ಹೈಕೋರ್ಟ್ 
ರಾಜ್ಯ

ನ್ಯಾಯಾಲಯದ ಮೂಲಕ ಜೀವನಾಂಶ ಪಡೆಯುವುದು ಸುಲಿಗೆಯಲ್ಲ: ಹೈಕೋರ್ಟ್

ಅರ್ಜಿದಾರರು 2007 ರಲ್ಲಿ ವಿವಾಹವಾಗಿದ್ದು, ಫೇಸ್‌ಬುಕ್ ಮೂಲಕ ಬಂದ ಸಂದೇಶದ ಮೂಲಕ ಇಬ್ಬರ ನಡುವಿನ ಸಂಬಂಧ ಹಾಳಾಗಿತ್ತು.

ಬೆಂಗಳೂರು: ನ್ಯಾಯಾಲಯದ ಆದೇಶದ ಮೂಲಕ ಜೀವನಾಂಶ ಪಡೆಯುವುದು ಸುಲಿಗೆಗೆ ಸಮವಲ್ಲ ಎಂದು ಹೈಕೋರ್ಟ್ ಹೇಳಿದ್ದು, ತನ್ನ ಪತ್ನಿಯ ವಿರುದ್ಧ ವ್ಯಕ್ತಿಯೊಬ್ಬ ಮಾಡಿದ್ದ ಸುಲಿಗೆ ಮತ್ತು ಇತರ ಆರೋಪಗಳನ್ನು ರದ್ದುಗೊಳಿಸಿದೆ.

2023ರಲ್ಲಿ ಮಂಗಳೂರು ಮತ್ತು ಬೆಂಗಳೂರು ಮೂಲದ ದಂಪತಿಗಳು ಸಲ್ಲಿಸಿದ ಅರ್ಜಿಗಳನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ನ್ಯಾಯಬೀಠ ಪುರಸ್ಕರಿಸಿದ್ದು, ಪತ್ನಿಯೊಬ್ಬಳು ಜೀವನಾಂಶಕ್ಕಾಗಿ ನ್ಯಾಯಾಲಯದ ಮೊರೆ ಹೋದಾಗ, ನ್ಯಾಯಾಲಯ ಅದನ್ನು ಪರಿಗಣಿಸಿದಾಗ ಅದು ಸುಲಿಗೆಯ ಅಪರಾಧವಾಗುವುದಿಲ್ಲ. ಇದು ಕಾನೂನು ಪ್ರಕ್ರಿಯೆಗಳಾಗಿದ್ದು, ಉನ್ನತ ನ್ಯಾಯಾಲಯವು ಅದನ್ನು ಬದಲಾಯಿಸದಿದ್ದರೆ ಅಥವಾ ಮಾರ್ಪಡಿಸದಿದ್ದರೆ ಜೀವನಾಂಶ ಪಾವತಿಸಲು ಪತಿ ಕಾನೂನುಬದ್ಧವಾಗಿ ಬದ್ಧನಾಗಿರುತ್ತಾನೆ ಎಂದು ಹೇಳಿದೆ.

ಅರ್ಜಿದಾರರು 2007 ರಲ್ಲಿ ವಿವಾಹವಾಗಿದ್ದು, ಫೇಸ್‌ಬುಕ್ ಮೂಲಕ ಬಂದ ಸಂದೇಶದ ಮೂಲಕ ಇಬ್ಬರ ನಡುವಿನ ಸಂಬಂಧ ಹಾಳಾಗಿತ್ತು. 2020ರಲ್ಲಿ ಫೇಸ್‌ಬುಕ್ ಮೂಲಕ ಸಂದೇಶವೊಂದು ಬಂದಿದ್ದು, ನಿನ್ನ ಪತ್ನಿ ಮಾಜಿ ಗೆಳೆಯನೊಂದಿಗೆ ಸಂಬಂಧ ಹೊಂದಿದ್ದಾಳೆಂದು ತಿಳಿಸಲಾಗಿದ್ದು. ಇದರಿಂದ ದಂಪತಿಗಳ ನಡುವಿನ ಸಂಬಂಧ ಹಾಳಾಗಿತ್ತು.

ಈ ನಡುವೆ ಪತ್ನಿ ತನ್ನ ಪತಿ ವಿರುದ್ಧ ಕೌಟುಂಬಿಕ ದೌರ್ಜನ್ಯ ಮತ್ತಿತರ ಆರೋಪದ ಮೇಲೆ ದೂರು ದಾಖಲಿಸಿದ್ದಳು. ಬಳಿಕ ಪತಿ ಕೂಡ ಪತ್ನಿ ವಿರುದ್ಧ ಸುಲಿಗೆ ಆರೋಪ ಸೇರಿದಂತೆ ಇತರೆ ಆರೋಪಗಳನ್ನು ಮಾಡಿ ದೂರು ದಾಖಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

SCROLL FOR NEXT