ಜಿಟಿ ದೇವೇಗೌಡ 
ರಾಜ್ಯ

ಸಿದ್ದರಾಮಯ್ಯ ನಂತರ ಈಗ ಜಿಟಿ ದೇವೇಗೌಡ ಬುಡಕ್ಕೆ ಮುಡಾ ಹಗರಣ: JDS ಶಾಸಕನ ವಿರುದ್ಧ ಇಡಿ, ಲೋಕಾಯುಕ್ತಕ್ಕೆ ದೂರು!

ಜಿಟಿ ದೇವೇಗೌಡ ವಿರುದ್ಧವೂ ಸಹ ಅಕ್ರಮವಾಗಿ 50:50 ಅನುಪಾತದಲ್ಲಿ ಸುಮಾರು 19 ನಿವೇಶನಗಳನ್ನು ಪಡೆದುಕೊಂಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಮೈಸೂರು: ಮುಡಾ ನಿವೇಶನ ಹಂಚಿಕೆ ಅಕ್ರಮ ಕುರಿತಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿಕೃಷ್ಣ ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಹೋರಾಟ ನಡೆಸುತ್ತಿದ್ದು ಇದೀಗ ಜೆಡಿಎಸ್ ಶಾಸಕ ಜಟಿ ದೇವೇಗೌಡ ವಿರುದ್ಧ ಇಡಿ ಮತ್ತು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಜಿಟಿ ದೇವೇಗೌಡ ವಿರುದ್ಧವೂ ಸಹ ಅಕ್ರಮವಾಗಿ 50:50 ಅನುಪಾತದಲ್ಲಿ ಸುಮಾರು 19 ನಿವೇಶನಗಳನ್ನು ಪಡೆದುಕೊಂಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಜಿಟಿ ದೇವೇಗೌಡ ಅವರು ತಮ್ಮ ಸಹೋದರಿಯ ಮಗ ಮಹೇಂದ್ರ ಹೆಸರಿನಲ್ಲಿ ಬೇನಾಮಿಯಾಗಿ ಪರಿಹಾರ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

ದೇವನೂರು ಗ್ರಾಮದ ಗುಂಗ್ರಾಲ್ ಛತ್ರದ ಸರ್ವೆ ನಂ.81/2 ರಲ್ಲಿದ್ದ ಮಹೇಂದ್ರಗೆ ಸೇರಿದ 2.22 ಎಕರೆ ಭೂಮಿಯನ್ನು ಉಪಯೋಗಿಸಿಕೊಂಡಿರುವುದಾಗಿ ಮುಡಾ ಹೇಳಿಕೊಂಡಿದೆ. ಆದರೆ ಯಾವಾಗ ಆ ಭೂಮಿ ವಶಪಡಿಸಿಕೊಂಡು ಅಭಿವೃದ್ಧಿಪಡಿಸಲಾಗಿದೆ ಎನ್ನುವ ಮಾಹಿತಿ ಮಾತ್ರ ಇಲ್ಲ. ಅಷ್ಟೆ ಅಲ್ಲದೆ, ದೇವನೂರು ಗ್ರಾಮದ ಭೂಮಿಗೆ ವಿಜಯನಗರ 3ನೇ ಹಂತದಲ್ಲಿ ಬದಲಿ ನಿವೇಶನ ಮಂಜೂರು ಕೂಡ ಮಾಡಲಾಗಿದೆ. ಪ್ರೋತ್ಸಾಹದಾಯಕ ಯೋಜನೆಯಲ್ಲಿ ಸ್ವಇಚ್ಛೆಯಿಂದ ಭೂಮಿ ಬಿಟ್ಟುಕೊಟ್ಟಿದ್ದಾರೆ ಎಂದು ಕ್ರಯ ಪತ್ರದಲ್ಲಿ ನಮೂದು ಆಗಿದ್ದು, ಈ ಯೋಜನೆಗೆ ನೀಡಬೇಕಿರುವುದು ಕೇವಲ 2 ಸೈಟ್ ಗಳು ಮಾತ್ರ. ಅದರಂತೆ 4060 ಮತ್ತು 4030ರ 3600 ಚದರ ಅಡಿ ಮಾತ್ರ ಪರಿಹಾರವಾಗಿ ಸಿಗಬೇಕಾಗಿತ್ತು. ಆದರೆ, ಅವರಿಗೆ ಪರಿಹಾರವಾಗಿ 19 ನಿವೇಶನಗಳನ್ನು ನೀಡಲಾಗಿದೆ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT