ಕೃಷ್ಣ ಬೈರೇಗೌಡ 
ರಾಜ್ಯ

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ: ಸಂತ್ರಸ್ತರ ಮೃತದೇಹಗಳು ಇಂದು ಸಂಜೆ ರಾಜ್ಯಕ್ಕೆ- ಸಚಿವ ಕೃಷ್ಣ ಬೈರೇಗೌಡ

ಬುಧವಾರದ ಮುಂಜಾನೆ ಸಂಭವಿಸಿದ ದುರಂತದಲ್ಲಿ 30 ಮಂದಿ ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ.

ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಬೆಳಗಾವಿಯ ನಾಲ್ವರು ಮೃತಪಟ್ಟಿದ್ದು, ಸಂತ್ರಸ್ತರ ಮೃತದೇಹಗಳನ್ನು ಇಂದು ಸಂಜೆ ರಾಜ್ಯಕ್ಕೆ ತರಲಾಗುವುದು. ಈ ಸಂಬಂಧ ಹಿರಿಯ ಅಧಿಕಾರಿಗಳು ಸಮನ್ವಯ ಸಾಧಿಸುತ್ತಿದ್ದಾರೆ ಎಂದು ಸಚಿವ ಕೃಷ್ಣ ಬೈರೇಗೌಡ ಗುರುವಾರ ಹೇಳಿದ್ದಾರೆ.

'ಐಪಿಎಸ್ ಅಧಿಕಾರಿ ಹರಿರಾಮ್ ಶಂಕರ್ ಅವರು ಕುಂಭಮೇಳದಿಂದ ನಾಲ್ವರ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ತರುವ ವಿಚಾರವಾಗಿ ಅಲ್ಲಿನ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ. ಎರಡು ಆಂಬ್ಯುಲೆನ್ಸ್‌ಗಳಲ್ಲಿ ದೆಹಲಿಯತ್ತ ಮೃತದೇಹಗಳನ್ನು ಕೊಂಡೊಯ್ಯಲಾಗುತ್ತಿದೆ. ಬೆಳಗಾವಿಯ ವಿಶೇಷ ಡಿಸಿ ಹರ್ಷ ದೆಹಲಿಯತ್ತ ತೆರಳಿದ್ದು, ಸಂಜೆ ವೇಳೆಗೆ ಪಾರ್ಥಿವ ಶರೀರದೊಂದಿಗೆ ಬೆಳಗಾವಿ ತಲುಪಲಿದ್ದಾರೆ' ಎಂದು ಸುದ್ದಿಸಂಸ್ಥೆ ಎಎನ್‌ಐಗೆ ತಿಳಿಸಿದರು.

'ಪಾರ್ಥೀವ ಶರೀರ ಮತ್ತು ನಾಲ್ವರು ಕುಟುಂಬ ಸದಸ್ಯರು ಹಾಗೂ ಅಧಿಕಾರಿಗಳಿಗಾಗಿ ದೆಹಲಿಯಲ್ಲಿ ಮಧ್ಯಾಹ್ನ 3:20ಕ್ಕೆ ಇಂಡಿಗೋ ವಿಮಾನದ ವ್ಯವಸ್ಥೆ ಮಾಡಲಾಗಿದೆ. ಸದ್ಯಕ್ಕೆ, ಯಾವುದೇ ಇತರ ಗಾಯಾಳುಗಳು ಆಸ್ಪತ್ರೆಗೆ ದಾಖಲಾಗಿರುವ ಕುರಿತು ವರದಿಯಾಗಿಲ್ಲ. ಆದಾಗ್ಯೂ, ಯಾವುದೇ ಗಾಯಾಳುಗಳು ಇದ್ದರೆ ಪತ್ತೆ ಮಾಡಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರದ ನೋಡಲ್ ಅಧಿಕಾರಿ ಹರ್ಷಲ್ ಬೋಯಾರ್ ಅವರಿಗೆ ಸೂಚಿಸಲಾಗಿದೆ' ಎಂದು ಅವರು ಹೇಳಿದರು.

ಬೆಳಗಾವಿಯ ಕನಿಷ್ಠ ನಾಲ್ವರು ಭಕ್ತರು ಕಾಲ್ತುಳಿತದಲ್ಲಿ ಸಾವಿಗೀಡಾಗಿದ್ದಾರೆ ಎಂದು ಕರ್ನಾಟಕ ಪೊಲೀಸರು ಬುಧವಾರ ಸ್ಪಷ್ಟಪಡಿಸಿದ್ದಾರೆ. ಬುಧವಾರದ ಮುಂಜಾನೆ ಸಂಭವಿಸಿದ ದುರಂತದಲ್ಲಿ 30 ಮಂದಿ ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT