ಜಿ ಪರಮೇಶ್ವರ 
ರಾಜ್ಯ

ರಾಜ್ಯದಿಂದ 200 ಅಕ್ರಮ ಬಾಂಗ್ಲಾದೇಶಿಗಳ ಗಡಿಪಾರು: ಡಾ. ಜಿ ಪರಮೇಶ್ವರ

ಪ್ರಾದೇಶಿಕ ನೋಂದಣಿ ಕಚೇರಿಯ ಅಧಿಕಾರಿಗಳು ಅಂತಹ ಅಕ್ರಮ ವಲಸಿಗರನ್ನು ಗುರುತಿಸಿ ಪೊಲೀಸರಿಗೆ ತಿಳಿಸುತ್ತಾರೆ ಎಂದು ಅವರು ಹೇಳಿದರು. ನಾವು ನಿರ್ಮಾಣ ಕಾರ್ಮಿಕರ ಮೇಲೆ ನಿಗಾ ಇಡುತ್ತಿದ್ದೇವೆ.

ಬೆಂಗಳೂರು: ಕಳೆದ ಕೆಲವು ತಿಂಗಳುಗಳಲ್ಲಿ 200 ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ರಾಜ್ಯದಿಂದ ಗಡೀಪಾರು ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ.

ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿರ್ಮಾಣ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಇಂತಹ ಅನೇಕ ವಲಸಿಗರ ವಿರುದ್ಧ ದೂರುಗಳು ಬಂದಿವೆ ಎಂದರು. ರಾಜ್ಯ ಸರ್ಕಾರವು ಅಕ್ರಮ ವಲಸಿಗರನ್ನು ತಕ್ಷಣ ಗಡೀಪಾರು ಮಾಡಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇದು ನಿರಂತರ ಪ್ರಕ್ರಿಯೆ ಎಂದು ತಿಳಿಸಿದ್ದಾರೆ.

ಪ್ರಾದೇಶಿಕ ನೋಂದಣಿ ಕಚೇರಿಯ ಅಧಿಕಾರಿಗಳು ಅಂತಹ ಅಕ್ರಮ ವಲಸಿಗರನ್ನು ಗುರುತಿಸಿ ಪೊಲೀಸರಿಗೆ ತಿಳಿಸುತ್ತಾರೆ ಎಂದು ಅವರು ಹೇಳಿದರು. "ನಾವು ನಿರ್ಮಾಣ ಕಾರ್ಮಿಕರ ಮೇಲೆ ನಿಗಾ ಇಡುತ್ತಿದ್ದೇವೆ... ಅವರು ಅಕ್ರಮ ವಲಸಿಗರೆಂದು ಕಂಡುಬಂದರೆ, ಅವರನ್ನು ಗಡೀಪಾರು ಮಾಡಲಾಗುತ್ತದೆ ಎಂದರು.

ಸರ್ಕಾರ ಅಕ್ರಮ ವಲಸಿಗರ ಬಗ್ಗೆ ಮೃದು ಧೋರಣೆ ತಳೆಯುವುದಿಲ್ಲ. ಕಾಂಗ್ರೆಸ್ ಅಂತಹ ಅಕ್ರಮ ವಲಸಿಗರನ್ನು ಮತಬ್ಯಾಂಕ್ ಆಗಿ ಬಳಸುತ್ತದೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ, ಡಾ. ಪರಮೇಶ್ವರ್, ಚುನಾವಣೆಯಲ್ಲಿ ಗೆಲ್ಲಲು ಅಕ್ರಮ ವಲಸಿಗರ ಮತಗಳ ಅಗತ್ಯವಿರುವ ಪರಿಸ್ಥಿತಿಯಲ್ಲಿ ಪಕ್ಷ ಎಂದಿಗೂ ಇರಲಿಲ್ಲ ಎಂದು ಹೇಳಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT