ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಬೈಕ್ ಗೆ ಗೂಡ್ಸ್ ಲಾರಿ ಡಿಕ್ಕಿ; 19 ವರ್ಷದ ಸವಾರ ಸಾವು

ವಿನಯ್ ಕೆಂಗೇರಿಯಿಂದ ಬಿಡದಿ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಮಹೇಶ್ ಚಲಾಯಿಸುತ್ತಿದ್ದ ಗೂಡ್ಸ್ ಲಾರಿ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಬೈಕ್ ಎಡಕ್ಕೆ ಬಿದ್ದರೆ, ವಿನಯ್ ಬಲಭಾಗದಲ್ಲಿ ಬಿದ್ದಿದ್ದಾರೆ.

ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಗೂಡ್ಸ್ ಲಾರಿ ಡಿಕ್ಕಿ ಹೊಡೆದು 19 ವರ್ಷದ ಯುವಕ ಮೃತಪಟ್ಟಿರುವ ಘಟನೆ ಮೈಸೂರು ರಸ್ತೆಯಲ್ಲಿ ಬುಧವಾರ ನಡೆದಿದೆ. ಮೃತರನ್ನು ವಿನಯ್ ಬಿ ಎಂದು ಗುರುತಿಸಲಾಗಿದ್ದು, ಪೊಲೀಸರು ಟ್ರಕ್ ಚಾಲಕ ಮಹೇಶ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಸಂಜೆ 7.30ರಿಂದ 7.40ರ ನಡುವೆ ಈ ಘಟನೆ ನಡೆದಿದೆ. ವಿನಯ್ ಕೆಂಗೇರಿಯಿಂದ ಬಿಡದಿ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಮಹೇಶ್ ಚಲಾಯಿಸುತ್ತಿದ್ದ ಗೂಡ್ಸ್ ಲಾರಿ( ಕೆಎ 25 ಎ 9445) ಡಿಕ್ಕಿ ಹೊಡೆದಿದೆ. ಇದರಿಂದಾಗಿ ವಿನಯ್ ಕೆಳಗೆ ಬಿದಿದ್ದಾರೆ. ಬೈಕ್ ಎಡಕ್ಕೆ ಬಿದ್ದರೆ, ವಿನಯ್ ಬಲಭಾಗದಲ್ಲಿ ಬಿದ್ದಿದ್ದಾರೆ.

ಲಾರಿ ಹಿಂಭಾಗದ ಎಡ ಚಕ್ರವು ಅವರನ್ನು 20 ಮೀಟರ್‌ಗೂ ಹೆಚ್ಚು ದೂರ ಎಳೆದುಕೊಂಡು ಹೋಗಿದ್ದು, ತೀವ್ರ ಗಾಯಗಳಾಗಿತ್ತು. ತಲೆ, ಮುಖ ಮತ್ತು ಕೈಗಳಿಗೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಕೆಂಗೇರಿ ಸಂಚಾರ ಪೊಲೀಸರು ತಿಳಿಸಿದ್ದಾರೆ.

ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾದ ಲಾರಿ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT