ಡಬಲ್ ಬ್ಯಾರೆಲ್ ಗನ್ ಹಿಡಿದು ನಿಂತಿರುವ ನಿವೃತ್ತ ಪೊಲೀಸ್ ಅಧಿಕಾರಿ. 
ರಾಜ್ಯ

ಡಬಲ್ ಬ್ಯಾರೆಲ್ ಗನ್ ಹಿಡಿದು ನಿವೃತ್ತ ಪೊಲೀಸ್ ಅಧಿಕಾರಿ ಆಟಾಟೋಪ: ಕಾರ್ಮಿಕರಿಗೆ ಬೆದರಿಕೆ, ಕೆಲಕಾಲ ಆತಂಕದ ವಾತಾವರಣ ಸೃಷ್ಟಿ

ನಿವೃತ್ತ ಪೊಲೀಸ್ ಅಧಿಕಾರಿ ಜಯಪ್ರಕಾಶ್ ಅವರು, ಏಕಾಏಕಿ ಗನ್ ಹಿಡಿದು ಬಂದು ಲಾರಿ ಚಾಲಕ ಮತ್ತು ಅಲ್ಲೇ ಇದ್ದ ಕಟ್ಟಡ ಕಾರ್ಮಿಕರಿಗೆ ಏರು ದನಿಯಲ್ಲಿ ಬೆದರಿಕೆ ಹಾಕಿದ್ದಾರೆ.

ಬೆಂಗಳೂರು: ನಿರ್ಮಾಣ ಹಂತದ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ಡಬಲ್ ಬ್ಯಾರೆಲ್ ಗನ್ ಪ್ರದರ್ಶಿಸಿ ದರ್ಪ ತೋರಿರುವ ಘಟನೆಯೊಂದು ಸದಾಶಿವನಗರದಲ್ಲಿ ಸೋಮವಾರ ನಡೆದಿದೆ.

ತಮ್ಮ ಮನೆಯ ಮುಂದೆ ಕಂಟೈನರ್ ಲಾರಿಯೊಂದು ನಿಧಾನವಾಗಿ ಚಲಿಸಿದ್ದಕ್ಕೆ ಕೆರಳಿದ ನಿವೃತ್ತ ಪೊಲೀಸ್ ಅಧಿಕಾರಿ ಜಯಪ್ರಕಾಶ್ ಅವರು, ಏಕಾಏಕಿ ಗನ್ ಹಿಡಿದು ಬಂದು ಲಾರಿ ಚಾಲಕ ಮತ್ತು ಅಲ್ಲೇ ಇದ್ದ ಕಟ್ಟಡ ಕಾರ್ಮಿಕರಿಗೆ ಏರು ದನಿಯಲ್ಲಿ ಬೆದರಿಕೆ ಹಾಕಿದ್ದಾರೆ.

ಗೃಹ ಸಚಿವ ಜಿ ಪರಮೇಶ್ವರ ಅವರ ನಿವಾಸದ ಬಳಿಯೇ ಈ ಘಟನೆ ನಡೆದಿದ್ದು, ಪೊಲೀಸ್ ಅಧಿಕಾರಿಯ ಈ ವರ್ತನೆಗೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಈ ಘಟನೆಯನ್ನು ಸ್ಥಳೀಯ ನಿವಾಸಿಗಳು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಸೆರೆಹಿಡಿದಿದ್ದುಸ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ಬಳಿಕ ನಿವೃತ್ತ ಅಧಿಕಾರಿಯ ಗೂಂಡಾಗಿರಿ ವರ್ತನೆಗೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ.

ಘಟನೆಯ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಸದಾಶಿವನಗರ ಪೊಲೀಸರು ತಿಳಿಸಿದ್ದು, ಅಧಿಕಾರಿ ಬಂದೂಕನ್ನು ತೆಗೆದುಕೊಂಡು ಹೊರಬಂದಿದ್ದಾರೆ. ಈ ಬಗ್ಗೆ ಯಾವುದೇ ಔಪಚಾರಿಕ ದೂರು ದಾಖಲಾಗಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್