ಸಾಂದರ್ಭಿಕ ಚಿತ್ರ 
ರಾಜ್ಯ

ತುಮಕೂರು: ಮಧುಗಿರಿ ಬಳಿ ಕರಡಿಗಳ ದಾಳಿಯಲ್ಲಿ ಮಹಿಳೆಗೆ ಗಂಭೀರ ಗಾಯ

ಮಧ್ಯಾಹ್ನ ಹೊಲದಲ್ಲಿ ಮೇಕೆಗಳನ್ನು ಮೇಯಿಸುತ್ತಿದ್ದಾಗ ಎಲ್ಲಿಂದಲೋ ಮೂರು ಕರಡಿಗಳು ಕಾಣಿಸಿಕೊಂಡವು, ಅದರಲ್ಲಿ ಒಂದು ಕರಡಿ ಮೇಲೆ ದಾಳಿ ಮಾಡಿತು. ಅವರು ಕಿರುಚಿದಾಗ, ಅವರ ಪತಿ ನಾಗರಾಜು ಹಾಗೂ ಹತ್ತಿರದಲ್ಲಿದ್ದ ಇತರರು ಬಂದು ಕರಡಿಯನ್ನು ಓಡಿಸಿದ್ದಾರೆ.

ಮಧುಗಿರಿ: ಗದ್ದೆಯಲ್ಲಿ ಮೇಕೆಗಳನ್ನು ಮೇಯಿಸುತ್ತಿದ್ದ ಮಹಿಳೆಯ ಮೇಲೆ ಹಗಲು ಹೊತ್ತಿನಲ್ಲಿ ಕರಡಿಯೊಂದು ದಾಳಿ ಮಾಡಿದೆ. ಪುರವರ ಹೋಬಳಿಯ ಭಾಗ್ಯಮ್ಮ ತಲೆಗೆ ತೀವ್ರ ಗಾಯಗಳಾಗಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಧ್ಯಾಹ್ನ ಹೊಲದಲ್ಲಿ ಮೇಕೆಗಳನ್ನು ಮೇಯಿಸುತ್ತಿದ್ದಾಗ ಎಲ್ಲಿಂದಲೋ ಮೂರು ಕರಡಿಗಳು ಕಾಣಿಸಿಕೊಂಡವು, ಅದರಲ್ಲಿ ಒಂದು ಕರಡಿ ಮೇಲೆ ದಾಳಿ ಮಾಡಿತು. ಅವರು ಕಿರುಚಿದಾಗ, ಅವರ ಪತಿ ನಾಗರಾಜು ಹಾಗೂ ಹತ್ತಿರದಲ್ಲಿದ್ದ ಇತರರು ಧಾವಿಸಿ ಬಂದು ಕಾಡು ಪ್ರಾಣಿಯನ್ನು ಓಡಿಸಿದರು.

ದಾಳಿಯಲ್ಲಿ ಮಹಿಳೆಯ ತಲೆ ಬಹುತೇಕ ಗಾಯವಾಗಿದೆ ಮತ್ತು ಅವರ ಕೈಗಳು ಸಹ ತೀವ್ರವಾಗಿ ಗಾಯಗೊಂಡಿದ್ದವು.

ರೇಂಜ್ ಫಾರೆಸ್ಟ್ ಆಫೀಸರ್ ಮುತ್ತುರಾಜು ಸ್ಥಳಕ್ಕೆ ಭೇಟಿ ನೀಡಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿದ್ದಾರೆ. ಮಹಿಳೆಯ ಚಿಕಿತ್ಸೆಗೆ ಸಹಾಯ ಮಾಡಲಾಗುವುದು ಎಂದು ಅರಣ್ಯ ಅಧಿಕಾರಿ ಸುರೇಶ್ ತಿಳಿಸಿದ್ದಾರೆ. ಸ್ಥಳದಲ್ಲಿ ಬೋನ್ ಇರಿಸಿ ಕರಡಿಯನ್ನು ಸೆರೆಹಿಡಿಯಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT