ತುಷಾರ್ ಗಿರಿನಾಥ್ 
ರಾಜ್ಯ

110 ಹಳ್ಳಿಗಳಲ್ಲಿರುವ ಕೊಳವೆಬಾವಿಗಳನ್ನು BWSSBಗೆ ಹಸ್ತಾಂತರಿಸಿ: ತುಷಾರ್ ಗಿರಿನಾಥ್

"ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆಗೊಂಡ 110 ಹಳ್ಳಿಗಳಲ್ಲಿರುವ ಎಲ್ಲಾ ಕೊಳವೆ ಬಾವಿಗಳನ್ನು ಜಲಮಂಡಳಿಗೆ ಹಸ್ತಾಂತರಿಸಿ" ಎಂದು ಮುಖ್ಯ ಆಯುಕ್ತರು ಸೂಚಿಸಿದ್ದಾರೆ.

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ 110 ಹಳ್ಳಿಗಳಲ್ಲಿರುವ ಕೊಳವೆ ಬಾವಿಗಳನ್ನು ಪಾಲಿಕೆಯಿಂದ ಬಿಡಬ್ಲ್ಯೂಎಸ್ಎಸ್ಬಿಗೆ ಹಸ್ತಾಂತರಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೇಸಿಗೆ ಆರಂಭವಾಗುವ ಮೊದಲೇ ಹೆಗ್ಡೆನಗರ ಮತ್ತು ಥಣಿಸಂದ್ರದಂತಹ ಹೊರ ಪ್ರದೇಶಗಳಲ್ಲಿ ನೀರಿನ ಕೊರತೆಯ ಬಗ್ಗೆ ನಿವಾಸಿಗಳಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ, ಬಿಬಿಎಂಪಿ ಆಯುಕ್ತರು ಈ ನಿರ್ದೇಶನ ನೀಡಿದ್ದಾರೆ.

"ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆಗೊಂಡ 110 ಹಳ್ಳಿಗಳಲ್ಲಿರುವ ಎಲ್ಲಾ ಕೊಳವೆ ಬಾವಿಗಳನ್ನು ಜಲಮಂಡಳಿಗೆ ಹಸ್ತಾಂತರಿಸಿ" ಎಂದು ಮುಖ್ಯ ಆಯುಕ್ತರು ಹೇಳಿದರು ಮತ್ತು ನಿವಾಸಿಗಳು ಬಿಡಬ್ಲ್ಯೂಎಸ್ಎಸ್ಬಿ ಸಂಪರ್ಕ ಪಡೆದುಕೊಳ್ಳುವಂತೆ ಹಾಗೂ ಅಂತರ್ಜಲ ಮತ್ತು ಬೋರ್‌ವೆಲ್‌ಗಳ ಅವಲಂಬನೆಯನ್ನು ಕಡಿಮೆ ಮಾಡುವಂತೆ ಅವರು ಮನವಿ ಮಾಡಿದರು.

ಬೇಸಿಗೆಯಲ್ಲಿ ನೀರಿನ ಮಹತ್ವ ಮತ್ತು ಸವಾಲಿನ ಪರಿಸ್ಥಿತಿಯನ್ನು ಅರಿತುಕೊಂಡ ಮುಖ್ಯ ಆಯುಕ್ತರು, ಬೋರ್‌ವೆಲ್‌ಗೆ ನಿಯಮಿತ ಸೇವೆ ಮತ್ತು ನಿರ್ವಹಣೆ ಅಗತ್ಯವಿರುವುದರಿಂದ ಮತ್ತು ಜಲಮಂಡಳಿ ಅಧಿಕಾರಿಗಳು ಅಗತ್ಯವಾದ ಕಾರ್ಯವಿಧಾನವನ್ನು ಹೊಂದಿರುವುದರಿಂದ, ಬಿಬಿಎಂಪಿಯ ಎಲ್ಲಾ ಕೊಳವೆ ಬಾವಿಗಳನ್ನು ಬಿಡಬ್ಲ್ಯೂಎಸ್ಎಸ್ಬಿಗೆ ಹಸ್ತಾಂತರಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ಪಾಲಿಕೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೊರ ಪ್ರದೇಶಗಳಲ್ಲಿ ಸುಮಾರು 6000 ನೋಂದಾಯಿತ ಬೋರ್‌ವೆಲ್‌ಗಳಿವೆ ಮತ್ತು ಈಗ ಅದನ್ನು BWSSB ಗೆ ಹಸ್ತಾಂತರಿಸಲಾಗುವುದು. ಇದು ಪಾಲಿಕೆಗೆ ಹೊಸದಾಗಿ ಸೇರ್ಪಡೆಯಾದ 110 ಹಳ್ಳಿಗಳ ನಿವಾಸಿಗಳ ನೀರಿನ ನಿರ್ವಹಣೆಗೆ ಸಹಾಯ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT