ಓಂ ಪ್ರಕಾಶ್, ಪುತ್ರಿ ಕೃತಿಕಾ 
ರಾಜ್ಯ

ನಿವೃತ್ತ ಡಿಜಿಪಿ ಓಂ ಪ್ರಕಾಶ್ ಪುತ್ರಿ ಕೃತಿಕಾ ದಾಂಧಲೆ: ಬ್ಯೂಟಿ ಪಾರ್ಲರ್ ಗೆ ನುಗ್ಗಿ ವಸ್ತುಗಳಿಗೆ ಹಾನಿ, ಸಿಬ್ಬಂದಿ ಮೇಲೆ ಹಲ್ಲೆ

ಕೃತಿಕಾ ಸ್ವಲ್ಪ ಸಮಯದವರೆಗೆ ನಂದಿನಿ ಪಾರ್ಲರ್ ಹೊರಗೆ ನಿಂತು ಅಂಗಡಿ ಮಾಲೀಕರನ್ನು ದಿಟ್ಟಿಸಿ ನೋಡುತ್ತಿದ್ದರು. ಇದರಿಂದ ಆತಂಕಗೊಂಡ ಮಾಲೀಕರು ಅವರ ಬಳಿ ಬಂದು ವಿನಯದಿಂದ ಏನಾದರೂ ತಪ್ಪಾಗಿದೆಯೇ ಎಂದು ಕೇಳಿದರು.

ಅಹಿತಕರ ಘಟನೆಯೊಂದರಲ್ಲಿ ಇತ್ತೀಚೆಗೆ ಕೊಲೆಯಾಗಿದ್ದ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಅವರ ಪುತ್ರಿ ಕೃತಿಕಾ ಬೆಂಗಳೂರಿನ ತಮ್ಮ ನಿವಾಸ ಬಳಿಯ ಬ್ಯೂಟಿ ಪಾರ್ಲರ್ ನ್ನು ಧ್ವಂಸ ಮಾಡಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಸ್ಥಳೀಯ ನಿವಾಸಿಗಳು ಬೆಚ್ಚಿಬಿದ್ದ ಘಟನೆ ಸೋಮವಾರ ಸಂಜೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕೃತಿಕಾ ಅವರು ನಂದಿನಿ ಪಾರ್ಲರ್ ಗೆ ನುಗ್ಗಿ ಕೈಗೆ ಸಿಕ್ಕ ವಸ್ತುಗಳನ್ನು ಎಸೆದಿದ್ದು ಅವುಗಳೆಲ್ಲಾ ಪೀಸ್ ಪೀಸ್ ಆಗಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಅಲ್ಲದೆ ಅಲ್ಲಿನ ಸಿಬ್ಬಂದಿಗೆ ಕೂಡ ಥಳಿಸಿದ್ದಾರೆ.

ನಡೆದಿದ್ದೇನು?

ಕೃತಿಕಾ ಸ್ವಲ್ಪ ಸಮಯದವರೆಗೆ ನಂದಿನಿ ಪಾರ್ಲರ್ ಹೊರಗೆ ನಿಂತು ಅಂಗಡಿ ಮಾಲೀಕರನ್ನು ದಿಟ್ಟಿಸಿ ನೋಡುತ್ತಿದ್ದರು. ಇದರಿಂದ ಆತಂಕಗೊಂಡ ಮಾಲೀಕರು ಅವರ ಬಳಿ ಬಂದು ವಿನಯದಿಂದ ಏನಾದರೂ ತಪ್ಪಾಗಿದೆಯೇ ಎಂದು ಕೇಳಿದರು. ಇದಕ್ಕೆ ಕೃತಿಕಾ ಆಕ್ರಮಣಕಾರಿಯಾಗಿ ವರ್ತಿಸಿದರು ಎಂದು ತಿಳಿದುಬಂದಿದೆ. ನಂತರ ಅವರು ಬ್ಯೂಟಿ ಪಾರ್ಲರ್ ಒಳಗೆ ನುಗ್ಗಿ ವಸ್ತುಗಳನ್ನು ಒಡೆದುಹಾಕಲು ಪ್ರಾರಂಭಿಸಿದರು, ಸಾಕಷ್ಟು ವಸ್ತುಗಳನ್ನು ಹಾನಿಗೊಳಿಸಿದರು. ಇವರ ವರ್ತನೆ ಕಂಡು ಅಲ್ಲಿದ್ದವರು ಬೆಚ್ಚಿಬಿದ್ದರು ಎಂದು ತಿಳಿದುಬಂದಿದೆ.

ಪಾರ್ಲರ್ ಸಿಬ್ಬಂದಿ ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗ, ಕೃತಿಕಾ ಮಾಲೀಕರ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿ ಅವರು ಗಾಯಗೊಂಡರು. ಹಠಾತ್ ಪ್ರಕೋಪದಿಂದ ಭಯಭೀತರಾದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು. ಅಧಿಕಾರಿಗಳು ಸ್ಥಳಕ್ಕೆ ಬರುವ ಹೊತ್ತಿಗೆ, ಕೃತಿಕಾ ಏನೂ ಆಗಿಲ್ಲ ಎಂಬಂತೆ ವರ್ತಿಸುತ್ತಾ ಮನೆಗೆ ಹೋದರು ಎಂದು ತಿಳಿದುಬಂದಿದೆ.

ನಿವೃತ್ತ ಡಿಜಿಪಿ ಓಂ ಪ್ರಕಾಶ್ ಅವರ ಕೊಲೆಯಾದ ನಂತರ ಕೃತಿಕಾ ಪರಿಸ್ಥಿತಿ ತುಂಬಾ ಹೀನಾಯ ಸ್ಥಿತಿಯಲ್ಲಿದೆ ಎಂದು ಕುಟುಂಬದ ಆಪ್ತ ಮೂಲಗಳು ತಿಳಿಸಿವೆ. ಆಕೆಯ ತಂದೆ, ಮಾಜಿ ಉನ್ನತ ಪೊಲೀಸ್ ಅಧಿಕಾರಿ ಓಂ ಪ್ರಕಾಶ್ ಕೊಲೆಯಾಗಿದ್ದು, ತಾಯಿ ಜೈಲಿನಲ್ಲಿದ್ದಾರೆ. ಆಕೆಯ ಸಹೋದರ ಬೇರೆಡೆಗೆ ಸ್ಥಳಾಂತರಗೊಂಡಿದ್ದು, ಕೃತಿಕಾ ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT