ಕರ್ನಾಟಕ ಹೈಕೋರ್ಟ್ 
ರಾಜ್ಯ

ಶರಾವತಿ ಹಿನ್ನೀರಿನ ಸೇತುವೆಗೆ BSY ಹೆಸರು: ಕೇಂದ್ರ-ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

ಸೇತುವೆಗೆ ಮಾಜಿ ಸಿಎಂ ಯಡಿಯೂರಪ್ಪ ಹೆಸರು ಇಡಲು ಅನುಮತಿ ನೀಡವಂತೆ ಕೇಂದ್ರ ಸರಕಾರಕ್ಕೆ ನಿರ್ದೇಶನ ಕೋರಿ ಶಿವಮೊಗ್ಗದ ಕೆ.ಹರನಾಥರಾವ್ ಎಂಬವರು ರಿಟ್ ಅರ್ಜಿ ಸಲ್ಲಿಸಿದ್ದರು.

ಬೆಂಗಳೂರು: ಸಾಗರ ತಾಲ್ಲೂಕಿನ ಶರಾವತಿ ಹಿನ್ನೀರಿನಲ್ಲಿ ನಿರ್ಮಿಸಲಾದ ಕೇಬಲ್-ಸ್ಟೇಡ್ ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೆಸರಿಡುವ ವಿಚಾರಕ್ಕೆ ಸಂಬಂಧಿದಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ.

ಸೇತುವೆಗೆ ಮಾಜಿ ಸಿಎಂ ಯಡಿಯೂರಪ್ಪ ಹೆಸರು ಇಡಲು ಅನುಮತಿ ನೀಡವಂತೆ ಕೇಂದ್ರ ಸರಕಾರಕ್ಕೆ ನಿರ್ದೇಶನ ಕೋರಿ ಶಿವಮೊಗ್ಗದ ಕೆ.ಹರನಾಥರಾವ್ ಎಂಬವರು ರಿಟ್ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ನ್ಯಾಯಮೂರ್ತಿ ಎಸ್ ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ರಾಜ್ಯ ಸರ್ಕಾರದ ಮೇಲ್ಮೈ ಸಾರಿಗೆ ಸಚಿವಾಲಯ, ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಮತ್ತು ಅದರ ರಾಷ್ಟ್ರೀಯ ಹೆದ್ದಾರಿ ವಿಭಾಗಕ್ಕೆ ನೋಟಿಸ್ ಜಾರಿ ಮಾಡಿದೆ.

ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ನಾಮಕರಣ ಮಾಡಬೇಕು ಎಂದು ಕೋರಿ ಜುಲೈ 7ರಂದು ಕೇಂದ್ರ ಭೂಸಾರಿಗೆ ಇಲಾಖೆ ಮತ್ತು ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್​​ಗೆ ಮನವಿ ಸಲ್ಲಿಸಲಾಗಿದೆ. ಆದರೆ, ಮನವಿಗೆ ಸಂಬಂಧಿಸಿದಂತೆ ಈವರೆಗೂ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ. ಪರಿಣಾಮವಾಗಿ ಅರ್ಜಿಯನ್ನು ಸಲ್ಲಿಸುತ್ತಿದ್ದು, ಮನವಿಯನ್ನು ಪರಿಗಣಿಸಲು ಸೂಚನೆ ನೀಡಿಬೇಕು ಎಂದು ಅರ್ಜಿದಾರರು ಕೋರಿದ್ದರು.

ವಾದ ಆಲಿಸಿದ ನ್ಯಾಯಪೀಠ, ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಜುಲೈ 17ಕ್ಕೆ ಮುಂದೂಡಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ, ನೊಬೆಲ್​ ಶಾಂತಿ ಪ್ರಶಸ್ತಿಗೆ ನನ್ನಷ್ಟು ಅರ್ಹರು ಯಾರೂ ಇಲ್ಲ; ಡೊನಾಲ್ಡ್ ಟ್ರಂಪ್

ಡಿ-ಕೋಡ್: ದ್ವೇಷ ಭಾಷಣ ಮಸೂದೆ ಎಂಬ ‘ಗರಗಸ’; DDT ಆಗುವತ್ತ ಕರ್ನಾಟಕ ಸರ್ಕಾರ

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಮಸೂದೆ ವಿರುದ್ಧ ರಾಷ್ಟ್ರಪತಿಗೆ ನಿಯೋಗ; ರಾಜ್ಯ ಸರ್ಕಾರ

WPL 2026: ಮೊದಲ ಪಂದ್ಯದಲ್ಲೇ ಸಿನಿಮಾ ತೋರಿಸಿದ RCB, 4 ಎಸೆತಗಳಲ್ಲಿ 20 ರನ್! ಹೀರೋ ಆದ Nadine de Klerk!

SCROLL FOR NEXT