ಸಂಗ್ರಹ ಚಿತ್ರ 
ರಾಜ್ಯ

ಅನ್ನ ಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಬಾಕಿ ಹಣ ನೀಡದ ಸರ್ಕಾರ: ಅನಿರ್ದಿಷ್ಟಾವಧಿ ಲಾರಿ ಮುಷ್ಕರ

ಫೆಬ್ರವರಿಯಿಂದ ಹಣ ಪಾವತಿ ಮಾಡಲಾಗಿಲ್ಲ ಎಂದು ಕರ್ನಾಟಕ ರಾಜ್ಯ ಲಾರಿ ಮಾಲೀಕರು ಮತ್ತು ಏಜೆಂಟ್‌ಗಳ ಸಂಘ ಮತ್ತು ಚಿಲ್ಲರೆ ಸಾರಿಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಿ.ಆರ್. ಷಣ್ಮುಗಪ್ಪ ಹೇಳಿದ್ದಾರೆ.

ಬೆಂಗಳೂರು: ಸರ್ಕಾರ ಬಾಕಿ ಉಳಿಸಿಕೊಂಡಿರುವ 260 ಕೋಟಿ ರೂ. ಹಣವನ್ನು ತೆರವುಗೊಳಿಸುವಂತೆ ಒತ್ತಾಯಿಸಿ, ಉಚಿತ ವಿತರಣೆಗಾಗಿ ಅಕ್ಕಿ ಸಾಗಿಸುವ ಲಾರಿಗಳು ಸೋಮವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿವೆ, ಹೀಗಾಗಿ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಗೆ ತೊಂದರೆಯಾಗುವ ಸಾಧ್ಯತೆಯಿದೆ.

ಫೆಬ್ರವರಿಯಿಂದ ಹಣ ಪಾವತಿ ಮಾಡಲಾಗಿಲ್ಲ ಎಂದು ಕರ್ನಾಟಕ ರಾಜ್ಯ ಲಾರಿ ಮಾಲೀಕರು ಮತ್ತು ಏಜೆಂಟ್‌ಗಳ ಸಂಘ ಮತ್ತು ಚಿಲ್ಲರೆ ಸಾರಿಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಿ.ಆರ್. ಷಣ್ಮುಗಪ್ಪ ಹೇಳಿದ್ದಾರೆ.

ಜೂನ್ 19 ರಂದು, ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜುಲೈ 5 ರ ಮೊದಲು ಟ್ರಕ್ಕರ್‌ಗಳ ಬಾಕಿ ಹಣವನ್ನು ಪಾವತಿಸುವುದಾಗಿ ಭರವಸೆ ನೀಡಿದರು. ಆದರೆ ಬಾಕಿಗಳು ಹೆಚ್ಚುತ್ತಿವೆಯೇ ಹೊರತು ಪಾವತಿ ಮಾಡುವ ಯಾವುದೇ ಲಕ್ಷಣ ಕಾುತ್ತಿಲ್ಲ.

ಫೆಬ್ರವರಿಯಿಂದ ಜೂನ್ ವರೆಗೆ, ಸುಮಾರು 260 ಕೋಟಿ ರೂ.ಗಳನ್ನು ಪಾವತಿಸಬೇಕಾಗಿದೆ ಟ್ರಕ್ ಮಾಲೀಕರು ಸಂಕಷ್ಟದಲ್ಲಿದ್ದಾರೆ. ಸಾರಿಗೆ ವೆಚ್ಚವನ್ನು ಪೂರೈಸಲು ಅವರು ಹಣವನ್ನು ಸಾಲ ಪಡೆದಿದ್ದಾರೆ ಎಂದು ಷಣ್ಮುಗಪ್ಪ ಮಾಹಿತಿ ನೀಡಿದ್ದಾರೆ.

ಲಾರಿ ಮಾಲಿಕರುಸಾಲದ ಇಎಂಐಗಳನ್ನು ಪಾವತಿಸಲು ಸಹ ಸಾಧ್ಯವಾಗುತ್ತಿಲ್ಲ ಮತ್ತು ಹಣಕಾಸು ಕಂಪನಿಗಳು ತಮ್ಮ ವಾಹನಗಳನ್ನು ವಶಪಡಿಸಿಕೊಳ್ಳಲು ಪ್ರಾರಂಭಿಸಿವೆ. ಸುಮಾರು 4,000 ಲಾರಿಗಳ ಮೇಲೆ ಪರಿಣಾಮ ಬೀರಿದೆ ಎಂದು ಷಣ್ಮುಗಪ್ಪ ಹೇಳಿದರು.

ರಾಜ್ಯಾದ್ಯಂತ ವಿತರಣೆಗಾಗಿ ಟ್ರಕ್ಕರ್‌ಗಳು ಸುಮಾರು 25 ಲಕ್ಷ ಟನ್ ಅಕ್ಕಿಯನ್ನು ಸಾಗಿಸಿದ್ದಾರೆ. ಅನ್ನ ಭಾಗ್ಯ ಯೋಜನೆಯಡಿಯಲ್ಲಿ, ರಾಜ್ಯ ಸರ್ಕಾರವು ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಂದ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿಯನ್ನು ವಿತರಿಸುತ್ತದೆ. ನಾನು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವನಲ್ಲ ಮತ್ತು ಈ ವಿಷಯವನ್ನು ರಾಜಕೀಯಗೊಳಿಸುತ್ತಿಲ್ಲ ಎಂದು ಹೇಳಿದರು.

ನಾನು ಟ್ರಕ್ಕರ್‌ಗಳ ಜೊತೆಗಿದ್ದೇನೆ. ಅವರ ಪಾವತಿಸದ ಬಾಕಿಗಳನ್ನು ಇತ್ಯರ್ಥಪಡಿಸುವಂತೆ ನಾನು ಸರ್ಕಾರವನ್ನು ವಿನಂತಿಸಿದೆ. ಅದು ಆಗುವವರೆಗೆ, ಟ್ರಕ್ಕರ್‌ಗಳು ಅಕ್ಕಿಯನ್ನು ಸಾಗಿಸುವುದಿಲ್ಲ" ಎಂದು ಷಣ್ಮುಗಪ್ಪ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್