ಡಾ ಜಿ ಪರಮೇಶ್ವರ್  
ರಾಜ್ಯ

ಮೈಕ್ರೋಫೈನಾನ್ಸ್ ಸಂಸ್ಥೆಗಳ ಕುರಿತು ಕರಡು ಸುಗ್ರೀವಾಜ್ಞೆ ತರಲು ಸಭೆ: ಸಚಿವ ಡಾ ಜಿ ಪರಮೇಶ್ವರ್

ಸಾಲಗಾರರಿಗೆ ಸಹಾಯವಾಣಿ ಸಂಖ್ಯೆಯನ್ನು ಒದಗಿಸುತ್ತೇವೆ. ನಮ್ಮ ಕರಡು ಸುಗ್ರೀವಾಜ್ಞೆಯಲ್ಲಿ, ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡಲಿದ್ದು, ಒಂದು ವಿಭಾಗವನ್ನು ರಚಿಸಲು ಶಿಫಾರಸು ಮಾಡಲಿದ್ದೇವೆ ಎಂದರು.

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಸಾಲ ಪಡೆಯುವವರ ಹಿತಾಸಕ್ತಿಗಳನ್ನು ರಕ್ಷಿಸಲು ಕರಡು ಸುಗ್ರೀವಾಜ್ಞೆ ತರಲು ಇಂದು ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ತಿಳಿಸಿದ್ದಾರೆ.

ಕರಡನ್ನು ಅಂತಿಮಗೊಳಿಸಿದ ನಂತರ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು. ಶೀಘ್ರದಲ್ಲೇ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಕಳುಹಿಸಲಾಗುವುದು ಎಂದು ಹೇಳಿದರು. ಇಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್, ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತು ನಾನು ಸಭೆಯಲ್ಲಿ ಭಾಗವಹಿಸಲಿದ್ದೇವೆ. ಕರಡು ಸುಗ್ರೀವಾಜ್ಞೆಯನ್ನು ಚರ್ಚಿಸಿ ಅಂತಿಮಗೊಳಿಸುತ್ತೇವೆ ಎಂದು ಬೆಂಗಳೂರಿನಲ್ಲಿಂದು ಸುದ್ದಿಗಾರರಿಗೆ ತಿಳಿಸಿದರು.

ಈ ಮಧ್ಯೆ, ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿಯನ್ನು ನಿಯಂತ್ರಿಸಲು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ. ಸಾಲಗಾರರಿಗೆ ಸಹಾಯವಾಣಿ ಸಂಖ್ಯೆಯನ್ನು ಒದಗಿಸುತ್ತೇವೆ. ನಮ್ಮ ಕರಡು ಸುಗ್ರೀವಾಜ್ಞೆಯಲ್ಲಿ, ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡಲಿದ್ದು, ಒಂದು ವಿಭಾಗವನ್ನು ರಚಿಸಲು ಶಿಫಾರಸು ಮಾಡಲಿದ್ದೇವೆ ಎಂದರು.

ಮೈಕ್ರೋಫೈನಾನ್ಸ್ ಕಂಪನಿಗಳ ಹಾವಳಿ ಮುಂದುವರಿದಿದ್ದು, ಸಾಲಗಾರರಿಂದ ಹಣವನ್ನು ವಸೂಲಿ ಮಾಡಲು ಹೊರಗುತ್ತಿಗೆ ನೀಡಿದ್ದಾರೆ. ಹೊರಗುತ್ತಿಗೆ ಸಂಸ್ಥೆಗಳು ರೌಡಿಗಳಂತೆ ವರ್ತಿಸುತ್ತವೆ, ಇದನ್ನು ಮಾಡಬಾರದು. ನಾವು ಮೈಕ್ರೋಫೈನಾನ್ಸ್ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಪರಮೇಶ್ವರ್ ಹೇಳಿದರು.

ಸುಗ್ರೀವಾಜ್ಞೆಯನ್ನು ಇಂದು ಯಾವಾಗ ಅಂತಿಮಗೊಳಿಸಿ ಜಾರಿಗೆ ತರಲಾಗುತ್ತದೆ ಎಂಬ ಪ್ರಶ್ನೆಗೆ, ಕರಡನ್ನು ಇಂದು ಅಂತಿಮಗೊಳಿಸಿದರೆ, ಅದನ್ನು ನಾಳೆಯೇ ಸಂಪುಟದಲ್ಲಿ ಮಂಡಿಸಲಾಗುವುದು ಎಂದು ಹೇಳಿದರು.

ಮೈಕ್ರೋಫೈನಾನ್ಸ್ ಕಂಪನಿಗಳು ಸಾಲಗಾರರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ತುರ್ತು ಸಭೆ ಕರೆದಿದ್ದರು. ಸಾಲಗಾರರಿಗೆ ಕಿರುಕುಳ ನೀಡದಂತೆ ಮೈಕ್ರೋಫೈನಾನ್ಸ್ ಕಂಪನಿಗಳಿಗೆ ಎಚ್ಚರಿಕೆ ನೀಡಿದ್ದರು.

ಮುಖ್ಯಮಂತ್ರಿಯವರ ಪ್ರಕಾರ, ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಕಂಪನಿಗಳ ವಿರುದ್ಧ ಏಳು ಪ್ರಕರಣಗಳು ದಾಖಲಾಗಿವೆ.

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

ತುಮಕೂರು ಬಳಿ ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಾಧ್ಯತೆಯ ಕುರಿತು, ಉತ್ತರ ಕರ್ನಾಟಕದ ಪ್ರಯಾಣಿಕರಿಗೆ ಸಹಾಯವಾಗುವ ಕಾರಣ ಹೊಸ ವಿಮಾನ ನಿಲ್ದಾಣವನ್ನು ತಮ್ಮ ತವರು ಜಿಲ್ಲೆಯಲ್ಲಿ ಬಂದರೆ ಉತ್ತಮ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು; ಪ್ರತಿಪಕ್ಷಗಳಿಗೆ ಮುಖಭಂಗ

ತೈಲ ಪೂರೈಕೆಗೆ ರಿಯಾಯಿತಿ ಸ್ಥಗಿತ ಬೆನ್ನಲ್ಲೇ ಎಚ್ಚೆತ್ತ ಭಾರತ; ರಷ್ಯಾ ವಿದೇಶಾಂಗ ಸಚಿವರಿಗೆ ಜೈಶಂಕರ್ ದೂರವಾಣಿ ಕರೆ; ಮಹತ್ವದ ಚರ್ಚೆ!

IPL 2026: ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಉದ್ಘಾಟನಾ ಪಂದ್ಯ; ಮಾರ್ಚ್ 28 ರಂದು RCB vs SRH

'ರಕ್ಷಿತ್ ಶೆಟ್ಟಿ-ರಶ್ಮಿಕಾ ನಿಶ್ಚಿತಾರ್ಥ ಮುರಿದುಬೀಳಲು ಇದೇ ಕಾರಣ': ತಾಯಿ ಸುಮನ್ ಮಂದಣ್ಣರದ್ದು ಎನ್ನಲಾದ ಆಡಿಯೋ ವೈರಲ್!

ಗಲ್ಫ್‌ನಲ್ಲಿ ಸಿಲುಕಿರುವ ಭಾರತೀಯರಿಗೆ ಪ್ರಧಾನಿ ಮೋದಿ ಸಹಾಯದ ಭರವಸೆ; ಕೊಚ್ಚಿಯಲ್ಲಿ 'ವಿಕ್ಸಿತ್ ಕೇರಳಂ'ಗೆ ಚಾಲನೆ

SCROLL FOR NEXT