ಸಾಂದರ್ಭಿಕ ಚಿತ್ರ 
ರಾಜ್ಯ

ಹಾಸನ: 40 ದಿನಗಳಲ್ಲಿ 21 ಜನರು ಹೃದಯಾಘಾತದಿಂದ ಸಾವು; ತಜ್ಞರ ತಂಡ ತನಿಖೆ

ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆ (ಹಿಮ್ಸ್), ಚನ್ನರಾಯಪಟ್ಟಣ ಮತ್ತು ಹೊಳೆನರಸೀಪುರ ತಾಲೂಕು ಆಸ್ಪತ್ರೆ ಈ ಯೋಜನೆಯ ಭಾಗವಾಗಿದೆ.

ಹಾಸನ: ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಲ್ಲಿ 21 ಜನರು ಹೃದಯಾಘಾತದಿಂದ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ತುರ್ತು ಸಭೆ ನಡೆಸಿದ್ದಾರೆ. ಈ ಸಂಬಂಧ ಸಾಂಕ್ರಾಮಿಕವಲ್ಲದ ರೋಗಗಳ (ಎನ್‌ಸಿಡಿ) ತಜ್ಞರ ತಂಡವು ತನಿಖೆ ನಡೆಸಿ ಶೀಘ್ರದಲ್ಲೇ ವರದಿ ಸಲ್ಲಿಸಲಿದೆ. ಇದರಲ್ಲಿ ಹೃದಯಾಘಾತಕ್ಕೆ ಕಾರಣಗಳನ್ನು ಅಧ್ಯಯನ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ತಿಳಿಸಿದ್ದಾರೆ.

ಸೋಮವಾರ ಹೃದಯಾಘಾತದಿಂದ ಮೂವರು ಸಾವನ್ನಪ್ಪಿರುವುದು ವರದಿಯಾಗಿದೆ. ಇತ್ತೀಚಿಗೆ ಹೃದಯಾಘಾತಕ್ಕೆ ಬಲಿಯಾದವರಲ್ಲಿ ಬಹುತೇಕ ಎಲ್ಲರೂ 30 ರಿಂದ 55 ವರ್ಷ ವಯಸ್ಸಿನವರು. ಬಹು ಕಾಯಿಲೆಗಳಿಂದ ಸಾವು ಸಂಭವಿಸಿರಬಹುದು, ಮರಣೋತ್ತರ ಪರೀಕ್ಷೆಯ ನಂತರವಷ್ಟೇ ನಿಖರ ಕಾರಣ ತಿಳಿಯಲಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಅನಿಲ್ ಕುಮಾರ್ ಹೇಳಿದ್ದಾರೆ.

TNIEಗೆ ಲಭ್ಯವಿರುವ ಅಂಕಿಅಂಶಗಳ ಪ್ರಕಾರ, ಮೂರು ವರ್ಷಗಳ ಹಿಂದೆ 68 ತಾಲೂಕು ಆಸ್ಪತ್ರೆಗಳಲ್ಲಿ ಪರಿಚಯಿಸಲಾದ ST-ಎಲಿವೇಶನ್ ಮಯೋಕಾರ್ಡಿಯಲ್ ಇನ್ಫಾರ್ಕ್ಷನ್ (STEMI) ಯೋಜನೆಯಡಿ 37,774 ಜನರು ಚಿಕಿತ್ಸೆ ಪಡೆದಿದ್ದಾರೆ.

ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆ (ಹಿಮ್ಸ್), ಚನ್ನರಾಯಪಟ್ಟಣ ಮತ್ತು ಹೊಳೆನರಸೀಪುರ ತಾಲೂಕು ಆಸ್ಪತ್ರೆ ಈ ಯೋಜನೆಯ ಭಾಗವಾಗಿದೆ. ಇದರಡಿ ತಾಲೂಕು ಆಸ್ಪತ್ರೆಗಳಲ್ಲಿನ ರೋಗಿಗಳನ್ನುತಪಾಸಣೆ ನಡೆಸುವ ವೈದ್ಯರು ಮತ್ತು ಹೃದ್ರೋಗ ತಜ್ಞರು, ಟೆಲಿಮೆಡಿಸಿನ್ ಮೂಲಕ ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆಯ ತಜ್ಞ ವೈದ್ಯರೊಂದಿಗೆ ಸಂವಾದ ನಡೆಸುತ್ತಾರೆ. ‘ಗೋಲ್ಡನ್ ಅವರ್’ ಸಮಯದಲ್ಲಿ ರೋಗಿಗಳು ಸಮೀಪದ ತಾಲ್ಲೂಕು ಆಸ್ಪತ್ರೆ ಸಂಪರ್ಕಿಸಿದರೆ ಅವರನ್ನು ಉಳಿಸುವಲ್ಲಿ ಈ ಯೋಜನೆ ನೆರವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

12 ಸಾವಿರ ವರ್ಷಗಳಲ್ಲೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!

"ಧರ್ಮ ಗ್ರಂಥಗಳಲ್ಲಿ ಧ್ವಜಾರೋಹಣದ ಉಲ್ಲೇಖ ಇಲ್ಲ": ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣಕ್ಕೆ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತೆ ತಗಾದೆ!

ಕಾಂಗ್ರೆಸ್‌ನಲ್ಲಿ ಅವರ ಶಾಸಕರನ್ನ ಅವರೇ ಖರೀದಿ ಮಾಡುತ್ತಿದ್ದಾರೆ; ಒಬ್ಬರಿಗೆ 100 ಕೋಟಿ ರೂ ಆಫರ್‌; ಕಾರು, ಫ್ಲ್ಯಾಟು ಗಿಫ್ಟು!

SCROLL FOR NEXT