ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಕನ್ನಡ ಮಾತನಾಡದ ಇಬ್ಬರು ಬಿಹಾರಿಗಳ ಮೇಲೆ ಚಾಕುವಿನಿಂದ ಹಲ್ಲೆ, ಮೂವರ ಬಂಧನ

ಚೂರಿ ಇರಿತದಿಂದ ಗಾಯಗೊಂಡಿರುವ ಮೇಸ್ತ್ರಿ ಹುಸೇನ್ ಕೋರಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲೆಕ್ಟ್ರಿಷಿಯನ್ ಆಗಿದ್ದ ಅಮೀರ್ ಚಿಕಿತ್ಸೆ ಬಳಿಕ ಡಿಸ್ಚಾರ್ಜ್ ಆಗಿದ್ದಾರೆ.

ಬೆಂಗಳೂರು: ಕನ್ನಡ ಮಾತನಾಡದ ಇಬ್ಬರು ಬಿಹಾರಿಗಳ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ಆಡುಗೋಡಿ ಪೊಲೀಸ್‌ ವ್ಯಾಪ್ತಿಯ ಲಕ್ಕಸಂದ್ರ ಎಕ್ಸ್‌ಟೆನ್ಶನ್‌ನಲ್ಲಿ ಕಳೆದ ಬುಧವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಹಲ್ಲೆಗೊಳಗಾದವರನ್ನು ಎಂಡಿ ಹಸ್ಮತ್ ಹುಸೇನ್ (21) ಮತ್ತು ಎಂಡಿ ಅಮೀರ್ (19) ಎಂದು ಗುರುತಿಸಲಾಗಿದೆ. ಇಬ್ಬರು ಲಕ್ಕಸಂದ್ರ ಎಕ್ಸ್‌ಟೆನ್ಶನ್ ನಿವಾಸಿಗಳಾಗಿದ್ದಾರೆ.

ಚೂರಿ ಇರಿತದಿಂದ ಗಾಯಗೊಂಡಿರುವ ಮೇಸ್ತ್ರಿ ಹುಸೇನ್ ಕೋರಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲೆಕ್ಟ್ರಿಷಿಯನ್ ಆಗಿದ್ದ ಅಮೀರ್ ಚಿಕಿತ್ಸೆ ಬಳಿಕ ಡಿಸ್ಚಾರ್ಜ್ ಆಗಿದ್ದಾರೆ.

ಪಾನಮತ್ತರಾಗಿ ಆಟೋರಿಕ್ಷಾದಲ್ಲಿ ಬಂದ ಆರೋಪಿಗಳು ಹುಸೇನ್ ಮತ್ತು ಅಮೀರ್ ಅವರನ್ನು ಸಂಪರ್ಕಿಸಿ ವಿಳಾಸ ಕೇಳಿದ್ದಾರೆ. ಹಿಂದಿಯಲ್ಲಿ ವಿಳಾಸ ಹೇಳಿದ್ದಕ್ಕೆ ಕನ್ನಡದಲ್ಲಿ ಹೇಳುವಂತೆ ಒತ್ತಾಯಿಸಿದ್ದಾರೆ. ಈ ವೇಳೆ ಹುಸೇನ್ ಮತ್ತು ಅಮೀರ್ ಅವರಿಗೆ ಕನ್ನಡ ಬರುವುದಿಲ್ಲ ಎಂದು ಹೇಳಿದಾಗ, ಮೂವರು ಅವರ ಮೇಲೆ ಹಲ್ಲೆ ಮಾಡಲು ಆಂಭಿಸಲಿದ್ದಾರೆ. ಬಳಿಕ ಆರೋಪಿಗಳಿಂದ ಇಬ್ಬರು ತಪ್ಪಿಸಿಕೊಳ್ಳಲು ಯತ್ನಿಸಿ, ಓಡಲು ಪ್ರಾರಂಭಿಸಿದ್ದು, ಈ ವೇಳೆ ಕೆಳಗೆ ಬಿದ್ದ ಹುಸೇನ್ ಮೇಲೆ ಆರೋಪಿಗಳು ಚಾಕುವಿನಿಂದ ಇರಿದಿದ್ದಾರೆ.

ಲಕ್ಕಸಂದ್ರದಲ್ಲಿ ರಾತ್ರಿ 11.05 ರಿಂದ 11.35 ರ ನಡುವೆ ಘಟನೆ ನಡೆದಿದೆ. ಹುಸೇನ್ ಮೂರು ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದು, ಕಳೆದ ವರ್ಷ ಅಮೀರ್ ನಗರಕ್ಕೆ ಬಂದಿದ್ದರು.

ನಾನು ಮತ್ತು ಹುಸೇನ್ ಇತರ ಮೂವರೊಂದಿಗೆ ಜ್ಯೂಸ್ ಸೆಂಟರ್‌ನಲ್ಲಿದ್ದೆವು. ಈ ವೇಳೆ ಆಟೋರಿಕ್ಷಾದಲ್ಲಿ ಬಂದ ಆರೋಪಿಗಳು ಕನ್ನಡದಲ್ಲಿ ವಿಳಾಸ ಕೇಳಿದರು. ನಮಗೆ ಕನ್ನಡ ಬರುವುದಿಲ್ಲ ಎಂದು ಹುಸೇನ್ ಹೇಳಿದಾಗ. ಆರೋಪಿಗಳು ಮೇಲೆ ಹಲ್ಲೆ ನಡೆಸಿದರು. ಬಳಿಕ ಸ್ನೇಹಿತರು ನಮ್ಮನ್ನು ಆಸ್ಪತ್ರೆಗೆ ದಾಖಲಿಸಿದರು ಎಂದು ಅಮೀರ್ ದೂರಿನಲ್ಲಿ ಹೇಳಿಕೊಂಡಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸುತ್ತಮುತ್ತಲಿನ ಸಿಸಿಟಿವಿಗಳ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. ಹಲ್ಲಗೊಳಗಾದವರೂ ಕೂಡ ಆರೋಪಿಗಳನ್ನು ಗುರುತಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಬಿಎನ್‌ಎಸ್‌ನ ಇತರ ಸೆಕ್ಷನ್‌ಗಳ ಜೊತೆಗೆ ಕೊಲೆ ಯತ್ನದ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT