ಕಾರ್ಯಕ್ರಮದಲ್ಲಿ ಡಿ.ಕೆ ಶಿವಕುಮಾರ್ 
ರಾಜ್ಯ

ಬಿಜೆಪಿಯಿಂದ ಗಾಂಧಿ ಹೆಜ್ಜೆ ಗುರುತು ಅಳಿಸುವ ಕೆಲಸ; ಫೆಬ್ರವರಿ 2 ರಂದು ಚನ್ನಪಟ್ಟಣ ಮತದಾರರ ಅಭಿನಂದನಾ ಸಮಾವೇಶ: ಡಿ.ಕೆ ಶಿವಕುಮಾರ್

ಬಿಜೆಪಿಯವರು ಗಾಂಧಿ ಅವರ ತತ್ವಗಳನ್ನು ಬಾಯಲ್ಲಿ ಹೇಳದೇ ಇರಬಹುದು ಆದರೆ ಆಡಳಿತ ಪಕ್ಷವನ್ನು ವಿರೋಧಿಸಲು ಗಾಂಧಿ ಅವರ ಪ್ರತಿಮೆಯನ್ನೇ ಆಶ್ರಯಿಸಬೇಕು.

ಬೆಂಗಳೂರು: ಬಿಜೆಪಿಯವರು ಗಾಂಧಿಯವರ ಹೆಜ್ಜೆ ಗುರುತುಗಳನ್ನು ಅಳಿಸುವ ಕೆಲಸ ಮಾಡುತ್ತಿದ್ದಾರೆ. ನಾವು ಅದನ್ನು ಉಳಿಸುವ ಕೆಲಸ ಮಾಡಬೇಕು. ಮಹಾತ್ಮ ಗಾಂಧಿ ಅವರ ತತ್ವಗಳನ್ನು ಒಪ್ಪದ ಬಿಜೆಪಿಯವರು ಅವರ ಪ್ರತಿಮೆ ಕೆಳಗೆ ಕುಳಿತು ಪ್ರತಿಭಟನೆ ಮಾಡುತ್ತಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಹುತಾತ್ಮ ದಿನಾಚರಣೆ ಅಂಗವಾಗಿ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಶಿವಕುಮಾರ್ ಅವರು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಯವರು ಗಾಂಧಿ ಅವರ ತತ್ವಗಳನ್ನು ಬಾಯಲ್ಲಿ ಹೇಳದೇ ಇರಬಹುದು ಆದರೆ ಆಡಳಿತ ಪಕ್ಷವನ್ನು ವಿರೋಧಿಸಲು ಗಾಂಧಿ ಅವರ ಪ್ರತಿಮೆಯನ್ನೇ ಆಶ್ರಯಿಸಬೇಕು. ಧರಣಿ ಮಾಡಬೇಕು ಎಂದು ಹೇಳಿಕೊಟ್ಟವರೇ ಗಾಂಧಿ. ಗಾಂಧಿ ಅವರ ಮೌನ, ಧ್ಯಾನದ ಹಿಂದೆ ದೊಡ್ಡ ಸಂದೇಶವಿದೆ. ಸ್ವದೇಶಿ ಆಲೋಚನೆ ಹೇಳಿಕೊಟ್ಟವರು ಗಾಂಧಿ. ಪ್ರಧಾನಿ ಅವರು ಇದನ್ನೇ ಮೇಕ್ ಇನ್ ಇಂಡಿಯಾ ಎಂದು ಹೇಳುತ್ತಿದ್ದಾರೆ ಎಂದರು.

ಗಾಂಧೀಜಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದವರು. ಪಕ್ಷದ ಅಧ್ಯಕ್ಷರಾಗಿ ಸ್ವಾತಂತ್ರ್ಯ ತಂದುಕೊಟ್ಟರಲ್ಲ ಎನ್ನುವ ಅಸಹನೆ ಬಿಜೆಪಿಯವರಿಗಿದೆ. ಈ ದೇಶದ ಸ್ವಾತಂತ್ರ್ಯಕ್ಕೆ ಬಿಜೆಪಿಯವರ ಕೊಡುಗೆ ಏನಿಲ್ಲ. ಬಿಜೆಪಿ ಬಗ್ಗೆ ಮಾತನಾಡಿ ಸಮಯ ವ್ಯರ್ಥ ಮಾಡಿಕೊಳ್ಳುವುದು ಬೇಡ ಎಂದರು.

