ಸಂಗ್ರಹ ಚಿತ್ರ 
ರಾಜ್ಯ

ಜಾತಿ ಸಮೀಕ್ಷೆ: ಈವರೆಗೆ 1.48 ಕೋಟಿ ರೂ ವ್ಯಯಿಸಿದ BBMP; ಮನೆ-ಮನೆಗೆ ಸ್ಟಿಕ್ಕರ್‌ ಅಂಟಿಸಲು 70 ಲಕ್ಷ ರೂ ಖರ್ಚು!

ಸ್ಟಿಕ್ಕರ್‌ಗಳು, ಕರಪತ್ರಗಳ ವಿತರಣೆ ಮತ್ತು ಕಾರ್ಮಿಕರನ್ನು ತೊಡಗಿಸಿಕೊಳ್ಳುವುದು ಸೇರಿದಂತೆ ಸಮೀಕ್ಷೆಗೆ ಅಂದಾಜು 1.75 ಕೋಟಿ ರೂ. ವೆಚ್ಚವಾಗಿದೆ.

ಬೆಂಗಳೂರು: ಬಿಬಿಎಂಪಿ ತನ್ನ ವ್ಯಾಪ್ತಿಯಲ್ಲಿ ಎಸ್‌ಸಿ ಜಾತಿ ಸಮೀಕ್ಷೆಗೆ ಇದೂವರೆಗೆ 1.48 ಕೋಟಿ ರೂ. ಖರ್ಚು ಮಾಡಿದೆಯೇ? ಹೌದು, ಎನ್ನುತ್ತಿದೆ ಪಾಲಿಕೆಯ ಮೂಲಗಳು...

ಸಮೀಕ್ಷೆಯನ್ನು ಖಾತ್ರಿಪಡಿಸುವ ಉದ್ದೇಶದಿಂದ ಮನೆ ಮನೆಗಳಿಗೆ ಸ್ಟಿಕ್ಕರ್ ಗಳನ್ನು ಅಂಟಿಸಲಾಗುತ್ತಿದ್ದು, ಇದಕ್ಕಾಗಿ ರೂ.70 ಲಕ್ಷ ಹಾಗೂ ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಸಮೀಕ್ಷಾ ಜಾಗೃತಿ ಮೂಡಿಸಲು 28 ಲಕ್ಷ ರೂ. ಖರ್ಚು ಮಾಡಿದೆ ಎಂದು ತಿಳಿದುಬಂದಿದೆ.

ಸುರಲ್ಕರ್ ವಿಕಾಸ್ ಕಿಶೋರ್ ಅವರು ಮಾತನಾಡಿ, ಸ್ಟಿಕ್ಕರ್‌ಗಳು, ಕರಪತ್ರಗಳ ವಿತರಣೆ ಮತ್ತು ಕಾರ್ಮಿಕರನ್ನು ತೊಡಗಿಸಿಕೊಳ್ಳುವುದು ಸೇರಿದಂತೆ ಸಮೀಕ್ಷೆಗೆ ಅಂದಾಜು 1.75 ಕೋಟಿ ರೂ. ವೆಚ್ಚವಾಗಿದೆ. ಸಮೀಕ್ಷೆಯ ವೆಚ್ಚವು ಪೂರ್ಣಗೊಳ್ಳುವ ಹೊತ್ತಿಗೆ 3 ಕೋಟಿ ರೂ. ತಲುಪಬಹುದು ಎಂದು ಹೇಳಿದ್ದಾರೆ.

ಬೀದಿ ನಾಟಕಗಳು, ಕಿರುಚಿತ್ರಗಳು, ಸಾಮಾಜಿಕ ಮಾಧ್ಯಮ, ಐಇಸಿ ಮತ್ತು ಇತರ ವೇದಿಕೆಗಳ ಮೂಲಕ ಎಸ್‌ಸಿ ಜನಸಂಖ್ಯೆಯ ಸಮೀಕ್ಷೆಯ ಕುರಿತು ಜಾಗೃತಿ ಮೂಡಿಸಲು ಬಿಬಿಎಂಪಿ ವಿಸ್ತೃತ ಅಭಿಯಾನವನ್ನು ಪ್ರಾರಂಭಿಸಿದೆ ಎಂದು ಕಿಶೋರ್ ಅವರು ತಿಳಿಸಿದ್ದಾರೆ.

ಫೇಸ್‌ಬುಕ್, ಯೂಟ್ಯೂಬ್, ಇನ್‌ಸ್ಟಾಗ್ರಾಮ್ ಮತ್ತು ಇತರ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಎರಡು ಕಿರುಚಿತ್ರಗಳಿಗೆ 28 ಲಕ್ಷ ರೂ. ವೆಚ್ಚವಾಗಿದೆ ಎಂದು ಬಿಬಿಎಂಪಿ ಮೂಲಗಳು ತಿಳಿಸಿವೆ.

ಶೇ.18 ಜಿಎಸ್‌ಟಿ ಸೇರಿದಂತೆ, ಪಾಲಿಕೆಯ ಖರ್ಚು ಸುಮಾರು 49,56,000 ರೂ.ಗಳಾಗಿದೆ. ಕ್ಯಾಮೆರಾ, ಕ್ಯಾಮೆರಾಮನ್, ಚಿತ್ರಕಥೆಗಾರರು, ಧ್ವನಿವರ್ಧಕ ಕಲಾವಿದರು ಮತ್ತು ಸಂಗೀತಗಾರರನ್ನು ನೇಮಿಸಿಕೊಳ್ಳಲು ಪಾಲಿಕೆಗೆ 12 ಲಕ್ಷ ರೂ.ಗಳಷ್ಟು ವೆಚ್ಚ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಇಷ್ಟೆಲ್ಲಾ ಖರ್ಚು ಮಾಡಲಾಗಿದೆ. ಈವರೆಗೂ ಬೆಂಗಳೂರು ನಗರದಲ್ಲಿ ಶೇ.60ರಷ್ಟು ಕೂಡ ಸರ್ವೇ ನಡೆದಿಲ್ಲ. ಅಲ್ಲದೆ, ಸಮೀಕ್ಷೆಯ ನೈಜತೆಯ ಬಗ್ಗೆ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದು, ಕರ್ತವ್ಯ ಲೋಪಕ್ಕಾಗಿ ಸಮೀಕ್ಷೆಯಲ್ಲಿ ಭಾಗವಹಿಸಿದ್ದ ಏಳು ಕಂದಾಯ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT