ಸಂಗ್ರಹ ಚಿತ್ರ 
ರಾಜ್ಯ

ಅನ್ನ ಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಬಾಕಿ ಹಣ ನೀಡದ ಸರ್ಕಾರ: ಅನಿರ್ದಿಷ್ಟಾವಧಿ ಲಾರಿ ಮುಷ್ಕರ

ಫೆಬ್ರವರಿಯಿಂದ ಹಣ ಪಾವತಿ ಮಾಡಲಾಗಿಲ್ಲ ಎಂದು ಕರ್ನಾಟಕ ರಾಜ್ಯ ಲಾರಿ ಮಾಲೀಕರು ಮತ್ತು ಏಜೆಂಟ್‌ಗಳ ಸಂಘ ಮತ್ತು ಚಿಲ್ಲರೆ ಸಾರಿಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಿ.ಆರ್. ಷಣ್ಮುಗಪ್ಪ ಹೇಳಿದ್ದಾರೆ.

ಬೆಂಗಳೂರು: ಸರ್ಕಾರ ಬಾಕಿ ಉಳಿಸಿಕೊಂಡಿರುವ 260 ಕೋಟಿ ರೂ. ಹಣವನ್ನು ತೆರವುಗೊಳಿಸುವಂತೆ ಒತ್ತಾಯಿಸಿ, ಉಚಿತ ವಿತರಣೆಗಾಗಿ ಅಕ್ಕಿ ಸಾಗಿಸುವ ಲಾರಿಗಳು ಸೋಮವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿವೆ, ಹೀಗಾಗಿ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಗೆ ತೊಂದರೆಯಾಗುವ ಸಾಧ್ಯತೆಯಿದೆ.

ಫೆಬ್ರವರಿಯಿಂದ ಹಣ ಪಾವತಿ ಮಾಡಲಾಗಿಲ್ಲ ಎಂದು ಕರ್ನಾಟಕ ರಾಜ್ಯ ಲಾರಿ ಮಾಲೀಕರು ಮತ್ತು ಏಜೆಂಟ್‌ಗಳ ಸಂಘ ಮತ್ತು ಚಿಲ್ಲರೆ ಸಾರಿಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಿ.ಆರ್. ಷಣ್ಮುಗಪ್ಪ ಹೇಳಿದ್ದಾರೆ.

ಜೂನ್ 19 ರಂದು, ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜುಲೈ 5 ರ ಮೊದಲು ಟ್ರಕ್ಕರ್‌ಗಳ ಬಾಕಿ ಹಣವನ್ನು ಪಾವತಿಸುವುದಾಗಿ ಭರವಸೆ ನೀಡಿದರು. ಆದರೆ ಬಾಕಿಗಳು ಹೆಚ್ಚುತ್ತಿವೆಯೇ ಹೊರತು ಪಾವತಿ ಮಾಡುವ ಯಾವುದೇ ಲಕ್ಷಣ ಕಾುತ್ತಿಲ್ಲ.

ಫೆಬ್ರವರಿಯಿಂದ ಜೂನ್ ವರೆಗೆ, ಸುಮಾರು 260 ಕೋಟಿ ರೂ.ಗಳನ್ನು ಪಾವತಿಸಬೇಕಾಗಿದೆ ಟ್ರಕ್ ಮಾಲೀಕರು ಸಂಕಷ್ಟದಲ್ಲಿದ್ದಾರೆ. ಸಾರಿಗೆ ವೆಚ್ಚವನ್ನು ಪೂರೈಸಲು ಅವರು ಹಣವನ್ನು ಸಾಲ ಪಡೆದಿದ್ದಾರೆ ಎಂದು ಷಣ್ಮುಗಪ್ಪ ಮಾಹಿತಿ ನೀಡಿದ್ದಾರೆ.

ಲಾರಿ ಮಾಲಿಕರುಸಾಲದ ಇಎಂಐಗಳನ್ನು ಪಾವತಿಸಲು ಸಹ ಸಾಧ್ಯವಾಗುತ್ತಿಲ್ಲ ಮತ್ತು ಹಣಕಾಸು ಕಂಪನಿಗಳು ತಮ್ಮ ವಾಹನಗಳನ್ನು ವಶಪಡಿಸಿಕೊಳ್ಳಲು ಪ್ರಾರಂಭಿಸಿವೆ. ಸುಮಾರು 4,000 ಲಾರಿಗಳ ಮೇಲೆ ಪರಿಣಾಮ ಬೀರಿದೆ ಎಂದು ಷಣ್ಮುಗಪ್ಪ ಹೇಳಿದರು.

ರಾಜ್ಯಾದ್ಯಂತ ವಿತರಣೆಗಾಗಿ ಟ್ರಕ್ಕರ್‌ಗಳು ಸುಮಾರು 25 ಲಕ್ಷ ಟನ್ ಅಕ್ಕಿಯನ್ನು ಸಾಗಿಸಿದ್ದಾರೆ. ಅನ್ನ ಭಾಗ್ಯ ಯೋಜನೆಯಡಿಯಲ್ಲಿ, ರಾಜ್ಯ ಸರ್ಕಾರವು ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಂದ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿಯನ್ನು ವಿತರಿಸುತ್ತದೆ. ನಾನು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವನಲ್ಲ ಮತ್ತು ಈ ವಿಷಯವನ್ನು ರಾಜಕೀಯಗೊಳಿಸುತ್ತಿಲ್ಲ ಎಂದು ಹೇಳಿದರು.

ನಾನು ಟ್ರಕ್ಕರ್‌ಗಳ ಜೊತೆಗಿದ್ದೇನೆ. ಅವರ ಪಾವತಿಸದ ಬಾಕಿಗಳನ್ನು ಇತ್ಯರ್ಥಪಡಿಸುವಂತೆ ನಾನು ಸರ್ಕಾರವನ್ನು ವಿನಂತಿಸಿದೆ. ಅದು ಆಗುವವರೆಗೆ, ಟ್ರಕ್ಕರ್‌ಗಳು ಅಕ್ಕಿಯನ್ನು ಸಾಗಿಸುವುದಿಲ್ಲ" ಎಂದು ಷಣ್ಮುಗಪ್ಪ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT