ಸಾಂದರ್ಭಿಕ ಚಿತ್ರ  
ರಾಜ್ಯ

ವಜ್ರ ಮಹೋತ್ಸವ ಸವಿನೆನಪು: 60,000 ಗಿಡ ನೆಡುವ ಅಭಿಯಾನಕ್ಕೆ BWSSB ಚಾಲನೆ

BWSSB ಬೆಂಗಳೂರಿನಾದ್ಯಂತ ಹಲವಾರು ಭೂಪ್ರದೇಶಗಳನ್ನು ಹೊಂದಿದ್ದು, ಅವುಗಳನ್ನು ಹಸಿರು ವಲಯಗಳಾಗಿ ಪರಿವರ್ತಿಸುವುದು ನಮ್ಮ ಗುರಿಯಾಗಿದೆ ಎಂದರು.

ಬೆಂಗಳೂರು: ವಜ್ರ ಮಹೋತ್ಸವದ ಆಚರಣೆಯ ಭಾಗವಾಗಿ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(BWSSB) ತನ್ನ ವ್ಯಾಪ್ತಿಯಲ್ಲಿ 60 ಸಾವಿರ ಗಿಡಗಳನ್ನು ನೆಡುವ ಗುರಿಯೊಂದಿಗೆ "ಹಸಿರು ನಡೆ - ನೀರಿನ ಭವಿಷ್ಯ" ಎಂಬ ಶೀರ್ಷಿಕೆಯಡಿ ಬೃಹತ್ ಪ್ರಮಾಣದಲ್ಲಿ ಗಿಡ ನೆಡುವ ಅಭಿಯಾನವನ್ನು ಆರಂಭಿಸಿದೆ ಎಂದು ಬಿಡಬ್ಲ್ಯುಎಸ್ಎಸ್ ಬಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.

ಜಿಕೆವಿಕೆ ಕ್ಯಾಂಪಸ್‌ನಲ್ಲಿ ಅಭಿಯಾನವನ್ನು ಉದ್ಘಾಟಿಸಿದ ಅವರು, ಸಾಂಕೇತಿಕವಾಗಿ 60 ಬಗೆಯ ಸಸಿಗಳನ್ನು ನೆಟ್ಟರು. ನೀರಿನ ಸಂರಕ್ಷಣೆ ಮತ್ತು ಪರಿಸರ ಸಮತೋಲನ ಎರಡಕ್ಕೂ ಹಸಿರು ಪರಿಸರ ಅತ್ಯಗತ್ಯ. ನಮ್ಮ ನಗರವನ್ನು ಹಸಿರು ಮತ್ತು ಹೆಚ್ಚು ಸುಂದರಗೊಳಿಸಲು ನಾಗರಿಕರು ತಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಿಡಗಳನ್ನು ನೆಡುವ ಮೂಲಕ ಕೊಡುಗೆ ನೀಡಬೇಕು. BWSSB ಬೆಂಗಳೂರಿನಾದ್ಯಂತ ಹಲವು ಭೂಪ್ರದೇಶಗಳನ್ನು ಹೊಂದಿದ್ದು, ಅವುಗಳನ್ನು ಹಸಿರು ವಲಯಗಳಾಗಿ ಪರಿವರ್ತಿಸುವುದು ನಮ್ಮ ಗುರಿಯಾಗಿದೆ ಎಂದರು.

ವಿಶ್ವ ಪರಿಸರ ದಿನದಿಂದ ಪ್ರೇರಿತವಾದ ಈ ಅಭಿಯಾನವು ಮುಂಬರುವ ವರ್ಷದಲ್ಲಿ 'ಹಸಿರು ಮಾರ್ಗ - ನೀರಿನ ಭವಿಷ್ಯ' ಎಂಬ ಮಾರ್ಗದರ್ಶಿ ವಿಷಯದ ಅಡಿಯಲ್ಲಿ 60 ಸಾವಿರ ಸಸಿಗಳನ್ನು ನೆಡುವ ಗುರಿಯನ್ನು ಹೊಂದಿದೆ ಎಂದರು.

ಜನರು ಹೆಚ್ಚಿನ ಸಂಖ್ಯೆಯಲ್ಲಿ ಈ ಅಭಿಯಾನದಲ್ಲಿ ಭಾಗಿಯಾಗಲು ಅಪಾರ್ಟ್ಮೆಂಟ್ ಸಂಕೀರ್ಣಗಳು, ಕೈಗಾರಿಕೆಗಳು, ಟೆಕ್ ಪಾರ್ಕ್‌ಗಳು ಮತ್ತು ಶಿಕ್ಷಣ ಸಂಸ್ಥೆಗಳು ಸೇರಿದಂತೆ ಹೆಚ್ಚಿನ ಪ್ರಮಾಣದಲ್ಲಿ ನೀರಿನ ಬಳಕೆದಾರರು ಅಭಿಯಾನದಲ್ಲಿ ಸಕ್ರಿಯವಾಗಿ ಸೇರಲು ಮನವಿ ಮಾಡಲಾಗಿದೆ. ತಮ್ಮ ಆವರಣದಲ್ಲಿ ಸಸಿಗಳನ್ನು ನೆಡುವುದು ಮಾತ್ರವಲ್ಲದೆ, ಅವುಗಳ ನಿರ್ವಹಣೆಯ ಜವಾಬ್ದಾರಿಯನ್ನು ಸಹ ತೆಗೆದುಕೊಳ್ಳುವಂತೆ ಕೇಳಿಕೊಳ್ಳಲಾಗುತ್ತಿದೆ.

ಹೆಚ್ಚುವರಿಯಾಗಿ, ಎಲ್ಲಾ BWSSB ವಿಭಾಗಗಳು ಮತ್ತು ಕಚೇರಿಗಳು ತಮ್ಮ ತಮ್ಮ ಪ್ರದೇಶಗಳು ಮತ್ತು ಸೇವಾ ವಲಯಗಳಲ್ಲಿ ಗಿಡಗಳನ್ನು ನೆಡಲು ಮುಂಚೂಣಿಯಲ್ಲಿರಲು ಸೂಚಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT