ವೈದ್ಯರು (ಸಂಗ್ರಹ ಚಿತ್ರ) online desk
ರಾಜ್ಯ

NQAS ಗುರಿ ಸಾಧಿಸದ ವೈದ್ಯಾಧಿಕಾರಿ-ಸಿಬ್ಬಂದಿಗಳ ವಿರುದ್ಧ ಕ್ರಮ: ಆರೋಗ್ಯ ಇಲಾಖೆ ಎಚ್ಚರಿಕೆ

ಯಾವ ಆರೋಗ್ಯ ಸಂಸ್ಥೆಯು 3 ತಿಂಗಳ ಒಳಗೆ ನಿರೀಕ್ಷಿತ ಮಟ್ಟದಲ್ಲಿ ಗುರಿ ಸಾಧಿಸಲು ವಿಫಲವಾಗುವುದೋ, ಅಂತಹ ವಿಫಲವಾದ ತಂಡಕ್ಕೆ ಪ್ರೋತ್ಸಾಹ ಧನ ಅನರ್ಹಗೊಳಿಸಲಾಗುವುದು.

ಬೆಂಗಳೂರು: ರಾಜ್ಯದ ಸಾರ್ವಜನಿಕ ಆರೋಗ್ಯ ಸಂಸ್ಥೆಗಳು ಕೇಂದ್ರದ ರಾಷ್ಟ್ರೀಯ ಗುಣಮಟ್ಟ ಭರವಸೆ ಮಾನದಂಡ (NQAS) ಪ್ರಮಾಣೀಕರಣವನ್ನು 3 ತಿಂಗಳಲ್ಲಿ ಸಾಧಿಸದಿದ್ದರೆ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.

ಈ ಕುರಿತು ಆರೋಗ್ಯ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಯಾವ ಆರೋಗ್ಯ ಸಂಸ್ಥೆಯು 3 ತಿಂಗಳ ಒಳಗೆ ನಿರೀಕ್ಷಿತ ಮಟ್ಟದಲ್ಲಿ ಗುರಿ ಸಾಧಿಸಲು ವಿಫಲವಾಗುವುದೋ, ಅಂತಹ ವಿಫಲವಾದ ತಂಡಕ್ಕೆ ಪ್ರೋತ್ಸಾಹ ಧನ ಅನರ್ಹಗೊಳಿಸಲಾಗುವುದು. 9 ತಿಂಗಳಲ್ಲಿ ಈ ಸಾಧನೆ ಮಾಡದಿದ್ದಲ್ಲಿ ವೈದ್ಯಾಧಿಕಾರಿಗಳು, ಸಿಬ್ಬಂದಿಯ ವಾರ್ಷಿಕ ಭತ್ಯೆಯನ್ನು ತಡೆ ಹಿಡಿಯಲಾಗುವುದು ಎಂದು ಎಚ್ಚರಿಸಿದೆ.

ಯಾವ ಆರೋಗ್ಯ ಸಂಸ್ಥೆಯು ಮುಂದಿನ 3 ತಿಂಗಳಲ್ಲಿ ಒಳಗೆ ನಿರೀಕ್ಷಿತ ಮಟ್ಟದಲ್ಲಿ ಗುರಿ ಸಾಧಿಸಲು ವಿಫಲವಾಗುವುದೋ, ಅಂತಹ ವಿಳಲವಾದ ತಂಡಕ್ಕೆ ‘ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ’ (ಎಬಿ-ಎಆರ್‌ಕೆ) ಅಡಿ ನೀಡಲಾಗುತ್ತಿರುವ ಪ್ರೋತ್ಸಾಹಧನದಿಂದ ಆಸ್ಪತ್ರೆಯನ್ನು ಅನರ್ಹಗೊಳಿಸಲಾಗುವುದು (AB- Ark ಪ್ರೋತ್ಸಾಹಕಗಳಲ್ಲಿ ಶೇಕಡ ಶೇ.30 ತಂಡಕ್ಕೆ ಮತ್ತು ಉಳಿದ ಶೇಕಡ ಶೇ.70 ಆಸ್ಪತ್ರೆಯು Health Benefit Package ಪಡೆಯಲು ಅರ್ಹರಿರುತ್ತಾರೆ) ಎಂದು ತಿಳಿಸಲಾಗಿದೆ.

NQAS ನ ಸಾಧನೆಯನ್ನು 6 ತಿಂಗಳ ಒಳಗೆ ನಿರೀಕ್ಷಿತ ಮಟ್ಟದಲ್ಲಿ ಸಾಧಿಸಬೇಕು. ಇಲ್ಲವಾದಲ್ಲಿ, ಆರೋಗ್ಯ ಕೇಂದ್ರದ ಅಂತಹ ಮುಖ್ಯಸ್ಥರ ಮತ್ತು ವೈದ್ಯಕೀಯ/ಅರೆ ವೈದ್ಯಕೀಯ ಅಧಿಕಾರಿ/ಸಿಬ್ಬಂದಿಗಳ ವಾರ್ಷಿಕ ಕಾರ್ಯನಿರ್ವಹಣಾ ವರದಿಯಲ್ಲಿ ಮಾಹಿತಿ ದಾಖಲಿಸಬೇಕು. ಜೊತೆಗೆ ಅಂತಹ ಮುಖ್ಯಸ್ಥರ ವರ್ಗಾವಣೆಗೆ ಶಿಫಾರಸು ಮಾಡಬೇಕು.

ಇಂದಿನಿಂದ 9 ತಿಂಗಳೊಳಗೆ ಯಾವುದೇ ಸಾಧನೆಯಾಗದಿದ್ದರೆ, ಅಂತಹ ಆರೋಗ್ಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಎಲ್ಲಾ ಮುಖ್ಯಸ್ಥರ ಮತ್ತು ವೈದ್ಯಕೀಯ/ಅರೆ ವೈದ್ಯಕೀಯ ಅಧಿಕಾರಿ/ಸಿಬ್ಬಂದಿಗಳ ವಾರ್ಷಿಕ ವೇತನ ಬಡ್ತಿಯನ್ನು ತಡೆ ಹಿಡಿಯಲಾಗುವುದು.

ಈ ಎಲ್ಲಾ ಕ್ರಮಗಳ ಹೊರತಾಗಿಯೂ, ಯಾವುದೇ ಪ್ರಗತಿ ಇಲ್ಲದಿದ್ದರೆ, ಆರೋಗ್ಯ ಸಂಸ್ಥೆಗಳ ಸಿಬ್ಬಂದಿಯನ್ನು ಕಳಪೆ ಗುಣಮಟ್ಟದ ಆರೈಕೆ/ಚಿಕಿತ್ಸೆ ಇತ್ಯಾದಿಗಳಿಗೆ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸೂಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರವೇ ಅಡ್ಡಿ ಸೃಷ್ಟಿಸುತ್ತಿದೆ: DCM ಡಿ.ಕೆ. ಶಿವಕುಮಾರ್

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

SCROLL FOR NEXT