ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಕೊಲೆಯಾದ ಸ್ಥಿತಿಯಲ್ಲಿ 14 ವರ್ಷದ ಬಾಲಕಿ ಶವ ಪತ್ತೆ, ಅತ್ಯಾಚಾರ ಶಂಕೆ

ಬುಧವಾರ ಮಧ್ಯಾಹ್ನ 1 ರಿಂದ 2 ಗಂಟೆಯ ನಡುವೆ ಘಟನೆ ನಡೆದಿರುವ ಶಂಕೆಗಳ ವ್ಯಕ್ತವಾಗಿದೆ.

ಬೆಂಗಳೂರು: ರಾಮನಗರ ಜಿಲ್ಲೆಯ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 14 ವರ್ಷದ ಬಾಲಕಿಯ ಶವ ಬುಧವಾಹ ಪತ್ತೆಯಾಗಿದ್ದು, ಅತ್ಯಾಚಾರ ನಡೆಸಿ, ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಬಾಲಕಿ ಪೋಷಕರು ಕೊಪ್ಪಳ ಮೂಲದವರಾಗಿದ್ದು, ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆಂದು ತಿಳಿದುಬಂದಿದೆ.

ರಾಮನಗರ ಎಸ್‌ಪಿ ಆರ್ ಶ್ರೀನಿವಾಸ್ ಗೌಡ ಅವರು ಮಾತನಾಡಿ, ಬಾಲಕಿಯ ಪೋಷಕರು ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಕೊಲೆ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ. ಪ್ರಸ್ತುತ ಈ ಅಪರಾಧವನ್ನು ಕೊಲೆ ಪ್ರಕರಣವೆಂದು ಪರಿಗಣಿಸಲಾಗುತ್ತಿದ್ದು, ಕೊಲೆಗೆ ಮುನ್ನ ಆಕೆಯ ಮೇಲೆ ಅತ್ಯಾಚಾರ ನಡೆದಿದೆಯೇ ಎಂಬುದು ಮರಣೋತ್ತರ ಪರೀಕ್ಷೆಯ ನಂತರ ತಿಳಿದುಬರಲಿದೆ ಎಂದು ಹೇಳಿದ್ದಾರೆ.

ಬುಧವಾರ ಮಧ್ಯಾಹ್ನ 1 ರಿಂದ 2 ಗಂಟೆಯ ನಡುವೆ ಘಟನೆ ನಡೆದಿರುವ ಶಂಕೆಗಳಿವೆ. ಬಾಲಕಿ ಮನೆಯಲ್ಲಿ ಒಬ್ಬಂಟಿಯಾಗಿದ್ದು, ಈ ವೇಳೆ ಮನೆಗೆ ನುಗ್ಗಿರುವ ಆರೋಪಿಗಳು, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ನಂತರ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಗ್ಯಾಸ್ ಸಿಲಿಂಡರ್‌ನಿಂದ ತಲೆಗೆ ಹೊಡೆದು ಪರಾರಿಯಾಗಿದ್ದಾರೆಂದು ಶಂಕಿಸಲಾಗಿದೆ.

ಘಟನೆ ನಡೆದ ಸ್ವಲ್ಪ ಸಮಯದ ನಂತರ ಬಾಲಕಿಯ ಕಿರಿಯ ಸಹೋದರ ಮನೆಗೆ ಬಂದಿದ್ದು, ಸಹೋದರಿಯ ತಲೆಯಿಂದ ರಕ್ತಸ್ರಾವವಾಗುತ್ತಿರುವುದನ್ನು ಕಂಡು ಪೋಷಕರಿಗೆ ತಿಳಿಸಿದ್ದಾನೆ. ಕೂಡಲೇ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ, ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದ್ದು, ಆರೋಪಿಗಳು ದೃಶ್ಯಾವಳಿಗಳಲ್ಲಿ ಕಂಡು ಬಂದಿದ್ದಾರೆ. ಈ ಸಂಬಂಧ ಪೋಕ್ಸಾ ಕಾಯ್ದೆಯಡಡಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

12 ರೋಲ್ಸ್ ರಾಯ್ಸ್‌ ಸೇರಿ ಹಲವು ಐಷಾರಾಮಿ ಕಾರು, ಸಾವಿರಾರು ಕೋಟಿ ಒಡೆಯ ಸಿಜೆ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ಬೆಂಗಳೂರು: ಶೂಟ್ ಮಾಡಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿಜೆ ರಾಯ್ ಆತ್ಮಹತ್ಯೆ

ಮಹಾರಾಷ್ಟ್ರದ ನೂತನ ಉಪ ಮುಖ್ಯಮಂತ್ರಿಯಾಗಿ ಸುನೇತ್ರ ಪವಾರ್ ನಾಳೆ ಪ್ರಮಾಣ ವಚನ ಸ್ವೀಕಾರ : ಭುಜಬಲ್

ರಾಜ್ಯದ ಎಲ್ಲಾ ಬಸ್ ನಿಲ್ದಾಣ ಹಾಗೂ ಬಸ್​​ಗಳ ಮೇಲೆ ತಂಬಾಕು ಜಾಹೀರಾತು ನಿಷೇಧ

ರಾಹುಲ್ ಭೇಟಿ ಬೆನ್ನಲ್ಲೇ ತರೂರ್ 'ಸ್ಟಾರ್ ಪ್ರಚಾರಕ' ಎಂದು ಹೆಸರಿಸಿದ ಕಾಂಗ್ರೆಸ್!

SCROLL FOR NEXT