ಸಂಗ್ರಹ ಚಿತ್ರ 
ರಾಜ್ಯ

ಬ್ಯಾಂಕ್‌ಗಳಲ್ಲಿ ಕನ್ನಡಿಗರ ಸಂಖ್ಯೆಯಲ್ಲಿ ಕುಸಿತ: KDA ಕಳವಳ

ಆಡಳಿತದಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡುವ ಮೂಲಕ, ಬ್ಯಾಂಕ್‌ಗಳು ಜನಸ್ನೇಹಿಯಾಗಬೇಕು.

ಬೆಂಗಳೂರು: ಬ್ಯಾಂಕ್‌ಗಳಲ್ಲಿ ಆಡಳಿತಾತ್ಮಕವಾಗಿ ಕೆಲಸ ಮಾಡುವ ಕನ್ನಡಿಗರ ಸಂಖ್ಯೆ ನಿರಂತರವಾಗಿ ಕಡಿಮೆಯಾಗುತ್ತಿದ್ದು, ಇದು ಭವಿಷ್ಯದಲ್ಲಿ ಸಾಮಾಜಿಕ ಸಂಘರ್ಷಗಳಿಗೆ ಕಾರಣವಾಗಬಹುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಎಚ್ಚರಿಸಿದ್ದಾರೆ.

ರಾಜ್ಯ ಮಟ್ಟದ ಬ್ಯಾಂಕರ್‌ಗಳ ಸಮಿತಿಯ ಅಧಿಕಾರಿಗಳೊಂದಿಗೆ ಮಂಗಳವಾರ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಬ್ಯಾಂಕುಗಳು ಸಾರ್ವಜನಿಕ ಸಂಪರ್ಕ ವಿಭಾಗಗಳಲ್ಲಿ ಸ್ಥಳೀಯ ಭಾಷೆ ಬಲ್ಲವರನ್ನು ನೇಮಿಸುವುದು ಬಹಳ ಮುಖ್ಯವಾಗಿದ್ದು, ಇದು ವಿಳಂಬವಾದಲ್ಲಿ ನಾಡಿನೆಲ್ಲೆಡೆ ಸಾಮಾಜಿಕ ಸಂಘರ್ಷ ಆರಂಭವಾಗಲಿದೆ ಎಂದು ಹೇಳಿದರು,

ಆಡಳಿತದಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡುವ ಮೂಲಕ, ಬ್ಯಾಂಕ್‌ಗಳು ಜನಸ್ನೇಹಿಯಾಗಬೇಕು. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲ ಬ್ಯಾಂಕ್‌ಗಳ ಪ್ರತಿನಿಧಿಗಳೊಂದಿಗೆ ಶೀಘ್ರದಲ್ಲೆ ಸಭೆ ನಡೆಸಿ, ಸೂಚನೆಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

‘ಬ್ಯಾಂಕ್‌ಗಳಲ್ಲಿನ ಹೊರ ಗುತ್ತಿಗೆ ನೇಮಕಾತಿಗಳಲ್ಲಿ ಕನ್ನಡಿಗರಿಗೆ ಅವಕಾಶ ಕಲ್ಪಿಸುವುದು ಅತ್ಯಗತ್ಯ. ಈ ಕುರಿತಂತೆ ಟೆಂಡರ್‌ ನಿಯಮಗಳಲ್ಲಿ ಸ್ಪಷ್ಟವಾಗಿ ಷರತ್ತುಗಳನ್ನು ವಿಧಿಸಬೇಕು. ಹೊಸದಾಗಿ ನೇಮಕವಾಗುವ ಸಿಬ್ಬಂದಿಗೆ ಸ್ಥಳೀಯ ಭಾಷೆಯನ್ನು ಬೋಧಿಸಲು ಬ್ಯಾಂಕ್‌ಗಳ ತರಬೇತಿ ಕೇಂದ್ರಗಳಲ್ಲಿ ಕನ್ನಡ ಪಠ್ಯಕ್ರಮವನ್ನು ಅಳವಡಿಸಿಕೊಳ್ಳಲು ಕ್ರಮವಹಿಸಬೇಕು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT