ಗಂಗರ ಶಿಲಾ ಶಾಸನ  
ರಾಜ್ಯ

ಬೆಂಗಳೂರು ಗ್ರಾಮಾಂತರ: ದೇವಾಲಯ ಜಾಗದಲ್ಲಿದ್ದ 5ನೇ ಶತಮಾನದ ಗಂಗರ ಶಿಲಾ ಶಾಸನ ನಾಪತ್ತೆ!

ಶಾಸನದಲ್ಲಿ ಸಂಸ್ಕೃತವನ್ನು ಕನ್ನಡ ಲಿಪಿಯಲ್ಲಿ ಬರೆಯಲಾಗಿತ್ತು. ಅದರಲ್ಲಿ 20 ಸಾಲುಗಳ ಶ್ಲೋಕಗಳಿದ್ದವು. ಈ ಶಾಸನದಲ್ಲಿ ಅತ್ಯಂತ ಮಹತ್ವ ಪೂರ್ಣ ವಿಷಯ ದಾಖಲಿಸಲಾಗಿತ್ತು. ಇದನ್ನು ಕಳೆದ ವರ್ಷ ಪ್ರಕಟಿಸಲಾಗಿತ್ತು. ಇದನ್ನು ಮಿಥಿಕ್ ಸೊಸೈಟಿ ನವರು ಸ್ಕ್ಯಾನಿಂಗ್ ಮಾಡಿಕೊಂಡಿದ್ದಾರೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಕನಸವಾಡಿ ಗ್ರಾಮದ ದೇವಸ್ಥಾನದ ಜಾಗದಲ್ಲಿದ್ದ 5ನೇ ಶತಮಾನದ ಗಂಗ ರಾಜವಂಶದ ಶಿಲಾ ಶಾಸನವೊಂದು ನಾಪತ್ತೆಯಾಗಿರುವ ಬಗ್ಗೆ ಇತಿಹಾಸಕಾರರು, ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

ಗಂಗ ಅರಸರು ನೀಡಿದ ದೇಣಿಗೆಯ ಬಗ್ಗೆ ಹೇಳುವ ಶಿಲಾ ಶಾಸನ ನಾಪತ್ತೆಯಾಗಿದೆ ಎಂದು ಕರ್ನಾಟಕ ಇತಿಹಾಸ ಅಕಾಡೆಮಿಯ ಸದಸ್ಯರು, ಶಿಲಾ ಶಾಸನ ಮತ್ತು ವೀರಗಲ್ಲುಗಳನ್ನು ಅಧ್ಯಯನ ಮಾಡುವ ಸಂಶೋಧಕರು ಹೇಳಿದ್ದಾರೆ. ಶಿಲಾ ಶಾಸನವನ್ನು ನಾಶಪಡಿಸಿ, ದೇವಾಲಯಕ್ಕೆ ಹೊಂದಿಕೊಂಡಂತೆ ಕಾಂಪೌಂಡ್ ಗೋಡೆ ನಿರ್ಮಾಣಕ್ಕೆ ಬಳಸಲಾಗಿದೆ ಎಂದು ಆರೋಪಿಸಿದ್ದಾರೆ.

ಈ ಕುರಿತು ಮಾತನಾಡಿದ ಸಂಶೋಧಕ ಹಾಗೂ ಅಕಾಡೆಮಿ ಸದಸ್ಯ ಮಧುಸೂಧನ್ ಕೆ.ಆರ್. ಅಧ್ಯಯನದ ಸಮಯದಲ್ಲಿ ಗ್ರಾಮದಲ್ಲಿ ಕಲ್ಲಿನ ಶಾಸನ ಇರುವುದನ್ನು ತಿಳಿದುಬಂದಿತ್ತು. ನಂತರ ಗ್ರಾಮಸ್ಥರ ಅದರ ಮಹತ್ವವನ್ನು ತಿಳಿಸಿ, ಅದನ್ನು ರಕ್ಷಿಸಬೇಕಾದ ಅಗತ್ಯತೆಯನ್ನು ಹೇಳಿದ್ದೆ. ಅದನ್ನು ಮ್ಯೂಸಿಯಂಗೆ ಸ್ಥಳಾಂತರಿಸುವಂತೆಯೂ ಸೂಚಿಸಿದ್ದೆ. ಗ್ರಾಮಸ್ಥರು ಕೂಡಾ ಅದನ್ನು ರಕ್ಷಿಸುವುದಾಗಿ ಭರವಸೆ ನೀಡಿದ್ದರು. ಮೂರು ದಿನಗಳ ಹಿಂದೆ ಹೆಚ್ಚಿನ ಅಧ್ಯಯನಕ್ಕಾಗಿ ಮತ್ತೊಮ್ಮೆ ಶಾಸನದ ಛಾಯಾಚಿತ್ರ ತೆಗೆಯಲು ಸ್ಥಳಕ್ಕೆ ಹೋದಾಗ ಅದು ಕಾಣೆಯಾಗಿತ್ತು ತಿಳಿಸಿದರು.

