ಮೃತ ಮಹೇಶ್ 
ರಾಜ್ಯ

ಶ್ರೀರಂಗಪಟ್ಟಣ: ಫೋಟೋ ತೆಗೆದುಕೊಳ್ಳಲು ಹೋಗಿ ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ಆಟೋ ಡ್ರೈವರ್

ಭಾನುವಾರ ಸಂಜೆ ಮಹೇಶ್‌ ಸ್ನೇಹಿತರೊಂದಿಗೆ ಕೆಆರ್‌ಎಸ್ ನೋಡಲು ಬಂದಿದ್ದರು.

ಮಂಡ್ಯ: ಫೋಟೋ ತೆಗೆದುಕೊಳ್ಳಲು ಹೋಗಿ ಕಾವೇರಿ ನದಿಯಲ್ಲಿ ವ್ಯಕ್ತಿಯೊಬ್ಬರು ಕೊಚ್ಚಿ ಹೋದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಸರ್ವಧರ್ಮ ಆಶ್ರಮದ ಬಳಿ ನಡೆದಿದೆ.

ಮೈಸೂರಿನಲ್ಲಿ ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಮಹೇಶ್ ( 36) ಎಂಬುವವರು ಕಾವೇರಿ ನದಿಯಲ್ಲಿ ಕೊಚ್ಚಿ ಹೋಗಿದ್ದಾರೆ. ಭಾನುವಾರ ಸಂಜೆ ಮಹೇಶ್‌ ಸ್ನೇಹಿತರೊಂದಿಗೆ ಕೆಆರ್‌ಎಸ್ ನೋಡಲು ಬಂದಿದ್ದರು.

ಸರ್ವಧರ್ಮ ಆಶ್ರಮದ ಬಳಿ ಫೋಟೋ ತೆಗೆಸಿಕೊಳ್ಳಲು ಹೋಗಿದ್ದಾರೆ. ಆ ವೇಳೆ ಆಯತಪ್ಪಿ ಕಾವೇರಿ ನದಿಗೆ ಬಿದ್ದಿದ್ದಾರೆ. ನದಿಯಲ್ಲಿ ನೀರು ಹೆಚ್ಚಿದ್ದ ಕಾರಣ ಮಹೇಶ್‌ ಕೊಚ್ಚಿ ಹೋಗಿದ್ದಾರೆ. ಕೂಡಲೇ ಸ್ನೇಹಿತರು ನೆರವಿಗೆ ಬಂದರೂ ಸಾಧ್ಯವಾಗಲಿಲ್ಲ. ಕೊಚ್ಚಿ ಹೋದ ಮಹೇಶ್‌ ಪತ್ತೆಗಾಗಿ ಅಗ್ನಿಶಾಮಕ ದಳ ಶೋಧ ಕಾರ್ಯ ನಡೆಸುತ್ತಿದೆ. ಕೆಆರ್‌ಎಸ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT