ಸಿಎಂ ಭೇಟಿಯಾದ ರೈತ ಮುಖಂಡರು 
ರಾಜ್ಯ

ದೇವನಹಳ್ಳಿ ಭೂ ಸ್ವಾಧೀನ ವಿರೋಧಿ ಹೋರಾಟದಲ್ಲಿ ಬಿರುಕು: 449 ಎಕರೆ ಜಮೀನು ನೀಡಲು ರೈತರು ಮುಂದು! ಕಾನೂನು ತಜ್ಞರೊಂದಿಗೆ ಸಿಎಂ ಚರ್ಚೆ

449 ಎಕರೆ ಭೂಮಿ ನೀಡಲು ಸಿದ್ಧವಿರುವುದಾಗಿ ದೇವನಹಳ್ಳಿ ತಾಲೂಕು, ಚನ್ನರಾಯಪಟ್ಟಣ ಹೋಬಳಿ ರೈತ ಹೋರಾಟ ಸಮಿತಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.

ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳಲ್ಲಿ 1,777 ಎಕರೆ ಭೂ ಸ್ವಾಧೀನ ವಿರೋಧಿ ಹೋರಾಟದಲ್ಲಿ ಬಿರುಕು ಕಾಣಿಸಿಕೊಂಡಿದೆ.

ಕೆಐಎಡಿಬಿಗೆ ಭೂ ಸ್ವಾಧೀನ ವಿರೋಧಿಸಿ ರೈತರು ಕಳೆದ 1,200 ದಿನಗಳಿಂದ ಧರಣಿ ನಡೆಸುತ್ತಿದ್ದರೂ ಇದೀಗ 449 ಎಕರೆ ಭೂಮಿ ನೀಡಲು ಸಿದ್ಧವಿರುವುದಾಗಿ ದೇವನಹಳ್ಳಿ ತಾಲೂಕು, ಚನ್ನರಾಯಪಟ್ಟಣ ಹೋಬಳಿ ರೈತ ಹೋರಾಟ ಸಮಿತಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.

ಸ್ವಾಧೀನಪಡಿಸಿಕೊಳ್ಳುವ ಪ್ರತಿ ಎಕರೆಗೆ ರೂ. 3.50 ಕೋಟಿ ದರ ನಿಗದಿ ಪಡಿಸಬೇಕು. ಜಮೀನು ಕಳೆದುಕೊಂಡ ರೈತ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನುಗುಣವಾಗಿ ಉದ್ಯೋಗ ನೀಡಬೇಕು. ಯಾವುದೇ ಕಾರಣಕ್ಕೂ ಹಸಿರು ವಲಯವಾಗಿ ಪರಿವರ್ತಿಸಬಾರದು. ಗ್ರಾಮದ ಅಕ್ಕಪಕ್ಕ ಉಳಿದ ಜಮೀನುಗಳನ್ನು ಹಳದಿ ವಲಯವನ್ನಾಗಿ ಪರಿವರ್ತಿಸಬೇಕು ಎಂಬ ಷರತ್ತು ಹಾಕಲಾಗಿದೆ.

ತದನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಭೂ ಸ್ವಾಧೀನ ಪ್ರಕ್ರಿಯೆ ವಿಷಯ ಕುರಿತು ಕಾನೂನು ತಜ್ಞರ ಜೊತೆಗೆ ಪೂರ್ವಭಾವಿ ಸಭೆ ನಡೆಸಿದ್ದಾರೆ. ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಪರ ಹಾಗೂ ವಿರೋಧದ ಎರಡು ಗುಂಪುಗಳಿದ್ದು, ಈ ಬಗ್ಗೆ ಒಮ್ಮತದ ನಿಲುವು ತೆಗೆದುಕೊಳ್ಳುವುದರ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಅಂತಿಮ ಅಧಿಸೂಚನೆ ಆಗಿರುವ ಹಿನ್ನೆಲೆಯಲ್ಲಿ ಮರಳಿಗೆ ರೈತರಿಗೆ ಭೂಮಿ ನೀಡಬೇಕಾದ ಸನ್ನಿವೇಶದಲ್ಲಿ ಡಿನೋಟಿಫೈ ಬಗ್ಗೆ ಕಾನೂನು ತಜ್ಞರ ಜೊತೆಗೆ ಚರ್ಚೆ ನಡೆಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಸಭೆಯಲ್ಲಿ ಸಚಿವರಾದ ಎಂ.ಬಿ. ಪಾಟೀಲ್, ಕೆ.ಎಚ್. ಮುನಿಯಪ್ಪ,ಬೈರತಿ ಸುರೇಶ್ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ. ಸಲೀಂ ಸೇರಿದಂತೆ ಹಲವು ಕಾನೂನು ತಜ್ಞರು ಭಾಗಿಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ಕರ್ನಾಟಕದ ಇತಿಹಾಸದಲ್ಲೇ ಮೊದಲು; ಪ್ರತಿಭಟಿಸುವುದಾದರೇ ಸದನದ ಬಾವಿಗೆ ಬನ್ನಿ: ವಿಪಕ್ಷ ಶಾಸಕರಿಗೆ ಸ್ಪೀಕರ್ ಆಹ್ವಾನ, BJP ಕಿಡಿ!

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸೌಧ ಆವರಣದಲ್ಲಿ ಪ್ರತಿಭಟನೆ, ಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ Video

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!