ಶರತ್ 
ರಾಜ್ಯ

ಚಿಕ್ಕಮಗಳೂರು: ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಬೆತ್ತಲೆ ಸ್ಥಿತಿಯಲ್ಲಿ ಶವವಾಗಿ ಪತ್ತೆ

33 ವರ್ಷದ ಶರತ್ ಅವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ‌ ನೀಲಗಿರಿ ಪ್ಲಾಂಟೇಶನ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವಾಗಲೇ ನಾಪತ್ತೆಯಾಗಿದ್ದರು.

ಚಿಕ್ಕಮಗಳೂರು: ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್​ ಶರತ್ ಅವರು ಶುಕ್ರವಾರ ಬೆತ್ತಲೆ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

33 ವರ್ಷದ ಶರತ್ ಅವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ‌ ನೀಲಗಿರಿ ಪ್ಲಾಂಟೇಶನ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವಾಗಲೇ ನಾಪತ್ತೆಯಾಗಿದ್ದರು.

ನೀಲಗಿರಿ ಪ್ಲಾಂಟೇಶನ್ ನಿಂದ 5 ಕಿಮೀ ದೂರದಲ್ಲಿ ಇಂದು ಬೆತ್ತಲೆ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಶರತ್ ಅವರ ಶವ ಪತ್ತೆಯಾಗಿದೆ.

ಶರತ್ ಮೂಲತಃ ಕೊಡಗು ಜಿಲ್ಲೆಯ ಕಾಲೂರು ನಿವಾಸಿಯಾಗಿದ್ದು. ಕಳೆದ ನಾಲ್ಕು ತಿಂಗಳ‌ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ KFDC ವಿಭಾಗದಿಂದ ಸಖರಾಯಪಟ್ಟಣ ಅರಣ್ಯ ಇಲಾಖೆಯ KFDC ವಿಭಾಗಕ್ಕೆ ವರ್ಗಾವಣೆಯಾಗಿದ್ದರು. ನೀಲಗಿರಿ ಪ್ಲಾಂಟೇಶನ್ ನಲ್ಲಿ ಜೂನ್ 24 ರಂದು ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಶರತ್ ನಿಗೂಢವಾಗಿ ನಾಪತ್ತೆಯಾಗಿದ್ದರು.

ಶರತ್ ಗಾಗಿ ನೂರಾರು ಅರಣ್ಯ ಇಲಾಖೆಯ ಸಿಬ್ಬಂದಿ, ಪೊಲೀಸರು ನೀಲಗಿರಿ ಪ್ಲಾಂಟೇಶನ್, ಅರಣ್ಯದಲ್ಲಿ ಹುಡುಕಾಟ ನಡೆಸಿದ್ದರು. ಹುಡುಕಾಟದ ವೇಳೆ ಶರತ್ ಬೈಕ್ ಒಂದು ಕಡೆ ಸಿಕ್ಕಿದ್ರೆ ಬಟ್ಟೆ ಪರ್ಸ್ ಮತ್ತೊಂದು ದಿಕ್ಕಿನಲ್ಲಿ ಪತ್ತೆಯಾಗಿತ್ತು. ಮೊಬೈಲ್ ಶರತ್ ಶವ ಸಿಕ್ಕ ಸ್ಥಳದಿಂದ 20 ಕಿಮೀ ದೂರದಲ್ಲಿ ಪತ್ತೆಯಾಗಿತ್ತು. ಇಂದು ಚಿಕ್ಕಮಗಳೂರು, ಹಾಸನ ಅರಣ್ಯ ಇಲಾಖೆಯ ನೂರಾರು ಸಿಬ್ಬಂದಿಗಳು, ಪೊಲೀಸರು ಅರಣ್ಯದಲ್ಲಿ ಹುಡುಕಾಟ ನಡೆಸುವಾಗ ಶರತ್ ಶವ ಪತ್ತೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel