ಆರೋಪಿಗಳಾದ ಸುಧಾ-ಸಿದ್ದಿರಾಜು 
ರಾಜ್ಯ

ಬೆಂಗಳೂರು: ಚೀಟಿ ಹಣದ ಹೆಸರಲ್ಲಿ 600 ಜನರಿಗೆ ವಂಚನೆ; 40 ಕೋಟಿ ರೂ ಹಣದೊಂದಿಗೆ ದಂಪತಿ ಪರಾರಿ!

ಚೀಟಿ ಹಣದ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ಸಂಗ್ರಹಿಸಿದ್ದ ಸುಧಾ ಹಾಗೂ ಸಿದ್ದಿಚಾರಿ ದಂಪತಿ ಇದೀಗ ಸಾರ್ವಜನಿಕರಿಗೆ ಮೋಸ ಮಾಡಿ ಹಣದೊಂದಿಗೆ ಪರಾರಿಯಾಗಿದ್ದಾರೆ.

ಬೆಂಗಳೂರು: ಚೀಟಿ ಹಣದ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ಸಂಗ್ರಹಿಸಿದ್ದ ಸುಧಾ ಹಾಗೂ ಸಿದ್ದಿಚಾರಿ ದಂಪತಿ ಇದೀಗ ಸಾರ್ವಜನಿಕರಿಗೆ ಮೋಸ ಮಾಡಿ ಹಣದೊಂದಿಗೆ ಪರಾರಿಯಾಗಿದ್ದಾರೆ. ಬೆಂಗಳೂರಿನ ಜರಗನಹಳ್ಲಿಯಲ್ಲಿ ಘಟನೆ ನಡೆದಿದ್ದು ದಂಪತಿ ಸುಮಾರು 40 ಕೋಟಿ ರೂ. ಚೀಟಿ ಹಣದೊಂದಿಗೆ ಎಸ್ಕೇಪ್ ಆಗಿದ್ದಾರೆ. 20 ವರ್ಷಗಳಿಂದ ಜರಗನಹಳ್ಳಿಯಲ್ಲಿ ವಾಸವಾಗಿದ್ದ ದಂಪತಿ ಚೀಟಿ ವ್ಯವಹಾರದ ಹೆಸರಲ್ಲಿ 600ಕ್ಕೂ ಹೆಚ್ಚು ಜನರಿಂದ ಹಣ ಕಟ್ಟಿಸಿಕೊಂಡಿದ್ದರು. ಇವರನ್ನು ನಂಬಿದ ಜನರು 5 ರಿಂದ 10 ಲಕ್ಷದವರೆಗೂ ಹಣ ನೀಡಿದ್ದಾರೆ. ಆರಂಭದಲ್ಲಿ ಚೀಟಿ ಹಣ ಕೊಡುತ್ತಿದ್ದ ದಂಪತಿ ಕಳೆದ ಒಂದು ವರ್ಷದಿಂದ ಹಣ ನೀಡದೇ ಸತಾಯಿಸುತ್ತಿದ್ದರು. ಕಳೆದ ತಿಂಗಳ ಜೂನ್ 3ರಂದೇ ದಂಪತಿ ಪರಾರಿಯಾಗಿದ್ದು ಈ ಸಂಬಂಧ ಪುಟ್ಟೇನಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದೆ. ಅಲ್ಲದೆ ದಂಪತಿಗಳ ಬಂಧನಕ್ಕೆ ಮೂರು ತಂಡಗಳನ್ನು ರಚಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT