ಆರೋಪಿಗಳಾದ ಸುಧಾ-ಸಿದ್ದಿರಾಜು 
ರಾಜ್ಯ

ಬೆಂಗಳೂರು: ಚೀಟಿ ಹಣದ ಹೆಸರಲ್ಲಿ 600 ಜನರಿಗೆ ವಂಚನೆ; 40 ಕೋಟಿ ರೂ ಹಣದೊಂದಿಗೆ ದಂಪತಿ ಪರಾರಿ!

ಚೀಟಿ ಹಣದ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ಸಂಗ್ರಹಿಸಿದ್ದ ಸುಧಾ ಹಾಗೂ ಸಿದ್ದಿಚಾರಿ ದಂಪತಿ ಇದೀಗ ಸಾರ್ವಜನಿಕರಿಗೆ ಮೋಸ ಮಾಡಿ ಹಣದೊಂದಿಗೆ ಪರಾರಿಯಾಗಿದ್ದಾರೆ.

ಬೆಂಗಳೂರು: ಚೀಟಿ ಹಣದ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ಸಂಗ್ರಹಿಸಿದ್ದ ಸುಧಾ ಹಾಗೂ ಸಿದ್ದಿಚಾರಿ ದಂಪತಿ ಇದೀಗ ಸಾರ್ವಜನಿಕರಿಗೆ ಮೋಸ ಮಾಡಿ ಹಣದೊಂದಿಗೆ ಪರಾರಿಯಾಗಿದ್ದಾರೆ. ಬೆಂಗಳೂರಿನ ಜರಗನಹಳ್ಲಿಯಲ್ಲಿ ಘಟನೆ ನಡೆದಿದ್ದು ದಂಪತಿ ಸುಮಾರು 40 ಕೋಟಿ ರೂ. ಚೀಟಿ ಹಣದೊಂದಿಗೆ ಎಸ್ಕೇಪ್ ಆಗಿದ್ದಾರೆ. 20 ವರ್ಷಗಳಿಂದ ಜರಗನಹಳ್ಳಿಯಲ್ಲಿ ವಾಸವಾಗಿದ್ದ ದಂಪತಿ ಚೀಟಿ ವ್ಯವಹಾರದ ಹೆಸರಲ್ಲಿ 600ಕ್ಕೂ ಹೆಚ್ಚು ಜನರಿಂದ ಹಣ ಕಟ್ಟಿಸಿಕೊಂಡಿದ್ದರು. ಇವರನ್ನು ನಂಬಿದ ಜನರು 5 ರಿಂದ 10 ಲಕ್ಷದವರೆಗೂ ಹಣ ನೀಡಿದ್ದಾರೆ. ಆರಂಭದಲ್ಲಿ ಚೀಟಿ ಹಣ ಕೊಡುತ್ತಿದ್ದ ದಂಪತಿ ಕಳೆದ ಒಂದು ವರ್ಷದಿಂದ ಹಣ ನೀಡದೇ ಸತಾಯಿಸುತ್ತಿದ್ದರು. ಕಳೆದ ತಿಂಗಳ ಜೂನ್ 3ರಂದೇ ದಂಪತಿ ಪರಾರಿಯಾಗಿದ್ದು ಈ ಸಂಬಂಧ ಪುಟ್ಟೇನಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದೆ. ಅಲ್ಲದೆ ದಂಪತಿಗಳ ಬಂಧನಕ್ಕೆ ಮೂರು ತಂಡಗಳನ್ನು ರಚಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

SCROLL FOR NEXT