ಆರೋಪಿ ಮುಬಿನ್  
ರಾಜ್ಯ

ರಾಯಚೂರು: ಹಾಡುಹಗಲೇ ಕಾಲೇಜು ಹುಡುಗಿಯ ಕತ್ತು ಸೀಳಿ ಬರ್ಬರ ಹತ್ಯೆ; ಆರೋಪಿ ಮುಬಿನ್ ಬಂಧನ

ಸಿಂಧನೂರು ಸರ್ಕಾರಿ ಕಾಲೇಜಿನಲ್ಲಿ ಎಂಎಸ್​ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ಜಿಲ್ಲೆಯ ಸಿಂಧನೂರಿನ ಹೊರ ಭಾಗದಲ್ಲಿ ನಡೆದಿದೆ.

ರಾಯಚೂರು: ಸಿಂಧನೂರು ಸರ್ಕಾರಿ ಕಾಲೇಜಿನಲ್ಲಿ ಎಂಎಸ್​ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ಜಿಲ್ಲೆಯ ಸಿಂಧನೂರಿನ ಹೊರ ಭಾಗದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು 24 ವರ್ಷದ ಶಿಫಾ ಅಬ್ದುಲ್ ವಾಹೀದ್ ಎಂದು ಗುರುತಿಸಲಾಗಿದೆ. ಆರೋಪಿ ಮುಬಿನ್ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಕಾಲೇಜಿಗೆ ತೆರಳುತ್ತಿದ್ದ ಶಿಫಾಳನ್ನು ಮಾತನಾಡಬೇಕೆಂದು ಕರೆದಿದ್ದಾನೆ. ಈ ವೇಳೆ ವಿದ್ಯಾರ್ಥಿನಿ ಕಾಲೇಜಿಗೆ ಹೋಗದೆ ಮುಬಿನ್ ಜೊತೆ ಮಾತನಾಡಲು ಹೋಗಿದ್ದಾಳೆ. ಈ ವೇಳೆ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದು ಮುಬಿನ್ ಚೂರಿ ತೆಗೆದು ಶಿಫಾಳ ಕತ್ತು ಸೀಳಿ ಪರಾರಿಯಾಗಿದ್ದಾನೆ. ತೀವ್ರ ರಕ್ತಸ್ರಾವದಿಂದ ಶಿಫಾ ಮೃತಪಟ್ಟಿದ್ದಾಳೆ.

ಮಗಳ ಸಾವಿನ ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಶಿಫಾಳ ಪೋಷಕರು ಕಣ್ಣೀರು ಹಾಕಿದರು. ಘಟನಾ ಸ್ಥಳಕ್ಕೆ ಡಿವೈಎಸ್​ಪಿ ಬಿ ಎಸ್ ತಳವಾರ, ಗ್ರಾಮೀಣ ಠಾಣೆಯ ಸಿಪಿಐ ವೀರಾರೆಡ್ಡಿ, ಬಳಗಾನೂರು ಪಿಎಸ್ಐ ಯರಿಯಪ್ಪ ಸೇರಿದಂತೆ ಪೊಲೀಸ್ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಕೊಲೆ ಮಾಡಿದ ಬಳಿಕ ಆರೋಪಿ ಮುಬಿನ್ ಲಿಂಗಸುಗೂರು ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್