ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕಾರ್ಖಾನೆ ಮಾಲೀಕರ ಮೇಲೆ ಹಲ್ಲೆ, ದರೋಡೆ; ಮೂವರ ಬಂಧನ

ಕೆಂಗೇರಿ ಬಳಿಯ ತಗಚಕುಪ್ಪೆ ಗ್ರಾಮದ ಪಿಂಟೂ ಬಾರ್ ಬಳಿ ಆರೋಪಿಗಳು ವ್ಯಕ್ತಿ ಮೇಲೆ ದಾಳಿ ನಡೆಸಿದ್ದು, ಜೇಬಿನಲ್ಲಿದ್ದ ಹಣ ಹಾಗೂ ಮೊಬೈಲ್ ಫೋನ್ ದರೋಡೆ ಮಾಡಿ ಪರಾರಿಯಾಗಿದ್ದಾರೆ.

ಬೆಂಗಳೂರು: ಕಾರ್ಖಾನೆ ಮಾಲೀಕರ ಮೇಲೆ ಹಲ್ಲೆ ನಡೆಸಿ, ದರೋಡೆ ಮಾಡಿದ ಮೂವರು ಆರೋಪಿಗಳನ್ನು ಕಗ್ಗಲಿಪುರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಮೊಹ್ಸಿನ್ ಪಾಷಾ (27) ಹಲ್ಲೆಗೊಳಗಾದ ವ್ಯಕ್ತಿ. ಬಂಧಿತರನ್ನು ಇರ್ಫಾನ್, ರಿಜ್ವಾನ್ ಮತ್ತು ಮುಝುದ್ದೀನ್ ಖಾನ್ ಎಂದು ಗುರ್ತಿಸಲಾಗಿದೆ. ಮೂವರು ಆರೋಪಿಗಳು ಕೆಂಗೇರಿ ನಿವಾಸಿಗಳಾಗಿದ್ದಾರೆಂದು ತಿಳಿದುಬಂದಿದೆ.

ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಆಹಾರ ತರಲು ಹೊರ ಹೋಗಿದ್ದಾಗ ಸೋಮವಾರ ರಾತ್ರಿ 10.30 ರಿಂದ 10.40 ರ ನಡುವೆ ಘಟನೆ ನಡೆದಿದೆ.

ಕೆಂಗೇರಿ ಬಳಿಯ ತಗಚಕುಪ್ಪೆ ಗ್ರಾಮದ ಪಿಂಟೂ ಬಾರ್ ಬಳಿ ಆರೋಪಿಗಳು ವ್ಯಕ್ತಿ ಮೇಲೆ ದಾಳಿ ನಡೆಸಿದ್ದು, ಜೇಬಿನಲ್ಲಿದ್ದ ಹಣ ಹಾಗೂ ಮೊಬೈಲ್ ಫೋನ್ ದರೋಡೆ ಮಾಡಿ ಪರಾರಿಯಾಗಿದ್ದಾರೆ.

ಘಟನೆ ಬಳಿಕ ವ್ಯಕ್ತಿ ಮಂಗಳವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ದೂರು ದಾಖಲಾಗಿದೆ. ಎರಡು ಪ್ರತ್ಯೇಕ ದ್ವಿಚಕ್ರ ವಾಹನಗಳಲ್ಲಿ ಬಂದ ನಾಲ್ವರು ಆರೋಪಿಗಳು ನನ್ನನ್ನು ತಡೆದರು. ಈ ವೇಳೆ ಮಾತಿನ ಚಕಮಕಿ ನಡೆಸಿದಾಗ ಚಾಕುವಿನಿಂದ ಹಲ್ಲೆ ನಡೆಸಿ, ಮೊಬೈಲ್ ಫೋನ್ ಹಾಗೂ 14,000ರೂ ಗಳೊಂದಿಗೆ ಪರಾರಿಯಾದರು ಎಂದ ವ್ಯಕ್ತಿ ಹೇಳಿಕೊಂಡಿದ್ದಾರೆ.

ಘಟನೆ ಬಳಿಕ ಸಹೋದರ ಹಾಗೂ ಸಂಬಂಧಿಕರು ನನ್ನನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ಆಸ್ಪತ್ರೆಯ ಆಡಳಿತ ಮಂಡಳಿ ಪೊಲೀಸರಿಗೆ ಮಾಹಿತಿ ನೀಡಿದೆ.

ಘಟನೆ ಸಂಬಂಧ ಪೊಲೀಸರು ಮತ್ತೋರ್ವ ಆರೋಪಿಗಾಗು ಹುಡುಕಾಟ ಮುಂದುವರೆಸಿದ್ದಾರೆ. ಈ ಸಂಬಂಧ ಆರೋಪಿಗಳ ವಿರುದ್ಧ ಬಿಎನ್ಎಸ್ 309(6) (ದರೋಡೆ), ಬಿಎನ್ಎಸ್ 311 ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT