ಬೆಂಕಿಯಿಂದ ಸುಟ್ಟು ಕರಕಲಾದ ವಾಹನಗಳು 
ರಾಜ್ಯ

ಬೆಂಗಳೂರು: ಬೆಂಕಿ ಅವಘಡ; ಜಕ್ಕರಾಯನಕೆರೆ ಮೈದಾನದಲ್ಲಿ 150 ವಾಹನಗಳು ಸುಟ್ಟು ಭಸ್ಮ!

ನಗರದ ಸುಮಾರು 70 ಪೊಲೀಸ್ ಠಾಣೆಗಳ ಪೊಲೀಸರು ವಿವಿಧ ಪ್ರಕರಣಗಳಲ್ಲಿ ಜಪ್ತಿ ಮಾಡಿದ ವಾಹನಗಳನ್ನು ಜಕ್ಕರಾಯನಕೆರೆ ಮೈದಾನದಲ್ಲಿ ನಿಲುಗಡೆ ಮಾಡಿದ್ದರು.

ಬೆಂಗಳೂರು: ನಗರದ ಶ್ರೀರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜೆಡಿಎಸ್ ಪ್ರಧಾನ ಕಚೇರಿ ಬಳಿಯ ಜಕ್ಕರಾಯನಕೆರೆ ಮೈದಾನದಲ್ಲಿ ನಿಲುಗಡೆ ಮಾಡಲಾಗಿದ್ದ ಸುಮಾರು 150 ಜಪ್ತಿ ವಾಹನಗಳಿಗೆ ಬುಧವಾರ ಬೆಳಗ್ಗೆ ಬೆಂಕಿ ಹೊತ್ತುಕೊಂಡಿದ್ದು, ಸುಟ್ಟು ಕರಕಲಾಗಿವೆ.

ಕಳ್ಳತನ ಹಾಗೂ ಸಂಚಾರ ನಿಯಮ ಉಲ್ಲಂಘನೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಜಪ್ತಿ ಮಾಡಿಕೊಂಡ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಸುದ್ದಿ ತಿಳಿದ ತಕ್ಷಣ ಐದು ಅಗ್ನಿಶಾಮಕ ವಾಹನಗಳಲ್ಲಿ ಸ್ಥಳಕ್ಕೆ ಧಾವಿಸಿದ ತಂಡ ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿದೆ.

ನಗರದ ಸುಮಾರು 70 ಪೊಲೀಸ್ ಠಾಣೆಗಳ ಪೊಲೀಸರು ವಿವಿಧ ಪ್ರಕರಣಗಳಲ್ಲಿ ಜಪ್ತಿ ಮಾಡಿದ ವಾಹನಗಳನ್ನು ಜಕ್ಕರಾಯನಕೆರೆ ಮೈದಾನದಲ್ಲಿ ನಿಲುಗಡೆ ಮಾಡಿದ್ದರು. ಈ ಪೈಕಿ 10 ಕಾರುಗಳು ಸೇರಿದಂತೆ 17 ನಾಲ್ಕು ಚಕ್ರದ ವಾಹನಗಳು, ಸುಮಾರು 130 ದ್ವಿಚಕ್ರ ವಾಹನಗಳು ಬೆಂಕಿಗೆ ಆಹುತಿಯಾಗಿವೆ.

ಅಗ್ನಿ ದುರಂತಕ್ಕೆ ಕಾರಣ ತಿಳಿದುಬಂದಿಲ್ಲ. ಈ ಮೈದಾನದಲ್ಲಿ ವಿವಿಧ ಮಾದರಿಯ ಸುಮಾರು 500ಕ್ಕೂ ಹೆಚ್ಚು ವಾಹನಗಳನ್ನು ನಿಲುಗಡೆ ಮಾಡಲಾಗಿತ್ತು. ಮೈದಾನದ ಒಂದು ಬದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇತರ ವಾಹನಗಳಿಗೆ ತಗುಲಿದೆ.

ಕಿಡಿಗೇಡಿಗಳು ಬೀಡಿ ಅಥವಾ ಸಿಗರೇಟ್ ಸೇದಿ ಎಸೆದ ಪರಿಣಾಮ ಬೆಂಕಿ ಉಂಟಾಗಿರುವ ಶಂಕೆ ವ್ಯಕ್ತವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಸಂಬಂಧ ಶ್ರೀರಾಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

SCROLL FOR NEXT