ಕೆಫೆಯಲ್ಲಿ ಸಿಬ್ಬಂದಿ ಮೇಲೆ ಹಲ್ಲೆ  online desk
ರಾಜ್ಯ

ಹೆಚ್ಚುವರಿ ಟೀ-ಕಪ್ ಕೊಡದಿದ್ದಕ್ಕೆ ಕೆಫೆ ರಣಾಂಗಣ: ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ

ನಾಲ್ವರು ದುಷ್ಕರ್ಮಿಗಳು ಕೆಫೆ ಸಿಬ್ಬಂದಿ ಮೇಲೆ ದರ್ಪ ತೋರಿದ್ದಾರೆ. ಜು.02 ರಂದು ಸಂಜೆ 6:50ರ ಸುಮಾರಿಗೆ ಈ ಘಟನೆ ನಡೆದಿದೆ.

ಬೆಂಗಳೂರು: ಗ್ರಾಹಕರು ಹೆಚ್ಚುವರಿಯಾಗಿ ಕೇಳಿದ ಟೀ ಕಪ್ ಕೊಡಲು ನಿರಾಕರಿಸಿದ ಕೆಫೆ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಅಘಾತಕಾರಿ ಘಟನೆ ಬೆಂಗಳೂರಿನ ಶೇಷಾದ್ರಿಪುರಂ ನ ನಮ್ಮ ಫಿಲ್ಟರ್ ಕಾಫಿ ಶಾಪ್ ನಲ್ಲಿ ವರದಿಯಾಗಿದೆ

ನಾಲ್ವರು ದುಷ್ಕರ್ಮಿಗಳು ಕೆಫೆ ಸಿಬ್ಬಂದಿ ಮೇಲೆ ದರ್ಪ ತೋರಿದ್ದಾರೆ. ಜು.02 ರಂದು ಸಂಜೆ 6:50ರ ಸುಮಾರಿಗೆ ಈ ಘಟನೆ ನಡೆದಿದೆ. ಕಾಫಿ ಶಾಪ್‌ಗೆ ಬಂದಿದ್ದ ನಾಲ್ವರು ಕಾಫಿಯನ್ನು ಕೊಂಡು ಮತ್ತೊಂದು ಕಪ್‌ ಕೇಳಿದ್ದಾರೆ. ಈ ವೇಳೆ, ಹೋಟೆಲ್‌ ಸಿಬ್ಬಂದಿ ಕೊಡಲು ನಿರಾಕರಿಸಿದ್ದಾರೆ.

ಸಿಬ್ಬಂದಿಯ ಉತ್ತರದಿಂದ ತೀವ್ರ ಆಕ್ರೋಶಗೊಂಡ ನಾಲ್ವರು, ಸಿಬ್ಬಂದಿಗೆ ಅವಾಚ್ಯವಾಗಿ ನಿಂದಿಸಿ, ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಕಪಾಳಕ್ಕೆ ಹೊಡೆದು, ಮುಖಕ್ಕೆ ಗುದ್ದಿ, ಕಾಲಿನಿಂದ ಹೊಟ್ಟೆಗೆ ಒದ್ದಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗತೊಡಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT