ಬಿಜೆಪಿ (ಸಂಗ್ರಹ ಚಿತ್ರ) online desk
ರಾಜ್ಯ

ರಾಜ್ಯ ಸರ್ಕಾರದ ವಿರುದ್ಧ ಒಳ ಮೀಸಲಾತಿ ಅಸ್ತ್ರ ಪ್ರಯೋಗಿಸಲು BJP ಮುಂದು: ಆಗಸ್ಟ್ 1 ರಿಂದ ರಾಜ್ಯಾದ್ಯಂತ ಹೋರಾಟ!

ಜುಲೈ ಅಂತ್ಯದೊಳಗೆ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೆ ತರಲು ವಿಫಲವಾಗಿದ್ದೇ ಆದರೆ, ಆಗಸ್ಟ್ 1 ರಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು.

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಒಳ ಮೀಸಲಾತಿ ಅಸ್ತ್ರ ಪ್ರಯೋಗಿಸಲು ಬಿಜೆಪಿ ಮುಂದಾಗಿದ್ದು, ಆಗಸ್ಟ್ 1 ರಿಂದ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಅವರು, ಜುಲೈ ಅಂತ್ಯದೊಳಗೆ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೆ ತರಲು ವಿಫಲವಾಗಿದ್ದೇ ಆದರೆ, ಆಗಸ್ಟ್ 1 ರಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ಒಳ ಮೀಸಲಾತಿಯನ್ನು ಈಗಾಗಲೇ ಅನೇಕ ರಾಜ್ಯಗಳು ಜಾರಿಗೆ ತಂದಿವೆ. ಆದರೆ, ರಾಜ್ಯ ಸರ್ಕಾರ ಮಾತ್ರ ಪ್ರಕ್ರಿಯೆಯನ್ನು ವಿಳಂಬ ಮಾಡುತ್ತಿದೆ. ಈ ಮೂಲಕ ಅನುಷ್ಠಾನದ ವಿರುದ್ಧ ಪಿತೂರಿ ನಡೆಸುತ್ತಿರುವ ಕುರಿತು ಅನುಮಾನಗಳು ಮೂಡತೊಡಗಿವೆ ಎಂದು ತಿಳಿಸಿದರು.

ಬಸವರಾಜ ಬೊಮ್ಮಾಯಿ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರವು ಒಳ ಮೀಸಲಾತಿ ಕುರಿತು ನೀತಿಯನ್ನು ರೂಪಿಸಲು ಆಗಿನ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿತ್ತು. ಇದೀಗ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ಸರ್ಕಾರ ಒಳಮೀಸಲಾತಿಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ಆಂಧ್ರಪ್ರದೇಶ, ತೆಲಂಗಾಣ ಮತ್ತು ಹರಿಯಾಣ ಒಳ ಮೀಸಲಾತಿಯನ್ನು ಜಾರಿಗೆ ತಂದಿವೆ. ಆದರೆ, ರಾಮಯ್ಯ ಸರ್ಕಾರ ಅದನ್ನು ಜಾರಿಗೆ ತರುವ ಬದಲು ಮತ ಬ್ಯಾಂಕ್ ರಾಜಕೀಯದಲ್ಲಿ ತೊಡಗಿದೆ. ಜನರಲ್ಲಿ ಗೊಂದಲ ಸೃಷ್ಟಿಸಲು ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯನ್ನು ರಚಿಸಲಾಗಿದೆ ಎಂದು ಆರೋಪಿಸಿದರು.

ಕೇಂದ್ರದ ಮಾಡಿ ಸಚಿವ ಎ. ನಾರಾಯಣಸ್ವಾಮಿ ಅವರು ಮಾತನಾಡಿ, ಜಾತಿ ಸಮೀಕ್ಷೆಯನ್ನು ಸರಿಯಾಗಿ ಮಾಡಲಾಗಿಲ್ಲ. ಸಮೀಕ್ಷೆ ನಡೆಸದಿದ್ದರೂ ಸಮೀಕ್ಷೆಯಾಗಿದೆ ಎಂದು ಹೇಳಿ ಗಣತಿದಾರರು ಮನೆಗಳ ಹೊರಗೆ ಸ್ಟಿಕ್ಕರ್‌ಗಳನ್ನು ಅಂಟಿಸುತ್ತಿದ್ದಾರೆಂದು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!