ಚಿರತೆ ಸೆರೆ ಹಿಡಿದ ಗ್ರಾಮಸ್ಥರು 
ರಾಜ್ಯ

Leopard caught near Bengaluru: ರೈತರ ನಿದ್ದೆ ಗೆಡಿಸಿದ್ದ ಚಿರತೆ, ಸೆರೆ ಹಿಡಿದು ಅರಣ್ಯಾಧಿಕಾರಿಗಳಿಗೆ ಒಪ್ಪಿಸಿದ ಗ್ರಾಮಸ್ಥರು!

ಚಿಕ್ಕಬಳ್ಳಾಪುರದ ಗುಡಿಬಂಡೆ ತಾಲ್ಲೂಕಿನ ಕೆರೇನಹಳ್ಳಿ ಗ್ರಾಮದಲ್ಲಿ ರೈತರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆಯಾಗಿದೆ.

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ವ್ಯಾಪಕ ಭೀತಿ ಹುಟ್ಟಿಸಿದ್ದ ಚಿರತೆಯನ್ನು ಸ್ಥಳೀಯರೇ ಸೆರೆ ಹಿಡಿದು ಅರಣ್ಯಾಧಿಕಾರಿಗಳಿಗೆ ಒಪ್ಪಿಸಿರುವ ಘಟನೆ ಮಂಗಳವಾರ ವರದಿಯಾಗಿದೆ.

ಚಿಕ್ಕಬಳ್ಳಾಪುರದ ಗುಡಿಬಂಡೆ ತಾಲ್ಲೂಕಿನ ಕೆರೇನಹಳ್ಳಿ ಗ್ರಾಮದಲ್ಲಿ ರೈತರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆಯಾಗಿದೆ. ಈ ಹಿಂದೆ ಇದೇ ಗ್ರಾಮದ ರೈತ ಕೃಷ್ಣಪ್ಪ ಸೇರಿದಂತೆ ಹಲವರ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಕೆರೇನಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಗಳ ಜನರೇ ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.

ಚಿರತೆ ಗ್ರಾಮದ ಬಳಿ ಪತ್ತೆಯಾಗುತ್ತಲೇ ಎಚ್ಚೆತ್ತ ಗ್ರಾಮಸ್ಥರು ಗುಂಪುಗೂಡಿ ದೊಣ್ಣೆ, ಬಲೆಗಳನ್ನು ಹಿಡಿದು ಚಿರತೆಯನ್ನು ಸೆರೆ ಹಿಡಿದಿದ್ದಾರೆ. ಮಂಗಳವಾರ ಮಧ್ಯಾಹ್ನ ಕೃಷ್ಣಪ್ಪ ಗ್ರಾಮದ ಸಮೀಪ ಕುರಿಗಳನ್ನು ಮೇಯಿಸುತ್ತಿದ್ದರು. ಈ ವೇಳೆ ಅವರ ಮೇಲೆ ಚಿರತೆ ದಾಳಿ ಮಾಡಿದೆ.

ಅವರು ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ. ವಿಷಯ ತಿಳಿದು ಕೆರೇನಹಳ್ಳಿ, ವರ್ಲಕೊಂಡ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಜನರು ದೊಣ್ಣೆ, ಬಲೆ ಹಿಡಿದು ಸ್ಥಳಕ್ಕೆ ಬಂದರು. ‍ಪೊದೆಗಳ ನಡುವೆ ಅಡಗಿದ್ದ ಚಿರತೆ ಸೆರೆ ಹಿಡಿದರು.

ರೈತ ಪ್ರಾಣಾಪಾಯದಿಂದ ಪಾರು

ಇನ್ನು ತಾಲೂಕಿನ ವರ್ಲಕೊಂಡ ಗ್ರಾಮದ ವರಹಗಿರಿ ಬೆಟ್ಟದ ಮೇಲಿರುವ ಚಿರತೆ ಕೇರೇನಹಳ್ಳಿ ಗ್ರಾಮದ ರೈತನ ಮೇಲೆ ಚಿರತೆ ದಾಳಿ ಮಾಡಿತ್ತು. ರೈತ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಜು.1ರ ಮಂಗಳವಾರ ನಡೆದಿದೆ. ಕೆರೇನಹಳ್ಳಿ ಗ್ರಾಮದ ರಾಮಕೃಷ್ಣಪ್ಪ ಎಂಬವರು ಚಿರತೆ ದಾಳಿಗೊಳಗಾಗಿ ಪ್ರಾಣಾಪಾಯದಿಂದ ಪಾರಾಗಿದ್ದರು.

ಇತ್ತೀಚೆಗೆ ವರಹಗಿರಿ ಬೆಟ್ಟದ ಮೇಲೆ ರಾಜಾರೋಷವಾಗಿ ಓಡಾಡಿಕೊಂಡು, ಬಂಡೆಯ ಮೇಲೆ ವಿಶ್ರಾಂತಿ ಪಡೆಯುವ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಸಾರ್ವಜನಿಕ ವಲಯದಲ್ಲಿ ಭಯದ ಭೀತಿ ಹುಟ್ಟಿತ್ತು. ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಬೋನ್ ಕೂಡಾ ಅಳವಡಿಸಿದ್ದರು. ಆದರೆ ಇದೀಗ ಚಿರತೆಯನ್ನು ಗ್ರಾಮಸ್ಥರೇ ಸೆರೆ ಹಿಡಿದಿದ್ದಾರೆ.

ಅರಣ್ಯ ಇಲಾಖೆ ವಿರುದ್ಧ ಆಕ್ರೋಶ

ಇನ್ನು ವರ್ಲಕೊಂಡ ಬೆಟ್ಟದ ಸಮೀಪ ಸುಮಾರು ವರ್ಷಗಳಿಂದ ಚಿರತೆಗಳು ಕಾಣಿಸಿಕೊಂಡು ಸಾರ್ವಜನಿಕರಿಗೆ, ರೈತರಿಗೆ ತೊಂದರೆ ಕೊಡುತ್ತಿದ್ದರೂ, ಅರಣ್ಯ ಇಲಾಖೆ ಕೇವಲ ಬೋನ್ ಅಳವಡಿಸಿ, ಸುಮ್ಮನಾಗಿ, ಅದನ್ನು ಸೆರೆ ಹಿಡಿಯಲು ಮುಂದಾಗುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT