ನೈಸ್ ರಸ್ತೆಯಲ್ಲಿ ನಡೆದ ಟೆಂಪೋ ಅಪಘಾತ 
ರಾಜ್ಯ

NICE Road Accident: ತಡೆಗೋಡೆಗೆ ಟೆಂಪೋ ಢಿಕ್ಕಿ.. ವಾಹನ ಅರ್ಧಕ್ಕೆ ಪೀಸ್ ಪೀಸ್... ಸೇತುವೆ ಮೇಲಿಂದ ಬಿದ್ದ ಕ್ಯಾಬಿನ್! Video

ಜ್ಞಾನಭಾರತಿ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಗೆ ಬರುವ ನೈಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು ಅಪಘಾತದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ನೈಸ್ ರಸ್ತೆಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಟೆಂಪೊವೊಂದು ತಡೆಗೋಡೆಗೆ ಢಿಕ್ಕಿಯಾಗಿ ಅರ್ಧಕ್ಕೇ ಪೀಸ್ ಪೀಸ್ ಆದ ಘಟನೆ ನಡೆದಿದೆ.

ಜ್ಞಾನಭಾರತಿ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಗೆ ಬರುವ ನೈಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು ಅಪಘಾತದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಅತಿವೇಗವಾಗಿ ಬಂದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನ ಕ್ಯಾಬಿನ್‌ ತುಂಡಾಗಿ ಮೇಲು ಸೇತುವೆಯಿಂದ ಕೆಳಗೆ ಬಿದ್ದು ಚಾಲಕ ಸೇರಿ ಮೂವರು ಗಾಯಗೊಂಡಿದ್ದಾರೆ.

ಜ್ಞಾನಭಾರತಿ ಬಳಿಯ ನೈಸ್‌ ರಸ್ತೆಯ ರಾಮಸಂದ್ರ ಸೇತುವೆ ಬಳಿ ಶನಿವಾರ ಮಧ್ಯಾಹ್ನ ಸುಮಾರು 1 ಗಂಟೆಗೆ ಘಟನೆ ನಡೆದಿದೆ ಎನ್ನಲಾಗಿದೆ.

ಟೆಂಪೋ ಚಾಲಕ ರಾಘವೇಂದ್ರ, ಸಹಾಯಕ ಸಲೀಂ ಮತ್ತು ಫ‌ಯಾಜ್‌ ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಮೂವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.

ಬೆಡ್ ಗಳನ್ನು ತುಂಬಿಕೊಂಡು ಬರುತ್ತಿದ್ದ ಟೆಂಪೋ

ಮೂಲಗಳ ಪ್ರಕಾರ ಟೆಂಪೋ ಚಾಲಕ ರಾಘವೇಂದ್ರ, ಕಾಟನ್‌ ಹಾಗೂ ಬೆಡ್‌ಗಳನ್ನು ತುಂಬಿಕೊಂಡು ಬ್ಯಾಡರಹಳ್ಳಿ ಕಡೆಯಿಂದ ಕೆಂಗೇರಿ ಕಡೆ ಬರುತ್ತಿದ್ದರು. ಜ್ಞಾನಭಾರತಿ ಬಳಿಯ ನೈಸ್‌ ರಸ್ತೆಯ ರಾಮಸಂದ್ರ ಸೇತುವೆ ಬಳಿ ವೇಗವಾಗಿ ಟೆಂಪೋ ಚಾಲನೆ ಮಾಡಿದ ಪರಿಣಾಮ ನಿಯಂತ್ರಣ ತಪ್ಪಿ ಟೆಂಪೋ ರಸ್ತೆಯ ಬಲಭಾಗದ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಟೆಂಪೋವಿನ ಚಾಲಕನ ಕ್ಯಾಬಿನ್‌ ತುಂಡಾಗಿ ಮೇಲು ಸೇತುವೆಯಿಂದ ಕೆಳಗೆ ಬಿದ್ದಿದೆ. ಈ ವೇಳೆ ಚಾಲಕ ರಾಘವೇಂದ್ರ, ಆತನ ಸಹಾಯಕ ಸಲೀಂ ಮತ್ತು ಫ‌ಯಾಜ್‌ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಳಿಕ ಸ್ಥಳೀಯರು ಹಾಗೂ ಇತರೆ ವಾಹನಗಳ ಸವಾರರು ನೆರವಿಗೆ ದೌಡಾಯಿಸಿ ಮೂವರು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಸಂಚಾರ ಪೊಲೀಸರು ಪರಿಶೀಲಿಸಿದ್ದು, ಚಾಲಕ ರಾಘವೇಂದ್ರ ಅತೀವೇಗ ಹಾಗೂ ನಿರ್ಲಕ್ಷ್ಯದಿಂದ ಟೆಂಪೋ ಚಾಲನೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಈ ಸಂಬಂಧ ಜ್ಞಾನಭಾರತಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಚಾಲಕ ರಾಘವೇಂದ್ರನ ವಿರುದ್ಧ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT