ಸಾಂದರ್ಭಿಕ ಚಿತ್ರ  
ರಾಜ್ಯ

ವಜ್ರ ಮಹೋತ್ಸವ ಸವಿನೆನಪು: 60,000 ಗಿಡ ನೆಡುವ ಅಭಿಯಾನಕ್ಕೆ BWSSB ಚಾಲನೆ

BWSSB ಬೆಂಗಳೂರಿನಾದ್ಯಂತ ಹಲವಾರು ಭೂಪ್ರದೇಶಗಳನ್ನು ಹೊಂದಿದ್ದು, ಅವುಗಳನ್ನು ಹಸಿರು ವಲಯಗಳಾಗಿ ಪರಿವರ್ತಿಸುವುದು ನಮ್ಮ ಗುರಿಯಾಗಿದೆ ಎಂದರು.

ಬೆಂಗಳೂರು: ವಜ್ರ ಮಹೋತ್ಸವದ ಆಚರಣೆಯ ಭಾಗವಾಗಿ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(BWSSB) ತನ್ನ ವ್ಯಾಪ್ತಿಯಲ್ಲಿ 60 ಸಾವಿರ ಗಿಡಗಳನ್ನು ನೆಡುವ ಗುರಿಯೊಂದಿಗೆ "ಹಸಿರು ನಡೆ - ನೀರಿನ ಭವಿಷ್ಯ" ಎಂಬ ಶೀರ್ಷಿಕೆಯಡಿ ಬೃಹತ್ ಪ್ರಮಾಣದಲ್ಲಿ ಗಿಡ ನೆಡುವ ಅಭಿಯಾನವನ್ನು ಆರಂಭಿಸಿದೆ ಎಂದು ಬಿಡಬ್ಲ್ಯುಎಸ್ಎಸ್ ಬಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.

ಜಿಕೆವಿಕೆ ಕ್ಯಾಂಪಸ್‌ನಲ್ಲಿ ಅಭಿಯಾನವನ್ನು ಉದ್ಘಾಟಿಸಿದ ಅವರು, ಸಾಂಕೇತಿಕವಾಗಿ 60 ಬಗೆಯ ಸಸಿಗಳನ್ನು ನೆಟ್ಟರು. ನೀರಿನ ಸಂರಕ್ಷಣೆ ಮತ್ತು ಪರಿಸರ ಸಮತೋಲನ ಎರಡಕ್ಕೂ ಹಸಿರು ಪರಿಸರ ಅತ್ಯಗತ್ಯ. ನಮ್ಮ ನಗರವನ್ನು ಹಸಿರು ಮತ್ತು ಹೆಚ್ಚು ಸುಂದರಗೊಳಿಸಲು ನಾಗರಿಕರು ತಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಿಡಗಳನ್ನು ನೆಡುವ ಮೂಲಕ ಕೊಡುಗೆ ನೀಡಬೇಕು. BWSSB ಬೆಂಗಳೂರಿನಾದ್ಯಂತ ಹಲವು ಭೂಪ್ರದೇಶಗಳನ್ನು ಹೊಂದಿದ್ದು, ಅವುಗಳನ್ನು ಹಸಿರು ವಲಯಗಳಾಗಿ ಪರಿವರ್ತಿಸುವುದು ನಮ್ಮ ಗುರಿಯಾಗಿದೆ ಎಂದರು.

ವಿಶ್ವ ಪರಿಸರ ದಿನದಿಂದ ಪ್ರೇರಿತವಾದ ಈ ಅಭಿಯಾನವು ಮುಂಬರುವ ವರ್ಷದಲ್ಲಿ 'ಹಸಿರು ಮಾರ್ಗ - ನೀರಿನ ಭವಿಷ್ಯ' ಎಂಬ ಮಾರ್ಗದರ್ಶಿ ವಿಷಯದ ಅಡಿಯಲ್ಲಿ 60 ಸಾವಿರ ಸಸಿಗಳನ್ನು ನೆಡುವ ಗುರಿಯನ್ನು ಹೊಂದಿದೆ ಎಂದರು.

ಜನರು ಹೆಚ್ಚಿನ ಸಂಖ್ಯೆಯಲ್ಲಿ ಈ ಅಭಿಯಾನದಲ್ಲಿ ಭಾಗಿಯಾಗಲು ಅಪಾರ್ಟ್ಮೆಂಟ್ ಸಂಕೀರ್ಣಗಳು, ಕೈಗಾರಿಕೆಗಳು, ಟೆಕ್ ಪಾರ್ಕ್‌ಗಳು ಮತ್ತು ಶಿಕ್ಷಣ ಸಂಸ್ಥೆಗಳು ಸೇರಿದಂತೆ ಹೆಚ್ಚಿನ ಪ್ರಮಾಣದಲ್ಲಿ ನೀರಿನ ಬಳಕೆದಾರರು ಅಭಿಯಾನದಲ್ಲಿ ಸಕ್ರಿಯವಾಗಿ ಸೇರಲು ಮನವಿ ಮಾಡಲಾಗಿದೆ. ತಮ್ಮ ಆವರಣದಲ್ಲಿ ಸಸಿಗಳನ್ನು ನೆಡುವುದು ಮಾತ್ರವಲ್ಲದೆ, ಅವುಗಳ ನಿರ್ವಹಣೆಯ ಜವಾಬ್ದಾರಿಯನ್ನು ಸಹ ತೆಗೆದುಕೊಳ್ಳುವಂತೆ ಕೇಳಿಕೊಳ್ಳಲಾಗುತ್ತಿದೆ.

ಹೆಚ್ಚುವರಿಯಾಗಿ, ಎಲ್ಲಾ BWSSB ವಿಭಾಗಗಳು ಮತ್ತು ಕಚೇರಿಗಳು ತಮ್ಮ ತಮ್ಮ ಪ್ರದೇಶಗಳು ಮತ್ತು ಸೇವಾ ವಲಯಗಳಲ್ಲಿ ಗಿಡಗಳನ್ನು ನೆಡಲು ಮುಂಚೂಣಿಯಲ್ಲಿರಲು ಸೂಚಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT