ಡಿ.ಕೆ. ಶಿವಕುಮಾರ್ 
ರಾಜ್ಯ

ಚೀಟಿ ಹಣದೊಂದಿಗೆ ದಂಪತಿ ಪರಾರಿ: ಡಿ.ಕೆ ಶಿವಕುಮಾರ್ ಭೇಟಿ ಮಾಡಿ ನೆರವು ಕೋರಿದ ಸಂತ್ರಸ್ತರು

ಕುಟುಂಬವು ತಮ್ಮ ಜರಗನಹಳ್ಳಿ ಮನೆಯನ್ನು ಖಾಲಿ ಮಾಡಿ 40 ವಿವಿಧ ಮೊತ್ತದ ಚೀಟಿಯಲ್ಲಿ ಹೂಡಿಕೆದಾರರಿಂದ ಹಣ ಸಂಗ್ರಹಿಸಿ ನಾಪತ್ತೆಯಾಗಿದೆ. ಕುಟುಂಬವು ಪರವಾನಗಿ ಇಲ್ಲದೆ 25 ವರ್ಷಗಳಿಂದ ಅಕ್ರಮ ಚೀಟಿ ವ್ಯವಹಾರವನ್ನು ನಡೆಸುತ್ತಿದೆ

ಬೆಂಗಳೂರು: ಚೀಟಿಯಲ್ಲಿ ಹೂಡಿಕೆ ಮಾಡಿದ್ದ ಸಾರ್ವಜನಿಕರ ಕೋಟ್ಯಂತರ ರೂಪಾಯಿ ಹಣದೊಂದಿಗೆ ಪರಾರಿಯಾದ ದಂಪತಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಸಂತ್ರಸ್ತರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಅವರಿಗೆ ದೂರು ನೀಡಿದ್ದಾರೆ.

ಜೆ.ಪಿ ನಗರದ ನಾಲ್ವರು ಜನರ ಕುಟುಂಬವೊಂದು 250 ಕ್ಕೂ ಹೆಚ್ಚು ಜನರನ್ನು ವಂಚಿಸಿ ಪರಾರಿಯಾಗಿದೆ ಎಂದು ಆರೋಪಿಸಲಾಗಿದೆ.

ಪುಟ್ಟೇನಹಳ್ಳಿ ನಿವಾಸಿ ಪುಷ್ಪಲತಾ ವಿ (45) ಎಂಬುವರು ಸುಧಾ, ಅವರ ಪತಿ ಸಿದ್ಧಾಚಾರಿ, ಮಗ ಯಶವಂತ್ ಮತ್ತು ಮಗಳು ವರ್ಷಿಣಿ ವಿರುದ್ಧ ದೂರು ದಾಖಲಿಸಿದ್ದಾರೆ. ಕುಟುಂಬವು ತಮ್ಮ ಜರಗನಹಳ್ಳಿ ಮನೆಯನ್ನು ಖಾಲಿ ಮಾಡಿ 40 ವಿವಿಧ ಮೊತ್ತದ ಚೀಟಿಯಲ್ಲಿ ಹೂಡಿಕೆದಾರರಿಂದ ಹಣ ಸಂಗ್ರಹಿಸಿ ನಾಪತ್ತೆಯಾಗಿದೆ.

ಕುಟುಂಬವು ಪರವಾನಗಿ ಇಲ್ಲದೆ 25 ವರ್ಷಗಳಿಂದ ಅಕ್ರಮ ಚೀಟಿ ವ್ಯವಹಾರವನ್ನು ನಡೆಸುತ್ತಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಸುಮಾರು 250 ರಿಂದ 300 ಜನರು ಕುಟುಂಬಕ್ಕೆ ಮಾಸಿಕ ಮೊತ್ತವನ್ನು ಪಾವತಿಸುತ್ತಿದ್ದರು ಎಂದು ಸಂತ್ರಸ್ತರು ಪೊಲೀಸರಿಗೆ ತಿಳಿಸಿದ್ದಾರೆ, ಅವರು ಸುಮಾರು 40 ವಿಭಿನ್ನ ಚಿಟ್ ಫಂಡ್ ಬ್ಯಾಚ್‌ಗಳನ್ನು ನಿರ್ವಹಿಸುತ್ತಿದ್ದರು.

ಇವುಗಳಲ್ಲಿ 5 ಲಕ್ಷ, 3 ಲಕ್ಷ ಮತ್ತು 2 ಲಕ್ಷ ರೂ. ಯೋಜನೆಗಳು ಸೇರಿವೆ. ದಂಪತಿಗಳು ದಿನಸಿ ಅಂಗಡಿ ನಡೆಸುತ್ತಿದ್ದರು ಮತ್ತು ನಿವಾಸಿಗಳ ವಿಶ್ವಾಸ ಗಳಿಸಿದ್ದರು, ಹೂಡಿಕೆ ಮಾಡಲು ಪ್ರೋತ್ಸಾಹಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕುಟುಂಬವು ತಮ್ಮ ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಿದೆ ಮತ್ತು ಅವರನ್ನು ಪತ್ತೆಹಚ್ಚಲು ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜೂನ್ 3 ರಂದು ಕುಟುಂಬವು ಪರಾರಿಯಾಗಿದೆ ಎನ್ನಲಾಗಿದೆಯಾದರೂ, ಜೂನ್ 5 ರಂದು ದೂರು ದಾಖಲಾಗಿದೆ.

ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಸಂತ್ರಸ್ತರು ಆರೋಪಿಸಿದ್ದಾರೆ. ತಮ್ಮ ಹಣವನ್ನು ವಸೂಲಿ ಮಾಡಲು ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ದೂರು ದಾಖಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಸಂತ್ರಸ್ತರಲ್ಲಿ ಒಬ್ಬರು ಹೇಳಿದರು.

ಆರೋಪಿಗಳ ವಿರುದ್ಧ ತ್ವರಿತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ನಿರ್ದೇಶನ ನೀಡುವಂತೆ ನಾವು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಸಹ ಸಂಪರ್ಕಿಸಿದ್ದೇವೆ" ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT