ಶೋಭಾ ಕರಂದ್ಲಾಜೆ 
ರಾಜ್ಯ

ಬೆಂಗಳೂರು ಉತ್ತರ ವಲಯದಲ್ಲಿ 3ನೇ ಪಾಸ್ ಪೋರ್ಟ್ ಸೇವಾ ಕೇಂದ್ರ ಸ್ಥಾಪನೆಗೆ ಶೋಭಾ ಕರಂದ್ಲಾಜೆ ಒತ್ತಾಯ!

ಲಾಲ್ ಬಾಗ್ ಮತ್ತು ಮಾರತ್ ಹಳ್ಳಿಯಲ್ಲಿರುವ ಪಾಸ್ ಪೋರ್ಟ್ ಸೇವಾ ಕೇಂದ್ರಗಳಲ್ಲಿ ತೀವ್ರ ಜನ ದಟ್ಟಣೆ ಇದ್ದು, ಧೀರ್ಘ ಹೊತ್ತು ಸರತಿ ಸಾಲಿನಲ್ಲಿ ಕಾಯಬೇಕಾಗಿದೆ.

ಬೆಂಗಳೂರು: ನಗರದ ಉತ್ತರ ವಲಯದಲ್ಲಿ ಹೆಚ್ಚುತ್ತಿರುವ ಬೇಡಿಕೆ ಈಡೇರಿಸಲು ಮೂರನೇ ಪಾಸ್ ಪೋರ್ಟ್ ಸೇವಾ ಕೇಂದ್ರ ಸ್ಥಾಪಿಸಬೇಕು ಎಂದು ಕೇಂದ್ರ ಉದ್ಯೋಗ ಮತ್ತು ಎಂಎಸ್ ಎಂಇ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಕೇಂದ್ರ ವಿದೇಶಾಂಗ ಸಚಿವಾಲಯಕ್ಕೆ ಮನವಿ ಮಾಡಿದ್ದಾರೆ.

ಈ ಸಂಬಂಧ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಮಂಗಳವಾರ ಪತ್ರ ಬರೆದಿರುವ ಶೋಭಾ ಕರಂದ್ಲಾಜೆ, ಲಾಲ್ ಬಾಗ್ ಮತ್ತು ಮಾರತ್ ಹಳ್ಳಿಯಲ್ಲಿರುವ ಪಾಸ್ ಪೋರ್ಟ್ ಸೇವಾ ಕೇಂದ್ರಗಳಲ್ಲಿ ತೀವ್ರ ಜನ ದಟ್ಟಣೆ ಇರಲಿದ್ದು, ಧೀರ್ಘ ಹೊತ್ತು ಸರತಿ ಸಾಲಿನಲ್ಲಿ ಕಾಯಬೇಕಾಗಿದೆ ಎಂದಿದ್ದಾರೆ.

ಎರಡೂ ಕೇಂದ್ರಗಳು ಅರ್ಜಿದಾರರಿಂದ ತುಂಬಿದ್ದು, ತೀವ್ರ ವಿಳಂಬಕ್ಕೆ ಕಾರಣವಾಗುತ್ತಿದೆ. ಅಲ್ಲದೇ ಬೆಂಗಳೂರು ಉತ್ತರ ವಲಯ ನಿವಾಸಿಗಳಿಗೆ ತೊಂದರೆಯಾಗುತ್ತಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಬೆಂಗಳೂರು ಉತ್ತರ ವಲಯದಲ್ಲಿ ಹೊಸದಾದ ಪಾಸ್ ಪೋರ್ಟ್ ಸೇವಾ ಕೇಂದ್ರ ಸ್ಥಾಪನೆಯಿಂದ ಜನದಟ್ಟಣೆ ಕಡಿಮೆ ಆಗಲಿದೆ ಮತ್ತು ಹೊಸ ಅರ್ಜಿ ಸ್ವೀಕಾರ, ನವೀಕರಣ ಮತ್ತು ದಾಖಲಾತಿ ಅಪ್ ಡೇಟ್ ಗಳು ಸೇರಿದಂತೆ ಪಾಸ್ ಪೋರ್ಟ್ ಸಂಬಂಧಿತ ಸೇವೆಗಳಲ್ಲಿ ಸುಧಾರಣೆಯಾಗಲಿದೆ ಎಂದು ಅವರು ಹೇಳಿದ್ದಾರೆ.

ಈ ಮಧ್ಯೆ ರಾಜ್ಯದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಪತ್ರ ಬರೆದಿರುವ ಶೋಭಾ ಕರಂದ್ಲಾಜೆ, ನೈಸ್ ರಸ್ತೆಯಲ್ಲಿ ಜುಲೈ 1ರಿಂದ ಜಾರಿಗೆ ಬಂದಿರುವ ಪರಿಷ್ಕೃತ ದರವನ್ನು ಪುನರ್ ಪರಿಶೀಲಿಸಬೇಕಾಗಿದೆ ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

PM Modi's I-Day speech: 'ನಮ್ಮ ಕನಸು, ಸಂಕಲ್ಪಗಳು ದೊಡ್ಡದಾಗಿರಬೇಕು; 2047ರ ವೇಳೆಗೆ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರ ಮಾಡಿಯೇ ತೀರುತ್ತೇವೆ: ಪ್ರಧಾನಿ ಮೋದಿ-Video

80th Independence Day|ಯುವಜನತೆ ಸಾಮರ್ಥ್ಯವನ್ನು ರಾಷ್ಟ್ರ ನಿರ್ಮಾಣಕ್ಕೆ ಬಳಸಿಕೊಳ್ಳಲಾಗುವುದು: ಪ್ರಧಾನಿ ಮೋದಿ-Video

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ- ಸ್ವಾತಂತ್ರ್ಯ ದಿನದ ಹಿನ್ನೆಲೆ ದೇಶವನ್ನುದ್ದೇಶಿಸಿ ರಾಷ್ಟ್ರಪತಿ ಮುರ್ಮು ಮಾತು

ಬೆಂಗಳೂರು: ಟೆಕ್ಕಿ ಪತ್ನಿ ಹತ್ಯೆಗೈದು ತಾನೂ ನೇಣಿಗೆ ಶರಣಾದ ಇಂಜಿನಿಯರ್; ತಾಯಿಗೆ ಕಳಿಸಿದ್ದ ವಾಯ್ಸ್ ಮೆಸೇಜ್‌ನಲ್ಲಿ ಸ್ಫೋಟಕ ಕಾರಣ ಬಹಿರಂಗ!

ರಾಜ್ಯ ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್: ವೇತನ ಹಿಂಬಾಕಿ ಬಿಡುಗಡೆ