ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅವಘಡ. 
ರಾಜ್ಯ

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ಸಿಬ್ಬಂದಿ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ, ರೋಗಿಗಳ ಸ್ಥಳಾಂತರ

ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಆಸ್ಪತ್ರೆಯ ಬರ್ನ್ಸ್ ಬ್ಲಾಕ್ (MBCC) ನಲ್ಲಿರುವ ಸೆಮಿನಾರ್ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಬೆಂಗಳೂರು: ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಗಿನ ಜಾವ ಅಗ್ನಿ ಅವಘಡ ಸಂಭವಿಸಿದ್ದು, ಸಿಬ್ಬಂದಿ ಸಮಯಪ್ರಜ್ಞೆಯಿಂದ ಅನಾಹುತವೊಂದು ತಪ್ಪಿದಂತಾಗಿದೆ.

ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಆಸ್ಪತ್ರೆಯ ಬರ್ನ್ಸ್ ಬ್ಲಾಕ್ (MBCC) ನಲ್ಲಿರುವ ಸೆಮಿನಾರ್ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ವಿಚ್ ಬೋರ್ಡ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಆದ ಕಾರಣ ಬೆಂಕಿ ಸಂಭವಿಸಿದೆ ಎನ್ನಲಾಗುತ್ತಿದೆ.

ಅಗ್ನಿ ಅವಘಡದಲ್ಲಿ ರಿಜಿಸ್ಟರ್ ಬುಕ್, ಬೆಡ್ ಸುಟ್ಟು ಹೋಗಿದ್ದು, ಫ್ರಿಡ್ಜ್‌ಗೆ ಬೆಂಕಿ ತಗುಲಿ ಸುಟ್ಟ ಗಾಯಗಳ ವಿಭಾಗದ ಗ್ರೌಂಡ್ ಫ್ಲೋರ್ ಪೂರ್ತಿ ಬೆಂಕಿ ಆವರಿಸಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ರೋಗಿಗಳನ್ನ ಶಿಫ್ಟ್ ಮಾಡಲಾಗಿದೆ.

ಬಳಿಕ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದವರು ತಕ್ಷಣ ಬೆಂಕಿಯನ್ನು ನಂದಿಸಿದರು. ಈ ವಾರ್ಡ್‌ನಲ್ಲಿ ಒಟ್ಟು 26 ರೋಗಿಗಳಿದ್ದರು. ಅದರಲ್ಲಿ 14 ಪುರುಷರು, 5 ಮಹಿಳೆಯರು ಮತ್ತು 7 ಮಕ್ಕಳು ಇದ್ದು, ಐಸಿಯುನಲ್ಲಿ 5 ರೋಗಿಗಳನ್ನು ದಾಖಲಿಸಲಾಗಿತ್ತು.

ಭಾರಿ ಹೊಗೆಯ ಕಾರಣದಿಂದ ಮತ್ತು ಮುನ್ನೆಚ್ಚರಿಕಾ ಕ್ರಮವಾಗಿ, ಎಲ್ಲಾ ಬರ್ನ್ಸ್ ರೋಗಿಗಳನ್ನು (26 ರೋಗಿಗಳು) ವಿಕ್ಟೋರಿಯಾ ಆಸ್ಪತ್ರೆಯ ಎಚ್ ಬ್ಲಾಕ್ಗೆ ಸ್ಥಳಾಂತರಿಸಲಾಗಿದೆ. ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ವೈದ್ಯಕೀಯ ಚಿಕಿತ್ಸೆಯನ್ನು ಮುಂದುವರೆಸಲಾಗಿದೆ.

ಸಿಬ್ಬಂದಿ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ಇನ್ನು ಘಟನೆ ವೇಳೆ ವೈದ್ಯೆ ದಿವ್ಯಾ ನೇತೃತ್ವದ ತಂಡ ರಾತ್ರಿಪಾಳಿಯಲ್ಲಿ ಕೆಲಸ ಮಾಡುತ್ತಿದ್ದರು. ಮುಂಜಾನೆ 3:30ರ ಸುಮಾರಿಗೆ ಡಾ. ದಿವ್ಯಾ ಮೊದಲ ಮಹಡಿಗೆ ಹೋಗಿದ್ದು, ಈ ವೇಳೆ ಸೆಮಿನರ್ ರೂಂನಲ್ಲಿ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಿರುವುದು ಗಮನಕ್ಕೆ ಬಂದಿದೆ.

ಕೂಡಲೇ ಅಲರ್ಟ್ ಆದ ದಿವ್ಯಾ ಅವರು, ಸಿಬ್ಬಂದಿಗಳಿಗೆ ಕೋಡ್ ರೆಡ್ ಅಲರ್ಟ್ ಮಾಡಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಅಲ್ಲದೆ, ಸೂಪರಿಂಟೆಂಡೆಂಟ್‌ಗಳಿಗೆ ಮಾಹಿತಿ ನೀಡಿದ್ದಾರೆ.

ಬೆಂಕಿ ನಂದಿಸೋ ಪ್ರಯತ್ನದ ಜೊತೆಗೆ ಹಿರಿಯ ಅಧಿಕಾರಿಗಳಿಗೂ ಮಾಹಿತಿ ನೀಡಿರುವ ದಿವ್ಯಾ ಅವರು, ಬಳಿಕ ಅಗ್ನಿ ಶಾಮಕ ಸಿಬ್ಬಂದಿಗೆ ಹಾಗೂ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

SCROLL FOR NEXT