ಎಚ್​ಕೆ ಪಾಟೀಲ್ 
ರಾಜ್ಯ

ಅಕ್ರಮ ಗಣಿಗಾರಿಕೆ ಪ್ರಕರಣಗಳ ಪರಿಶೀಲನೆಗೆ ಎಚ್ ಕೆ ಪಾಟೀಲ್ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ಒಂದು ತಿಂಗಳೊಳಗೆ ತನ್ನ ವರದಿಯನ್ನು ಸಲ್ಲಿಸಲು ಸಂಪುಟ ಉಪಸಮಿತಿಗೆ ಸೂಚಿಸಲಾಗಿದೆ.

ಬೆಂಗಳೂರು: 'ಅಕ್ರಮ ಗಣಿಗಾರಿಕೆ' ಪ್ರಕರಣಗಳಿಗೆ ಸಂಬಂಧಿಸಿದಂತೆ ಇದುವರೆಗೆ ಆಗಿರುವ ಪ್ರಗತಿ, ಆಗಬೇಕಾಗಿರುವ ಕ್ರಮಗಳು ಸೇರಿ ಹಲವು ವಿಷಯಗಳ ಕುರಿತು ಪರಿಶೀಲಿಸಲು ಮತ್ತು ಸೂಕ್ತ ಕ್ರಮಗಳನ್ನು ಶಿಫಾರಸು ಮಾಡಲು ರಾಜ್ಯ ಸರ್ಕಾರ ಶನಿವಾರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ನೇತೃತ್ವದಲ್ಲಿ ಆರು ಸದಸ್ಯರ ಸಂಪುಟ ಉಪಸಮಿತಿ ರಚಿಸಿದೆ.

ಒಂದು ತಿಂಗಳೊಳಗೆ ತನ್ನ ವರದಿಯನ್ನು ಸಲ್ಲಿಸಲು ಸಂಪುಟ ಉಪಸಮಿತಿಗೆ ಸೂಚಿಸಲಾಗಿದೆ.

ಗೃಹ ಸಚಿವ ಜಿ ಪರಮೇಶ್ವರ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪ, ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹಾದೇವಪ್ಪ, ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರು ಸಂಪುಟ ಉಪಸಮಿತಿಯ ಸದಸ್ಯರಾಗಿದ್ದಾರೆ.

ಜುಲೈ 2 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಉಪಸಮಿತಿ ರಚಿಸಲು ನಿರ್ಧರಿಸಲಾಗಿತ್ತು.

"ಗಣಿಗಾರಿಕೆಯಲ್ಲಿನ ಅಕ್ರಮಗಳ ಬಗ್ಗೆ, ವಿಶೇಷವಾಗಿ ರಿಕವರಿ ಆಯುಕ್ತರ ನೇಮಕ ಮತ್ತು ಪ್ರಕರಣಗಳ ತ್ವರಿತ ವಿಲೇವಾರಿಗಾಗಿ ಫಾಸ್ಟ್-ಟ್ರ್ಯಾಕ್ ನ್ಯಾಯಾಲಯ ಸ್ಥಾಪಿಸುವ ಬಗ್ಗೆ ಚರ್ಚಿಸಲು ಮತ್ತು ಸೂಕ್ತ ಶಿಫಾರಸುಗಳನ್ನು ಮಾಡಲು ಸಂಪುಟ ಉಪಸಮಿತಿ ರಚಿಸಲಾಗಿದೆ" ಎಂದು ಅಧಿಕೃತ ಟಿಪ್ಪಣಿಯಲ್ಲಿ ತಿಳಿಸಲಾಗಿದೆ.

ಅಕ್ರಮ ಗಣಿಗಾರಿಕೆ ಪ್ರಕರಣಗಳನ್ನು "ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವಲ್ಲಿ ಸರ್ಕಾರ ವಿಫಲವಾಗಿದೆ" ಎಂದು ಎಚ್ ಕೆ ಪಾಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಅಲ್ಲದೆ ಎಚ್ ಕೆ ಪಾಟೀಲ್ ಅವರು ಅಪರಾಧಿಗಳಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳುವುದು ಮತ್ತು ರಾಜ್ಯದ ಕಳೆದುಹೋದ ಸಂಪತ್ತನ್ನು ಮರಳಿ ಪಡೆಯುವುದು ಸೇರಿದಂತೆ ಹಲವು ಕಳವಳಗಳನ್ನು ವ್ಯಕ್ತಪಡಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್