ತಮಿಳು ನಾಡು ಮಾಜಿ ಸಿಎಂ ದಿ. ಜಯಲಲಿತಾ(ಸಂಗ್ರಹ ಚಿತ್ರ) 
ರಾಜ್ಯ

ಮಾಜಿ ಸಿಎಂ ಜಯಲಲಿತಾ ಅಮೂಲ್ಯ ವಸ್ತುಗಳು: ಫೆಬ್ರವರಿ 14-15ಕ್ಕೆ ತಮಿಳು ನಾಡು ಸರ್ಕಾರಕ್ಕೆ ಹಸ್ತಾಂತರಕ್ಕೆ ಆದೇಶ

ಜುಲೈ 12, 2023 ರಂದು ವಿಶೇಷ ನ್ಯಾಯಾಲಯವು ಹೊರಡಿಸಿದ್ದ ಆದೇಶವನ್ನು ಎತ್ತಿಹಿಡಿದು ಹೈಕೋರ್ಟ್ ಆದೇಶ ಹೊರಡಿಸಿತ್ತು.

ಬೆಂಗಳೂರು: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ವಿರುದ್ಧದ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಂದ ವಶಪಡಿಸಿಕೊಂಡಿರುವ ಮತ್ತು ಮುಟ್ಟುಗೋಲು ಹಾಕಿರುವ ಬೆಲೆಬಾಳುವ ವಸ್ತುಗಳು ಮತ್ತು ಆಸ್ತಿಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲು ಬೆಂಗಳೂರಿನ ವಿಶೇಷ ನ್ಯಾಯಾಲಯವು ಫೆಬ್ರವರಿ 14 ಮತ್ತು 15 ಎರಡು ದಿನಗಳನ್ನು ನಿಗದಿಪಡಿಸಿದೆ.

ಸಿಬಿಐ/ಇಡಿ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಮೋಹನ್ ಎಚ್‌ಎ ನಿನ್ನೆ ಹೊರಡಿಸಿದ ಆದೇಶದಲ್ಲಿ, ಬೆಲೆಬಾಳುವ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲು ದಿನಾಂಕಗಳನ್ನು ನಿಗದಿಪಡಿಸಿದರು. ಜಯಲಲಿತಾ ಅವರ ಕಾನೂನುಬದ್ಧ ಉತ್ತರಾಧಿಕಾರಿಗಳಾದ ಜೆ.ದೀಪಕ್ ಮತ್ತು ಜೆ.ದೀಪ ಅವರು ತಮಗೆ ಸೇರಬೇಕೆಂದು ಹೇಳುವ ಜಯಲಲಿತಾ ಅವರ ಬೆಲೆಬಾಳುವ ವಸ್ತುಗಳು ಮತ್ತು ಆಸ್ತಿಗಳ ಮೇಲೆ ಹಕ್ಕು ಹೊಂದಿದ್ದಾರೆಂದು ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ಇತ್ತೀಚೆಗೆ ವಜಾಗೊಳಿಸಿತ್ತು.

ಜುಲೈ 12, 2023 ರಂದು ವಿಶೇಷ ನ್ಯಾಯಾಲಯವು ಹೊರಡಿಸಿದ್ದ ಆದೇಶವನ್ನು ಎತ್ತಿಹಿಡಿದು ಹೈಕೋರ್ಟ್ ಆದೇಶ ಹೊರಡಿಸಿತ್ತು, ವಿಶೇಷ ನ್ಯಾಯಾಲಯವು ದೀಪಾ ಮತ್ತು ದೀಪಕ್ ಅವರ ಮುಟ್ಟುಗೋಲು ಹಾಕಿಕೊಂಡಿರುವ ಆಸ್ತಿಗಳ ಬಿಡುಗಡೆಗಾಗಿ ಮಾಡಿಕೊಂಡಿದ್ದ ಕೋರಿಕೆಯನ್ನು ತಿರಸ್ಕರಿಸಿತ್ತು.

ಫೆಬ್ರವರಿ 19, 2024 ರಂದು ವಿಶೇಷ ನ್ಯಾಯಾಲಯವು, ಬೆಲೆಬಾಳುವ ವಸ್ತುಗಳು, ಚಿನ್ನ ಮತ್ತು ವಜ್ರಾಭರಣಗಳನ್ನು ಹಿಂತಿರುಗಿಸಲು ದಿನಾಂಕವನ್ನು ನಿಗದಿಪಡಿಸಿತು. ಮಾರ್ಚ್ 6 ಮತ್ತು 7, 2024 ರಂದು ಅವುಗಳನ್ನು ಸ್ವಾಧೀನಪಡಿಸಿಕೊಳ್ಳಲು ಅಧಿಕೃತ ಅಧಿಕಾರಿಗಳನ್ನು ನಿಯೋಜಿಸಲು ತಮಿಳುನಾಡು ಸರ್ಕಾರಕ್ಕೆ ನಿರ್ದೇಶನ ನೀಡಿತು. ಈ ಮಧ್ಯೆ, ದೀಪಾ ಮತ್ತು ದೀಪಕ್ ಇಬ್ಬರೂ ವಿಶೇಷ ನ್ಯಾಯಾಲಯದ ಆದೇಶದ ವಿರುದ್ಧ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಆಸ್ತಿ ಮತ್ತು ಬೆಲೆಬಾಳುವ ವಸ್ತುಗಳನ್ನು ಹಸ್ತಾಂತರಿಸುವ ಪ್ರಕ್ರಿಯೆಗೆ ಒಂದು ದಿನ ಮೊದಲು, ಮಾರ್ಚ್ 5, 2024 ರಂದು ಹೈಕೋರ್ಟ್‌ನ ಏಕ ಸದಸ್ಯ ನ್ಯಾಯಾಧೀಶರು ವಿಶೇಷ ನ್ಯಾಯಾಲಯದ ಆದೇಶವನ್ನು ತಡೆಹಿಡಿದರು. ಈಗ, ಮೇಲ್ಮನವಿ ವಜಾಗೊಂಡ ಹಿನ್ನೆಲೆಯಲ್ಲಿ, ವಿಶೇಷ ನ್ಯಾಯಾಲಯವು ತಮಿಳುನಾಡು ಸರ್ಕಾರಕ್ಕೆ ಆಸ್ತಿಗಳನ್ನು ಹಸ್ತಾಂತರಿಸಲು ದಿನಾಂಕಗಳನ್ನು ನಿಗದಿಪಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT