ಸಾಂದರ್ಭಿಕ ಚಿತ್ರ 
ರಾಜ್ಯ

ದಾವಣಗೆರೆ: ಬಿಜೆಪಿ ಮುಖಂಡನ ಮನೆಯಲ್ಲಿ UPS ಸ್ಫೋಟಗೊಂಡು ಇಬ್ಬರು ಸಾವು

ರಾತ್ರಿ ವೇಳೆ ರುದ್ರಮುನಿ ಅವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಮನೆಯಲ್ಲಿದ್ದ ಯುಪಿಎಸ್ ಉಪಕರಣವು ಅನಿರೀಕ್ಷಿತವಾಗಿ ಸ್ಫೋಟಗೊಂಡಿದ್ದು, ಇದರಿಂದ ದಟ್ಟ ಹೊಗೆ ಇಡೀ ಮನೆಗೆ ವ್ಯಾಪಿಸಿದೆ.

ದಾವಣಗೆರೆ: ಮನೆಯೊಂದರಲ್ಲಿದ್ದ ಯುಪಿಎಸ್ ಸ್ಪೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ದಾವಣಗೆರೆಯ ಕಾಯಿಪೇಟೆಯಲ್ಲಿ ಯುಪಿಎಸ್ ಸ್ಪೋಟಗೊಂಡ ಪರಿಣಾಮ ಅಗ್ನಿ ಅವಘಡ ಸಂಭವಿಸಿದ್ದು, ಈ ದುರಂತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಮೃತರನ್ನು ವಿಮಲಾಬಾಯಿ ಮತ್ತು ಕುಮಾರ್ ಜೈನ್ಎಂದು ಗುರುತಿಸಲಾಗಿದೆ. ಬಿಜೆಪಿ ಮುಖಂಡ ರುದ್ರಮುನಿಸ್ವಾಮಿ ಹಿರೇಮಠ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲಾಗಿದೆ.

ರಾತ್ರಿ ವೇಳೆ ರುದ್ರಮುನಿ ಅವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಮನೆಯಲ್ಲಿದ್ದ ಯುಪಿಎಸ್ ಉಪಕರಣವು ಅನಿರೀಕ್ಷಿತವಾಗಿ ಸ್ಫೋಟಗೊಂಡಿದ್ದು, ಇದರಿಂದ ದಟ್ಟ ಹೊಗೆ ಇಡೀ ಮನೆಗೆ ವ್ಯಾಪಿಸಿದೆ. ಘಟನೆ ಸಂಭವಿಸಿದಾಗ ಮನೆಯಲ್ಲಿ ಒಟ್ಟು ಆರು ಜನರಿದ್ದರು. ಇವರ ಪೈಕಿ ನಾಲ್ವರು ಮನೆಯ ಹಿಂದಿನ ಬಾಗಿಲಿನಿಂದ ತಕ್ಷಣವೇ ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಕುಮಾರ್ ಜೈನ್ ಮತ್ತು ವಿಮಲಾಬಾಯಿ ಅವರಿಗೆ ದಟ್ಟ ಹೊಗೆಯಿಂದಾಗಿ ತಪ್ಪಿಸಿಕೊಳ್ಳಲು ಸಾಧ್ಯವಾಗದೆ ಉಸಿರುಗಟ್ಟಿ ಮೃತಪಟ್ಟಿದ್ದಾರೆ.

ಈ ಘಟನೆ ಕುರಿತು ಸ್ಥಳೀಯ ಬಸವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುಪಿಎಸ್ ಸ್ಫೋಟಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ, ತಾಂತ್ರಿಕ ದೋಷ ಅಥವಾ ಉಪಕರಣದ ನಿರ್ವಹಣೆಯ ಕೊರತೆಯು ಈ ದುರ್ಘಟನೆಗೆ ಕಾರಣವಾಗಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT