ಸಾಂದರ್ಭಿಕ ಚಿತ್ರ 
ರಾಜ್ಯ

ದಾವಣಗೆರೆ: ಬಿಜೆಪಿ ಮುಖಂಡನ ಮನೆಯಲ್ಲಿ UPS ಸ್ಫೋಟಗೊಂಡು ಇಬ್ಬರು ಸಾವು

ರಾತ್ರಿ ವೇಳೆ ರುದ್ರಮುನಿ ಅವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಮನೆಯಲ್ಲಿದ್ದ ಯುಪಿಎಸ್ ಉಪಕರಣವು ಅನಿರೀಕ್ಷಿತವಾಗಿ ಸ್ಫೋಟಗೊಂಡಿದ್ದು, ಇದರಿಂದ ದಟ್ಟ ಹೊಗೆ ಇಡೀ ಮನೆಗೆ ವ್ಯಾಪಿಸಿದೆ.

ದಾವಣಗೆರೆ: ಮನೆಯೊಂದರಲ್ಲಿದ್ದ ಯುಪಿಎಸ್ ಸ್ಪೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ದಾವಣಗೆರೆಯ ಕಾಯಿಪೇಟೆಯಲ್ಲಿ ಯುಪಿಎಸ್ ಸ್ಪೋಟಗೊಂಡ ಪರಿಣಾಮ ಅಗ್ನಿ ಅವಘಡ ಸಂಭವಿಸಿದ್ದು, ಈ ದುರಂತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಮೃತರನ್ನು ವಿಮಲಾಬಾಯಿ ಮತ್ತು ಕುಮಾರ್ ಜೈನ್ಎಂದು ಗುರುತಿಸಲಾಗಿದೆ. ಬಿಜೆಪಿ ಮುಖಂಡ ರುದ್ರಮುನಿಸ್ವಾಮಿ ಹಿರೇಮಠ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲಾಗಿದೆ.

ರಾತ್ರಿ ವೇಳೆ ರುದ್ರಮುನಿ ಅವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಮನೆಯಲ್ಲಿದ್ದ ಯುಪಿಎಸ್ ಉಪಕರಣವು ಅನಿರೀಕ್ಷಿತವಾಗಿ ಸ್ಫೋಟಗೊಂಡಿದ್ದು, ಇದರಿಂದ ದಟ್ಟ ಹೊಗೆ ಇಡೀ ಮನೆಗೆ ವ್ಯಾಪಿಸಿದೆ. ಘಟನೆ ಸಂಭವಿಸಿದಾಗ ಮನೆಯಲ್ಲಿ ಒಟ್ಟು ಆರು ಜನರಿದ್ದರು. ಇವರ ಪೈಕಿ ನಾಲ್ವರು ಮನೆಯ ಹಿಂದಿನ ಬಾಗಿಲಿನಿಂದ ತಕ್ಷಣವೇ ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಕುಮಾರ್ ಜೈನ್ ಮತ್ತು ವಿಮಲಾಬಾಯಿ ಅವರಿಗೆ ದಟ್ಟ ಹೊಗೆಯಿಂದಾಗಿ ತಪ್ಪಿಸಿಕೊಳ್ಳಲು ಸಾಧ್ಯವಾಗದೆ ಉಸಿರುಗಟ್ಟಿ ಮೃತಪಟ್ಟಿದ್ದಾರೆ.

ಈ ಘಟನೆ ಕುರಿತು ಸ್ಥಳೀಯ ಬಸವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುಪಿಎಸ್ ಸ್ಫೋಟಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ, ತಾಂತ್ರಿಕ ದೋಷ ಅಥವಾ ಉಪಕರಣದ ನಿರ್ವಹಣೆಯ ಕೊರತೆಯು ಈ ದುರ್ಘಟನೆಗೆ ಕಾರಣವಾಗಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

12 ಸಾವಿರ ವರ್ಷಗಳಲ್ಲೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!

"ಧರ್ಮ ಗ್ರಂಥಗಳಲ್ಲಿ ಧ್ವಜಾರೋಹಣದ ಉಲ್ಲೇಖ ಇಲ್ಲ": ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣಕ್ಕೆ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತೆ ತಗಾದೆ!

ಕಾಂಗ್ರೆಸ್‌ನಲ್ಲಿ ಅವರ ಶಾಸಕರನ್ನ ಅವರೇ ಖರೀದಿ ಮಾಡುತ್ತಿದ್ದಾರೆ; ಒಬ್ಬರಿಗೆ 100 ಕೋಟಿ ರೂ ಆಫರ್‌; ಕಾರು, ಫ್ಲ್ಯಾಟು ಗಿಫ್ಟು!

SCROLL FOR NEXT