ಬಂಧನ online desk
ರಾಜ್ಯ

ತಾವರೆಕೆರೆ ಅಪ್ರಾಪ್ತ ಬಾಲಕಿ ಅತ್ಯಾಚಾರ-ಕೊಲೆ ಪ್ರಕರಣ: ಕಾರ್ಪೆಂಟರ್ ಬಂಧನ

ಮಾದಕ ವಸ್ತುವಿನ ಪ್ರಭಾವದಲ್ಲಿ ಆರೋಪಿ ಅಪರಾಧ ಎಸಗಿದ್ದಾನೆನ್ನಲಾಗಿದೆ. ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಆರೋಪಿ, ನಂತರ ಆಕೆಯ ತಲೆಗೆ ಸಿಲಿಂಡಲ್ ನಿಂದ ಹೊಡೆದು, ಹತ್ಯೆ ಮಾಡಿದ್ದಾನೆ.

ಬೆಂಗಳೂರು: ತಾವರೆಕೆರೆಯಲ್ಲಿ ವರದಿಯಾಗಿದ್ದ ಅಪ್ರಾಪ್ತ ಬಾಲಕಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.

ಯಲ್ಲಪ್ಪ (22) ಬಂಧಿತ ಆರೋಪಿ. ಬಾಲಕಿಯ ಮನೆಯ ಬಳಿ ಕೆಲಸ ಮಾಡುತ್ತಿದ್ದ ಆರೋಪಿ ಆಕೆಯ ಚಲನವಲನಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದ.

ಬಾಲಕಿಯ ಪೋಷಕರು ಕಟ್ಟಡ ನಿರ್ಮಾಣ ಕಾರ್ಮಿಕರಾಗಿದ್ದು, ಪ್ರತಿದಿನ ಬೆಳಿಗ್ಗೆ 8 ಗಂಟೆ ಸುಮಾರಿಗೆ ಕೆಲಸಕ್ಕೆಂದು ಮನೆಯಿಂದ ಹೊರಡುತ್ತಿದ್ದರು. ಬಾಲಕಿ 6ನೇ ತರಗತಿಯ ಶಾಲೆಗೆ ಹೋಗುವುದನ್ನು ನಿಲ್ಲಿಸಿದ್ದಳು. ಇನ್ನು ಬಾಲಕಿಯ ಸಹೋದರರು ಶಾಲೆಗೆ ಹೋಗುತ್ತಿದ್ದ ಹಿನ್ನೆಲೆಯಲ್ಲಿ ಮನೆಯಲ್ಲಿ ಬಾಲಕಿ ಒಬ್ಬಂಟಿಯಾಗಿರುವುದನ್ನು ಆರೋಪಿ ಕಂಡುಕೊಂಡಿದ್ದ,

ಮಾದಕ ವಸ್ತುವಿನ ಪ್ರಭಾವದಲ್ಲಿ ಆರೋಪಿ ಅಪರಾಧ ಎಸಗಿದ್ದಾನೆನ್ನಲಾಗಿದೆ. ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಆರೋಪಿ, ನಂತರ ಆಕೆಯ ತಲೆಗೆ ಸಿಲಿಂಡಲ್ ನಿಂದ ಹೊಡೆದು, ಹತ್ಯೆ ಮಾಡಿದ್ದಾನೆ. ನಂತರ ಸಿಲಿಂಡರ್'ನ್ನು ಹೊತ್ತೊಯ್ದಿದ್ದು, ತಾವರೆಕೆರೆಯಲ್ಲಿ ಅದನ್ನು ಮಾರಾಟ ಮಾಡಿದ್ದಾನೆ ಎನ್ನಲಾಗಿದೆ.

ಬುಧವಾರ ಮಧ್ಯಾಹ್ನ 1 ರಿಂದ 2 ಗಂಟೆಯ ನಡುವೆ ಈ ಘಟನೆ ನಡೆದಿದೆ. ಬಾಲಕಿಯ ಸಹೋದರ ಶಾಲೆಯಿಂದ ಮನೆಗೆ ಹಿಂದಿರುಗಿದ ನಂತರ ಘಟನೆ ಬೆಳಕಿಗೆ ಬಂದಿದೆ.

ಘಟನಾ ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಪೊಲೀಸರು ಬುಧವಾರ ರಾತ್ರಿ ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರು: ಶೂಟ್ ಮಾಡಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿಜೆ ರಾಯ್ ಆತ್ಮಹತ್ಯೆ

ರಾಜ್ಯದ ಎಲ್ಲಾ ಬಸ್ ನಿಲ್ದಾಣ ಹಾಗೂ ಬಸ್​​ಗಳ ಮೇಲೆ ತಂಬಾಕು ಜಾಹೀರಾತು ನಿಷೇಧ

ಮಗನಿಂದಲೇ ತಂದೆ-ತಾಯಿ, ಸಹೋದರಿಯ ಕೊಲೆ! ಮಿಸ್ಸಿಂಗ್ ಕೇಸ್ ನಾಟಕ, ರಹಸ್ಯ ಬಹಿರಂಗ!

ಲಂಚ ಪಡೆವಾಗ ಲೋಕಾಯುಕ್ತ ದಾಳಿ: ಇನ್ಸ್ ಪೆಕ್ಟರ್ ಹೈಡ್ರಾಮಾ, ಪೊಲೀಸರ ವಿರುದ್ಧವೇ ಕೂಗಾಡಿ ರಂಪಾಟ, Video Viral

ಶಿಡ್ಲಘಟ್ಟ ಪೌರಾಯುಕ್ತೆಗೆ ಧಮ್ಕಿ ಪ್ರಕರಣ: ರಾಜೀವ್ ಗೌಡಗೆ ಜಾಮೀನು ಮಂಜೂರು

SCROLL FOR NEXT