ಗಾಂಧಿ ಅವರ ಸಂದೇಶಗಳನ್ನು ಪ್ರಚಾರ ಮಾಡಲು ರಾಜ್ಯದಾದ್ಯಂತ ವರ್ಷಪೂರ್ತಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಕಾರ್ಯಕ್ರಮವನ್ನು ಮಾಡಬೇಕು ಎನ್ನುವ ಆಲೋಚನೆ ಸರ್ಕಾರದ ಮುಂದಿದೆ. ಗಾಂಧಿ ಭಾರತ ಕಾರ್ಯಕ್ರಮ ಆಚರಣಾ ಸಮಿತಿ ನೀಡಿರುವ ವರದಿ ಅನುಷ್ಠಾನದ ಬಗ್ಗೆ ಮುಖ್ಯಮಂತ್ರಿಗಳು ಬಜೆಟ್ ವೇಳೆ ತಿಳಿಸಬಹುದು. ಇದರ ಬಗ್ಗೆ ಎಐಸಿಸಿ ಅಧ್ಯಕ್ಷರ ಬಳಿಯೂ ಮನವಿ ಮಾಡಿದ್ದೇನೆ ಎಂದು ಹೇಳಿದರು.

ಮಹಾತ್ಮ ಗಾಂಧಿ ಅವರ ಆದರ್ಶಗಳನ್ನು ನಾವುಗಳು ಮನೆಯಲ್ಲಿ, ಕುಟುಂಬದಲ್ಲಿ ಪಾಲಿಸಬೆಕಾಗಿದೆ. ನನ್ನ ಜೀವನವೇ ನನ್ನ ಸಂದೇಶ ಎನ್ನುವ ಗಾಂಧಿಜಿ ಅವರ ತತ್ವವನ್ನು ಇಡೀ ಪ್ರಪಂಚದ ಉನ್ನತ ನಾಯಕರೆಲ್ಲ ಒಪ್ಪಿಕೊಂಡಿದ್ದಾರೆ. ‘ನಿಮ್ಮನ್ನು ನೀವು ನಿಯಂತ್ರಣ ಮಾಡಿಕೊಳ್ಳಬೇಕಾದರೆ ಮೆದುಳನ್ನು ಉಪಯೋಗಿಸಿ, ಬೇರೆಯವರನ್ನು ನಿಯಂತ್ರಣ ಮಾಡಬೇಕಾದರೆ ಹೃದಯನ್ನು ಬಳಸುʼ ಎಂದಿದ್ದಾರೆ. ಅಂದರೆ ಪ್ರೀತಿಯಿಂದ ಗೆಲ್ಲಬೇಕು ಎಂದು ಹೇಳಿದ್ದಾರೆ. ಜಗತ್ತನ್ನು ಬದಲಾವಣೆ ಮಾಡಬೇಕು ಎಂದು ಮೊದಲು ನಾವು ಬದಲಾವಣೆ ಆಗಬೇಕು ಎಂದರು.

ಮಹಾತ್ಮ ಗಾಂಧಿ ಅವರ ಉಸಿರು ನಮ್ಮ ಸುತ್ತಲೇ ಇದೇ ಎನ್ನುವ ಭಾವನೆ ನನ್ನದು. ಅವರ ಪ್ರತಿಯೊಂದು ನಡೆ ನುಡಿ, ಆದರ್ಶ, ಆಶಯಗಳನ್ನು ಉಳಿಸುವ ಕೆಲಸ ನಾವು ಮಾಡುತ್ತಿದ್ದೇವೆ. ನಾವೆಲ್ಲರೂ ಕಾಂಗ್ರೆಸ್ ಕಾರ್ಯಕರ್ತರು. ನಮಗೆ ಇರುವ ಶಕ್ತಿ ಯಾರಿಗೂ ಇಲ್ಲ. ತ್ರಿವರ್ಣ ಧ್ವಜವನ್ನು ಬಿಜೆಪಿಯವರು ಹಾಕಿಕೊಳ್ಳಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷವೊಂದಕ್ಕೆ ಸ್ವಾತಂತ್ರ್ಯ ಸಿಕ್ಕಿಲ್ಲ, ನಮಗೆ ಮಾತ್ರ ಸಂವಿಧಾನ, ಪ್ರಜಾಪ್ರಭುತ್ವ ಬಂದಿಲ್ಲ. ಎಲ್ಲರಿಗೂ ಇದರ ಅನುಕೂಲತೆ ಸಿಕ್ಕಿದೆ. ಎಲ್ಲರಿಗೂ ಸ್ವಾತಂತ್ರ್ಯ ಬಂದಿದೆ. ಎಲ್ಲರೂ ಸಂವಿಧಾನವನ್ನು ಬಳಸಿಕೊಂಡು ಅದರ ಫಲವನ್ನು ಕಾಣುತ್ತಿದ್ದಾರೆ” ಎಂದರು.