ಶಾಸನದಲ್ಲಿ ಸಂಸ್ಕೃತವನ್ನು ಕನ್ನಡ ಲಿಪಿಯಲ್ಲಿ ಬರೆಯಲಾಗಿತ್ತು. ಅದರಲ್ಲಿ 20 ಸಾಲುಗಳ ಶ್ಲೋಕಗಳಿದ್ದವು. ಈ ಶಾಸನದಲ್ಲಿ ಅತ್ಯಂತ ಮಹತ್ವ ಪೂರ್ಣ ವಿಷಯ ದಾಖಲಿಸಲಾಗಿತ್ತು. ಇದನ್ನು ಕಳೆದ ವರ್ಷ ಪ್ರಕಟಿಸಲಾಗಿತ್ತು. ಇದನ್ನು ಮಿಥಿಕ್ ಸೊಸೈಟಿ ನವರು ಸ್ಕ್ಯಾನಿಂಗ್ ಮಾಡಿಕೊಂಡಿದ್ದಾರೆ. ಪೂರ್ಣ ಪ್ರಮಾಣದಲ್ಲಿ ಶೋಧನೆ ಆಗಿರಲಿಲ್ಲ. ಅದಾಗಲೇ ನಾಶ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಅಕಾಡೆಮಿ ಅಧ್ಯಕ್ಷ ದೇವರ ಕುಂದ ರೆಡ್ಡಿ ಮಾತನಾಡಿ, ‘ರಾಜ್ಯ ಪುರಾತತ್ವ ಇಲಾಖೆ ಇಂತಹ ಮಹತ್ವದ ಶಾಸನ ಮತ್ತು ನಿವೇಶನದತ್ತ ಗಮನ ಹರಿಸದಿರುವುದು ವಿಷಾದನೀಯ. ಇದು ರಾಜ್ಯ ಮತ್ತು ದೇಶದ ಇತಿಹಾಸದ ಒಂದು ಭಾಗವಾಗಿದೆ, ಅದು ಈಗ ಕಳೆದುಹೋಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಎಲ್ಲಾ ಸ್ಥಳಗಳು ಮತ್ತು ಶಾಸನಗಳ ರಕ್ಷಣೆ ರಾಜ್ಯ ಮತ್ತು ಜನರ ನೈತಿಕ ಜವಾಬ್ದಾರಿಯಾಗಿದೆ ಎಂದು ಪುರಾತತ್ವ, ವಸ್ತುಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಆಯುಕ್ತ ದೇವರಾಜು ಎ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು. ಈ ಬಗ್ಗೆ ವಿಸ್ತೃತ ವರದಿ ಪಡೆದು ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಂಕಿತ ದಾಳಿಕೋರ 'ನರಕ ದೇಶ' ಆಫ್ಘಾನಿಸ್ತಾನದಿಂದ ಬಂದವನು, ಇದು ಭಯೋತ್ಪಾದಕ ಕೃತ್ಯ: ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

ಇದು ಜೈಲಲ್ಲ, ಮದ್ಯದ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

ಮೊದಲು ಪರಮೇಶ್ವರ್ ಕೂಲಿ ಚುಕ್ತಾ ಮಾಡಲಿ: ನಂತರ ವಿಧಾನಸಭೆ ವಿಸರ್ಜಿಸಿ ಡಿಕೆಶಿ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ!

SCROLL FOR NEXT