ಡಬಲ್ ಬ್ಯಾರೆಲ್ ಗನ್ ಹಿಡಿದು ನಿಂತಿರುವ ನಿವೃತ್ತ ಪೊಲೀಸ್ ಅಧಿಕಾರಿ. 
ರಾಜ್ಯ

ಡಬಲ್ ಬ್ಯಾರೆಲ್ ಗನ್ ಹಿಡಿದು ನಿವೃತ್ತ ಪೊಲೀಸ್ ಅಧಿಕಾರಿ ಆಟಾಟೋಪ: ಕಾರ್ಮಿಕರಿಗೆ ಬೆದರಿಕೆ, ಕೆಲಕಾಲ ಆತಂಕದ ವಾತಾವರಣ ಸೃಷ್ಟಿ

ನಿವೃತ್ತ ಪೊಲೀಸ್ ಅಧಿಕಾರಿ ಜಯಪ್ರಕಾಶ್ ಅವರು, ಏಕಾಏಕಿ ಗನ್ ಹಿಡಿದು ಬಂದು ಲಾರಿ ಚಾಲಕ ಮತ್ತು ಅಲ್ಲೇ ಇದ್ದ ಕಟ್ಟಡ ಕಾರ್ಮಿಕರಿಗೆ ಏರು ದನಿಯಲ್ಲಿ ಬೆದರಿಕೆ ಹಾಕಿದ್ದಾರೆ.

ಬೆಂಗಳೂರು: ನಿರ್ಮಾಣ ಹಂತದ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ಡಬಲ್ ಬ್ಯಾರೆಲ್ ಗನ್ ಪ್ರದರ್ಶಿಸಿ ದರ್ಪ ತೋರಿರುವ ಘಟನೆಯೊಂದು ಸದಾಶಿವನಗರದಲ್ಲಿ ಸೋಮವಾರ ನಡೆದಿದೆ.

ತಮ್ಮ ಮನೆಯ ಮುಂದೆ ಕಂಟೈನರ್ ಲಾರಿಯೊಂದು ನಿಧಾನವಾಗಿ ಚಲಿಸಿದ್ದಕ್ಕೆ ಕೆರಳಿದ ನಿವೃತ್ತ ಪೊಲೀಸ್ ಅಧಿಕಾರಿ ಜಯಪ್ರಕಾಶ್ ಅವರು, ಏಕಾಏಕಿ ಗನ್ ಹಿಡಿದು ಬಂದು ಲಾರಿ ಚಾಲಕ ಮತ್ತು ಅಲ್ಲೇ ಇದ್ದ ಕಟ್ಟಡ ಕಾರ್ಮಿಕರಿಗೆ ಏರು ದನಿಯಲ್ಲಿ ಬೆದರಿಕೆ ಹಾಕಿದ್ದಾರೆ.

ಗೃಹ ಸಚಿವ ಜಿ ಪರಮೇಶ್ವರ ಅವರ ನಿವಾಸದ ಬಳಿಯೇ ಈ ಘಟನೆ ನಡೆದಿದ್ದು, ಪೊಲೀಸ್ ಅಧಿಕಾರಿಯ ಈ ವರ್ತನೆಗೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಈ ಘಟನೆಯನ್ನು ಸ್ಥಳೀಯ ನಿವಾಸಿಗಳು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಸೆರೆಹಿಡಿದಿದ್ದುಸ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ಬಳಿಕ ನಿವೃತ್ತ ಅಧಿಕಾರಿಯ ಗೂಂಡಾಗಿರಿ ವರ್ತನೆಗೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ.

ಘಟನೆಯ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಸದಾಶಿವನಗರ ಪೊಲೀಸರು ತಿಳಿಸಿದ್ದು, ಅಧಿಕಾರಿ ಬಂದೂಕನ್ನು ತೆಗೆದುಕೊಂಡು ಹೊರಬಂದಿದ್ದಾರೆ. ಈ ಬಗ್ಗೆ ಯಾವುದೇ ಔಪಚಾರಿಕ ದೂರು ದಾಖಲಾಗಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT