ಜಿ ಪರಮೇಶ್ವರ 
ರಾಜ್ಯ

ರಾಜ್ಯದಿಂದ 200 ಅಕ್ರಮ ಬಾಂಗ್ಲಾದೇಶಿಗಳ ಗಡಿಪಾರು: ಡಾ. ಜಿ ಪರಮೇಶ್ವರ

ಪ್ರಾದೇಶಿಕ ನೋಂದಣಿ ಕಚೇರಿಯ ಅಧಿಕಾರಿಗಳು ಅಂತಹ ಅಕ್ರಮ ವಲಸಿಗರನ್ನು ಗುರುತಿಸಿ ಪೊಲೀಸರಿಗೆ ತಿಳಿಸುತ್ತಾರೆ ಎಂದು ಅವರು ಹೇಳಿದರು. ನಾವು ನಿರ್ಮಾಣ ಕಾರ್ಮಿಕರ ಮೇಲೆ ನಿಗಾ ಇಡುತ್ತಿದ್ದೇವೆ.

ಬೆಂಗಳೂರು: ಕಳೆದ ಕೆಲವು ತಿಂಗಳುಗಳಲ್ಲಿ 200 ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ರಾಜ್ಯದಿಂದ ಗಡೀಪಾರು ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ.

ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿರ್ಮಾಣ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಇಂತಹ ಅನೇಕ ವಲಸಿಗರ ವಿರುದ್ಧ ದೂರುಗಳು ಬಂದಿವೆ ಎಂದರು. ರಾಜ್ಯ ಸರ್ಕಾರವು ಅಕ್ರಮ ವಲಸಿಗರನ್ನು ತಕ್ಷಣ ಗಡೀಪಾರು ಮಾಡಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇದು ನಿರಂತರ ಪ್ರಕ್ರಿಯೆ ಎಂದು ತಿಳಿಸಿದ್ದಾರೆ.

ಪ್ರಾದೇಶಿಕ ನೋಂದಣಿ ಕಚೇರಿಯ ಅಧಿಕಾರಿಗಳು ಅಂತಹ ಅಕ್ರಮ ವಲಸಿಗರನ್ನು ಗುರುತಿಸಿ ಪೊಲೀಸರಿಗೆ ತಿಳಿಸುತ್ತಾರೆ ಎಂದು ಅವರು ಹೇಳಿದರು. "ನಾವು ನಿರ್ಮಾಣ ಕಾರ್ಮಿಕರ ಮೇಲೆ ನಿಗಾ ಇಡುತ್ತಿದ್ದೇವೆ... ಅವರು ಅಕ್ರಮ ವಲಸಿಗರೆಂದು ಕಂಡುಬಂದರೆ, ಅವರನ್ನು ಗಡೀಪಾರು ಮಾಡಲಾಗುತ್ತದೆ ಎಂದರು.

ಸರ್ಕಾರ ಅಕ್ರಮ ವಲಸಿಗರ ಬಗ್ಗೆ ಮೃದು ಧೋರಣೆ ತಳೆಯುವುದಿಲ್ಲ. ಕಾಂಗ್ರೆಸ್ ಅಂತಹ ಅಕ್ರಮ ವಲಸಿಗರನ್ನು ಮತಬ್ಯಾಂಕ್ ಆಗಿ ಬಳಸುತ್ತದೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ, ಡಾ. ಪರಮೇಶ್ವರ್, ಚುನಾವಣೆಯಲ್ಲಿ ಗೆಲ್ಲಲು ಅಕ್ರಮ ವಲಸಿಗರ ಮತಗಳ ಅಗತ್ಯವಿರುವ ಪರಿಸ್ಥಿತಿಯಲ್ಲಿ ಪಕ್ಷ ಎಂದಿಗೂ ಇರಲಿಲ್ಲ ಎಂದು ಹೇಳಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಮಸೂದೆ ವಿರುದ್ಧ ರಾಷ್ಟ್ರಪತಿಗೆ ನಿಯೋಗ; ರಾಜ್ಯ ಸರ್ಕಾರ

ಮಲಯಾಳಂ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್ಕೆ: ಕೇರಳ ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ, ಪುನರ್ ಪರಿಶೀಲನೆಗೆ ಒತ್ತಾಯ

'ರಾಜಕೀಯ ದ್ವೇಷ, ಪೊಲೀಸರ ವೈಫಲ್ಯ' ಬಳ್ಳಾರಿ ಹಿಂಸಾಚಾರ ಘಟನೆಗೆ ಕಾರಣ: ಕಾಂಗ್ರೆಸ್ ಸಮಿತಿ

ಈ ಬಾರಿ ಫೆ.1ರ ಭಾನುವಾರ ಕೇಂದ್ರ ಬಜೆಟ್, ಜ. 29ಕ್ಕೆ ಆರ್ಥಿಕ ಸಮೀಕ್ಷೆ ಮಂಡನೆ!

'ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ವ್ಯಾಪಾರ ಒಪ್ಪಂದ ಹಳ್ಳ ಹಿಡಿದಿದೆ': ಲುಟ್ನಿಕ್ ಹೇಳಿಕೆ ತಳ್ಳಿಹಾಕಿದ MEA, ಹೇಳಿದ್ದೇನು?

SCROLL FOR NEXT