ಶಿವನ ಧ್ಯಾನ, ರಾಮನ ತ್ಯಾಗ, ಬುದ್ದನ ಪ್ರೀತಿ, ಏಸುವಿನ ಸಹನೆ, ಮಹಮದ್ ಪೈಗಂಬರ್ ಅವರ ಮಾನವೀಯತೆಯನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದವರು ಹಾಗೂ ಇದರ ಪ್ರತಿರೂಪವಾಗಿ ಬದುಕಿದವರು ಮಹಾತ್ಮ ಗಾಂಧಿ. ಗಾಂಧೀಜಿ ಅವರು 77 ವರ್ಷದ ಹಿಂದೆ ಹುತಾತ್ಮರಾದರು. ಅವರ ಸಲುವಾಗಿ ಮೌನಾಚರಣೆ ಮಾಡುತ್ತಿದ್ದೇವೆ. ಬೆಳಗಾವಿಯಲ್ಲಿ ಎರಡು ದಿನಗಳ ಕಾಲ ನಡೆಸಿದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಭಾರತದ ಇತಿಹಾಸದಲ್ಲಿಯೇ ಮಹಾತ್ಮ ಗಾಂಧೀಜಿ ಅವರು ಆದರ್ಶ, ತತ್ವಗಳನ್ನು ಉಳಿಸಲು ಮೂಲಕ ಪ್ರಯತ್ನ ಮಾಡಿದ್ದೇವೆ. ಈ ದೇಶಕ್ಕೆ ಕಾಂಗ್ರೆಸ್ ಪಕ್ಷವೇ ಭವಿಷ್ಯ” ಎಂದು ತಿಳಿಸಿದರು.

ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಚನ್ನಪಟ್ಟಣ ಉಪಚುನಾವಣೆ ವೇಳ ಶ್ರಮವಹಿಸಿದ್ದೀರಿ. ಅಲ್ಲಿನ ಮತದಾರರಿಗೆ ಅಭಿನಂದನೆ ತಿಳಿಸುವ ಸಲುವಾಗಿ ಫೆ.2 ರಂದು ಚನ್ನಪಟ್ಟಣದಲ್ಲಿ ಸಮಾವೇಶ ನಡೆಸಲಾಗುವುದು. ಬೆಳಗಾವಿ ಅಧಿವೇಶನವಿದ್ದ ಕಾರಣಕ್ಕೆ ಮುಂದಕ್ಕೆ ಹೋಗಿತ್ತು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz ಅಷ್ಟೇ ಅಲ್ಲ.. ಬಾಲ ಬಿಚ್ಚಿದ್ರೆ Bab al mandeb ಜಲಸಂಧಿಯನ್ನೂ ಮುಚುತ್ತೇವೆ: ಹೌತಿಗಳು ಬರ್ತಾರೆ ಎಂದು Iran ಎಚ್ಚರಿಕೆ

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran, ಬೆಚ್ಚಿದ ಅಮೆರಿಕದಿಂದ Fact-Check

ಉಗ್ರರೊಂದಿಗೆ ನಂಟು ಆರೋಪ: ಬಳ್ಳಾರಿ ಯುವಕ ಸೇರಿ ದೇಶಾದ್ಯಂತ 12 ಮಂದಿ ಬಂಧನ

ಯುದ್ದದಲ್ಲಿ ಗೆದ್ದು ಕೂಡ ಸೋಲುತ್ತಿರುವ ಅಮೇರಿಕಾ ಮತ್ತು ಚೀನಾ! (ಹಣಕ್ಲಾಸು)

ಮಾನಸಿಕ ನೆಮ್ಮದಿಗೆ 10 ಸಾವಿರ ರೂ, ಸ್ವಯಂ ಆರೈಕೆಗೆ 10 ಸಾವಿರ: 22 ವರ್ಷದ ಬೆಂಗಳೂರು Gen Z ಯುವತಿಯ ಮಾಸಿಕ ಖರ್ಚುವೆಚ್ಚ ವೈರಲ್!

SCROLL FOR NEXT