ಅಮಾನತು (ಸಾಂಕೇತಿಕ ಚಿತ್ರ) 
ರಾಜ್ಯ

ಜಾತಿ ಗಣತಿ ವೇಳೆ ಕರ್ತವ್ಯ ಲೋಪ: ನಿರ್ಲಕ್ಷ್ಯ ವಹಿಸಿದ್ದ ಮತ್ತೋರ್ವ ಸಿಬ್ಬಂದಿ ಅಮಾನತು

ವಸಂತನಗರ ಉಪವಿಭಾಗದಲ್ಲಿ ಕಂದಾಯ ಪರಿವೀಕ್ಷಕಿಯಾಗಿರುವ ಕವಿತಾ ಅವರನ್ನು ಅಮಾನತುಗೊಳಿಸಲಾಗಿದೆ.

ಬೆಂಗಳೂರು: ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿಯನ್ನು ಕಲ್ಪಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಸಮೀಕ್ಷೆ ವೇಳೆ ಮನೆ ಮನೆಗೆ ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯಲೋಪ ಎಸಗಿದ್ದ ಮತ್ತೋರ್ವ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ವಸಂತನಗರ ಉಪವಿಭಾಗದಲ್ಲಿ ಕಂದಾಯ ಪರಿವೀಕ್ಷಕಿಯಾಗಿರುವ ಕವಿತಾ ಅವರನ್ನು ಅಮಾನತುಗೊಳಿಸಲಾಗಿದೆ.

ಕವಿತಾ ಅವರನ್ನು ಸರ್ವೆ ಸಮೀಕ್ಷೆ ಕಾರ್ಯಕ್ಕೆ ವಾರ್ಡಿನ ಮೇಲ್ವಿಚಾರಕರಾಗಿ ನಿಯೋಜಿಸಲಾಗಿತ್ತು. ವಾರ್ಡಿನ ವ್ಯಾಪ್ತಿಯಲ್ಲಿ ಈಗಾಗಲೇ ಸಮೀಕ್ಷೆ ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ಮನೆಯ ಮಾಲೀಕರು, ನಿವಾಸಿಗಳನ್ನು ಸಂಪರ್ಕಿಸಿದಾಗ ತಮಿಳುನಾಡು ಹಾಗೂ ಇತರೆ ರಾಜ್ಯದ ಪರಿಶಿಷ್ಟ ಜಾತಿ ಎಂಬುದಾಗಿ ಮಾಹಿತಿ ನೀಡಿದ ಸಂದರ್ಭದಲ್ಲಿ ಅಂತಹ ಕುಟುಂಬಗಳನ್ನು ಹಳೆ ಆ್ಯಪ್ ನಲ್ಲಿ ನಾನ್ ಎಸ್‍ಸಿ ಹೌಸ್ ಹೋಲ್ಡ್ ಎಂದು ಪರಿಗಣಿಸಲಾಗಿದೆ.

ಆದರೆ ಹೊಸ ಆಪ್ ನಲ್ಲಿ ಗಣತಿದಾರರು ಅಂತಹ ಕುಟುಂಬಗಳನ್ನು ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ ಕುಟುಂಬಗಳೆಂದು ಪರಿಗಣಿಸಿ, ಹೊಸ ಆ್ಯಪ್ ನಲ್ಲಿ ಫೊಟೋ ತೆಗೆದು ಅಪ್ ಲೋಡ್ ಮಾಡಿ ಅನಾವಶ್ಯಕವಾಗಿ ಹಳೆ ಆ್ಯಪ್ ನಲ್ಲಿ ಸಮೀಕ್ಷೆ ಮಾಡಿರುವ ಕುಟುಂಬಗಳಿಗೂ ಹೊಸ ಆ್ಯಪ್ ನಲ್ಲಿ ಅಪ್‍ಲೋಡ್ ಮಾಡಿರುವ ಕುಟುಂಬಗಳಿಗೂ ಅಜಗಜಾಂತರ ವ್ಯತ್ಯಾಸ ಮಾಡಿದ್ದಾರೆ. ಹೀಗಾಗಿ ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT