತ್ತಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ನೀರಿನ ಜಾಲ ವಿಸ್ತರಣೆ ಮಾಡುವ ಸಲುವಾಗಿ ಅನೇಕ ಬ್ಯಾಂಕ್‌ಗಳ ಬಳಿ ಸಾಲ ಕೇಳಲೂ ಆಗುತ್ತಿಲ್ಲ. ಬ್ಯಾಂಕ್ ಅವರು ಮಂಡಳಿ ನಷ್ಟದಲ್ಲಿದೆ ನಾವು ಸಹಾಯ ಮಾಡಲು ಆಗುವುದಿಲ್ಲ ಎನ್ನುತ್ತಿದ್ದಾರೆ. ನಮಗೆ ಹಣ ನೀಡುತ್ತಿರುವ ಜೈಕಾ ಸಂಸ್ಥೆ ಸೇರಿ ಹಲವಾರು ಸಂಸ್ಥೆಗಳು ನೆರವು ಬೇಕು ಎಂದಾದರೆ ಹಣ ವಾಪಸಾತಿಯ ಬಗ್ಗೆ ಭರವಸೆ ನೀಡಿ ಎಂದು ತಿಳಿಸುತ್ತಿದ್ದಾರೆ ಡಿಕೆ ಶಿವಕುಮಾರ್ ವಿವರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT