ಗಾಯಗೊಂಡ ಹನುಮಂತ ಯರಗಂಟಿ 
ರಾಜ್ಯ

ರಾಯಚೂರು: ಮೊಹರಂ ಆಚರಣೆ ವೇಳೆ ಅಗ್ನಿ ಕುಂಡಕ್ಕೆ ಬಿದ್ದ ಯುವಕ, ಗಂಭೀರ ಗಾಯ

ದರ್ಗಾದ ಮುಂದೆ ಕೆಂಡ ಹಾಯಲು ಸಿದ್ಧಪಡಿಸಲಾದ ಅಗ್ನಿ ಕುಂಡದಲ್ಲಿ ಕಟ್ಟಿಗೆಗಳನ್ನು ಹಾಕಿ ಬೆಂಕಿ ಹಚ್ಚಲಾಗಿತ್ತು. ಈ ವೇಳೆ ಹನುಮಂತನಿಗೆ ಬೆಂಕಿಗೆ ಬಿದ್ದಿದ್ದಾನೆ. ಕೂಡಲೇ ಬೆಂಕಿಯಿಂದ ದೇಹ ಸುಟ್ಟು ಹೋಗಿದೆ

ರಾಯಚೂರು: ಮೊಹರಂ ಆಚರಣೆ ವೇಳೆ ಅಗ್ನಿ ಕುಂಡದಲ್ಲಿ ಬಿದ್ದ ಯುವಕನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನಲ್ಲಿ ನಡೆದಿದೆ. ಹನುಮಂತ ಯರಗಂಟಿ (33) ಗಾಯಗೊಂಡ ಯುವಕನಾಗಿದ್ದಾನೆ.

ದರ್ಗಾದ ಮುಂದೆ ಕೆಂಡ ಹಾಯಲು ಸಿದ್ಧಪಡಿಸಲಾದ ಅಗ್ನಿ ಕುಂಡದಲ್ಲಿ ಕಟ್ಟಿಗೆಗಳನ್ನು ಹಾಕಿ ಬೆಂಕಿ ಹಚ್ಚಲಾಗಿತ್ತು. ಈ ವೇಳೆ ಹನುಮಂತನಿಗೆ ಬೆಂಕಿಗೆ ಬಿದ್ದಿದ್ದಾನೆ. ಕೂಡಲೇ ಬೆಂಕಿಯಿಂದ ದೇಹ ಸುಟ್ಟು ಹೋಗಿದೆ. ತಕ್ಷಣ ಸ್ಥಳದಲ್ಲಿದ್ದವರು ಆತನ ನೆರವಿಗೆ ಧಾವಿಸಿದ್ದು, ರಕ್ಷಿಸಲು ಹರಸಾಹಸ ಪಟ್ಟಿದ್ದಾರೆ.

ಬಳಿಕ ಗಾಯಾಳುವನ್ನು ಲಿಂಗಸೂಗೂರು ತಾಲೂಕ್ ಆಸ್ಪತ್ರೆಗೆ, ತದನಂತರ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆತ ಸಾವು- ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ ಎಂದು ತಿಳಿದುಬಂದಿದೆ.

ಈ ಘಟನೆ ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಅಲಾಯಿ ಅಗ್ನಿ ಕುಂಡದ ಬಳಿ ನಡೆದು ಹೋಗುವಾಗ ಆಕಸ್ಮಿಕ ಕಾಲು ಜಾರಿ ಹನುಮಂತ ಕುಂಡಕ್ಕೆ ಬಿದ್ದಿದ್ದು, ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ ಆತನನ್ನು ತಕ್ಷಣವೇ ರಕ್ಷಿಸಲು ನಮಗೆ ಸಾಧ್ಯವಾಗಲಿಲ್ಲ ಎಂದು ಅವರ ಸಂಬಂಧಿ ಮೌನೇಶ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT