ಬಂಧಿತ ವಿಜಯಕುಮಾರ್ ಮಿರಿಯಾಲ ಹಾಗೂ ಇತರ ಆರೋಪಿಗಳು 
ರಾಜ್ಯ

ವಿಜಯಪುರ ಕೆನರಾ ಬ್ಯಾಂಕ್ ದರೋಡೆ ಪ್ರಕರಣ: ಮತ್ತೆ 12 ಜನರ ಬಂಧನ

ಕಳೆದ ತಿಂಗಳು ವಶಕ್ಕೆ ಪಡೆದಿದ್ದ ಮಾಜಿ ಶಾಖಾ ವ್ಯವಸ್ಥಾಪಕ ವಿಜಯಕುಮಾರ್ ಮಿರಿಯಾಲ ಸೇರಿದಂತೆ ಮೂವರು ಆರೋಪಿಗಳ ವಿಚಾರಣೆಯ ನಂತರ ಈಗ ಮತ್ತೆ 12 ಆರೋಪಿಗಳನ್ನು ಬಂಧಿಸಲಾಗಿದೆ.

ವಿಜಯಪುರ: ವಿಜಯಪುರ ಜಿಲ್ಲೆಯ ಕೆನರಾ ಬ್ಯಾಂಕಿನ ಮನಗೂಳಿ ಶಾಖೆಯಲ್ಲಿ 53.26 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ನಗದು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 12 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಕಳೆದ ತಿಂಗಳು ವಶಕ್ಕೆ ಪಡೆದಿದ್ದ ಮಾಜಿ ಶಾಖಾ ವ್ಯವಸ್ಥಾಪಕ ವಿಜಯಕುಮಾರ್ ಮಿರಿಯಾಲ ಸೇರಿದಂತೆ ಮೂವರು ಆರೋಪಿಗಳ ವಿಚಾರಣೆಯ ನಂತರ ಈಗ ಮತ್ತೆ 12 ಆರೋಪಿಗಳನ್ನು ಬಂಧಿಸಲಾಗಿದೆ.

ಇದರೊಂದಿಗೆ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಪೊಲೀಸರು ಇಲ್ಲಿಯವರೆಗೆ 39.26 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದ್ದಾರೆ. ಇದರಲ್ಲಿ 39 ಕೆಜಿ ಕರಗಿದ ಚಿನ್ನ 1.16 ಕೋಟಿ ರೂ. ನಗದು ಮತ್ತು ಐದು ಕಾರುಗಳು ಸೇರಿವೆ ಎಂದು ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ತಿಳಿಸಿದ್ದಾರೆ.

ಕಳೆದ ಮೇ 25 ರಂದು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನಲ್ಲಿರುವ ಕೆನರಾ ಬ್ಯಾಂಕಿನ ಮನಗೂಳಿ ಶಾಖೆಯಲ್ಲಿ ದರೋಡೆ ನಡೆದಿದ್ದು, ಇಲ್ಲಿ ಮಿರಿಯಾಲ ಈ ಹಿಂದೆ ಶಾಖಾ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ್ದರು.

ಬ್ಯಾಂಕ್ ಲಾಕರ್‌ನಿಂದ 53.26 ಕೋಟಿ ರೂ. ಮೌಲ್ಯದ 58.97 ಕೆಜಿ ಚಿನ್ನಾಭರಣ ಮತ್ತು 5.2 ಲಕ್ಷ ರೂ. ನಗದು ಕಳವು ಮಾಡಲಾಗಿದೆ ಎಂದು ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Indian Stock Market: ರಕ್ತಪಾತ.. ಒಂದೇ ಗಂಟೆಯಲ್ಲಿ ಹೂಡಿಕೆದಾರರಿಗೆ 7,60,00,00,00,000 ನಷ್ಟ!

North Korea Election: ಇತಿಹಾಸದಲ್ಲೇ ಮೊದಲು, Kim Jong Un ವಿರುದ್ಧ ಮತ ಚಲಾವಣೆ, ಆದರೂ ಶೇ. 99.99% ಮತದಾನ.. ಸರ್ವಾಧಿಕಾರಿಗೆ ಭರ್ಜರಿ ಜಯ

ಯುದ್ಧ ನಮ್ಮದಲ್ಲ: ಶಶಿತರೂರ್ ಬಳಿಕ ಮೋದಿ ಸರ್ಕಾರವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್ ನಾಯಕ ಮನೀಶ್ ತಿವಾರಿ

ಭಾರತ- ಪಾಕಿಸ್ತಾನದ ಸಂಘರ್ಷ ಅಣ್ವಸ್ತ್ರದ ಅಪಾಯದಲ್ಲೇ ಇದೆ, ಪಾಕ್ ನಿಂದ ನಮಗೂ ಅಪಾಯ ತಪ್ಪಿದ್ದಲ್ಲ: ಅಮೆರಿಕ

ಸಮುದ್ರದಲ್ಲೇ ಬಿಗ್ ಡೀಲ್‌: ಚೀನಾದತ್ತ ಹೊರಟಿದ್ದ ರಷ್ಯಾದ ತೈಲ ನೌಕೆ ಭಾರತಕ್ಕೆ ಯು-ಟರ್ನ್!

SCROLL FOR NEXT