ಬಸವರಾಜ ರಾಯರೆಡ್ಡಿ-ಸಿದ್ದರಾಮಯ್ಯ 
ರಾಜ್ಯ

ನಿಮಗೆ ಉತ್ತಮ ರಸ್ತೆ ಬೇಕಂದ್ರೆ ಗ್ಯಾರಂಟಿ ಯೋಜನೆ ಬಂದ್ ಮಾಡ್ತೀವಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ!

ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ತಂದ ನಂತರ ರಾಜ್ಯದಲ್ಲಿ ಅಭಿವೃದ್ಧಿ ಎಂಬುದು ಮರೀಚಿಕೆಯಾಗಿದೆ. ಅಲ್ಲದೆ ಹಲವು ಬಾರಿ ಹಲವು ಶಾಸಕರು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮಾತುಗಳನ್ನು ಆಡಿದ್ದರು.

ಕೊಪ್ಪಳ: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ತಂದ ನಂತರ ರಾಜ್ಯದಲ್ಲಿ ಅಭಿವೃದ್ಧಿ ಎಂಬುದು ಮರೀಚಿಕೆಯಾಗಿದೆ. ಅಲ್ಲದೆ ಹಲವು ಬಾರಿ ಹಲವು ಶಾಸಕರು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮಾತುಗಳನ್ನು ಆಡಿದ್ದರು. ಇದೀಗ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು, 'ನಿಮಗೆ ಗ್ಯಾರಂಟಿ ಯೋಜನೆಯ ಅಕ್ಕಿ ಬ್ಯಾಡ ಅಂದರೆ ಆ ಹಣದಲ್ಲಿ ರಸ್ತೆ ಅಭಿವೃದ್ಧಿ ಮಾಡೋಣ. ನಿಂಗೆ ಉತ್ತಮ ರಸ್ತೆಗಳು ಬೇಕು ಅಂದರೆ ಅಕ್ಕಿ ಸೇರಿದಂತೆ ಎಲ್ಲವೂ ನಿಲ್ಲುತ್ತವೆ ಎಂದು ಹೇಳುವ ಮೂಲಕ ಗ್ಯಾರಂಟಿ ಯೋಜನೆ ಜಾರಿಗೊಳಿಸಿದ ಬಳಿಕ ರಾಜ್ಯದಲ್ಲಿ ಅಭಿವೃದ್ಧಿಗೆ ಹಣದ ಕೊರತೆ ಇದೆ ಎಂದು ಮತ್ತೊಮ್ಮೆ ಪರೋಕ್ಷವಾಗಿ ಹೇಳಿದ್ದಾರೆ.

ಕೊಪ್ಪಳದ ಕುಕನೂರು ತಾಲೂಕಿನ ರ್ಯಾವಣಿಕದಲ್ಲಿ ಪ್ರೌಢಶಾಲಾ ಕಟ್ಟಡ ಉದ್ಘಾಟನೆ ಕಾರ್ಯಕ್ರಮದ ವೇಳೆ, ರೈತರೊಬ್ಬರು 'ನಮ್ಮ ಹೊಲಕ್ಕೆ ಹೋಗುವ ರಸ್ತೆ ಮಾಡಿಕೊಡಿ' ಎಂದು ಮನವಿ ಮಾಡಿದರು. ಅದಕ್ಕೆ ಬಸವರಾಜ ರಾಯರೆಡ್ಡಿ ಅವರು ಈ ಮಾತನ್ನಾಡಿದರು. ಸದ್ಯ ಬಸವರಾಜ ರಾಯರೆಡ್ಡಿಯವರ ಈ ಹೇಳಿಕೆ ವಿಪಕ್ಷಗಳು ಸರ್ಕಾರದ ಮೇಲೆ ಮುಗಿಬೀಳಲು ದಾರಿ ಮಾಡಿಕೊಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್